ಮಾಜಿ ಸಚಿವ ಕೆ ಸುಧಾಕರ್ ಗೆ ಕಾಂಗ್ರೆಸ್ ಸರ್ಕಾರದಿಂದ ಶಾಕ್..!

Facebook
Twitter
Telegram
WhatsApp

 

 

ರಾಜ್ಯ ಕಾಂಗ್ರೆಸ್ ಸರ್ಕಾರ ಇದೀಗ ಒಂದೊಂದೆ ನಿರ್ಧಾರವನ್ನು ಕೈಗೊಳ್ಳುತ್ತಿದೆ. ಅದರಲ್ಲಿ ಬಿಜೆಪಿ ಸರ್ಕಾರದ ಮಂಜೂರಾದ ಹಲವು ಯೋಜನೆಗಳಿಗೆ ಬ್ರೇಕ್ ಹಾಕಿದೆ. ಕೆಲ ಟೆಂಡರ್ ಗಳ ವಿಚಾರಕ್ಕೆ ಸಂಬಂಧಿಸಿದಂತೆ ತನಿಖೆಗೆ ಆದೇಶ ನೀಡಿದೆ. ಅದರಲ್ಲೂ ಮಾಜಿ ಸಚಿವ ಕೆ ಸುಧಾಕರ್ ಗೆ ಶಾಕ್ ನೀಡಿದೆ. ಬಿಜೆಪಿ ಸರ್ಕಾರದ ಅವಧಿಯಲ್ಲಿ ಕೆ ಸುಧಾಕರ್ ಸಚಿವರಾಗಿದ್ದರು. ಆಗ ಕೆಲವು ಟೆಂಡರ್ ಗಳಿಗೆ ಅನುಮತಿ ನೀಡಿದ್ದರು. ಇದೀಗ ಆ ಟೆಂಡರ್ ಗಳ ತನಿಖೆಗೆ ಸಿದ್ದರಾಮಯ್ಯ ಸರ್ಕಾರ ಒತ್ತಾಯಿಸಿದೆ.

ಈ ಸಂಬಂಧ ದಿನೇಶ್ ಗುಂಡೂರಾವ್ ಮಾಹಿತಿ ನೀಡಿದ್ದು, ಆರೋಗ್ಯ ಇಲಾಖೆಯನ್ನು ಕ್ಲೀನ್ ಮಾಡುವುದಾಗಿ ಸಿಎಂ ಸೂಚನೆ ನೀಡಿದ್ದಾರೆ. ಮಾಜಿ ಸಚಿವ ಸುಧಾಕರ್ ಅವರು ನೀಡಿದ ಬಹುತೇಕ ಟೆಂಡರ್ ಗಳನ್ನು ಸಿಎಂ ಸೂಚನೆ ಮೇರೆಗೆ ರದ್ದು ಮಾಡುತ್ತಿದ್ದೇವೆ. ಸುಧಾಕರ್ ಕಾಲದ ಟೆಂಡರ್ ಗಳಲ್ಲಿ ಬಹುತೇಕ ಕಿಕ್ ಬ್ಯಾಕ್ ಮತ್ತು ಭ್ರಷ್ಟಾಚಾರದ ಆರೋಪಗಳು ಕೇಳಿ ಬಂದಿವೆ.

ಈಗಾಗಲೇ ಕೆಲವು ಟೆಂಡರ್ ಗಳನ್ನು ಕ್ಯಾನ್ಸಲ್ ಮಾಡಿದ್ದೇವೆ. ಡಯಾಲಿಸಿಸ್ ಟೆಂಡರ್ ಕೂಡ ಕ್ಯಾನ್ಸಲ್ ಮಾಡಿದ್ದೇವೆ. 108 ಟೆಂಡರ್ ಕೂಡ ಕ್ಯಾನ್ಸಲ್ ಮಾಡಿದ್ದೇವೆ. ಸರಿಯಾದ ದಾರಿಯಲ್ಲಿ ಇಲಾಖೆಯನ್ನು ತರುವ ಕೆಲಸ ಮಾಡುತ್ತಿದ್ದೇವೆ ಎಂದು ಆರೋಗ್ಯ ಇಲಾಖೆಯಲ್ಲಿ ಸುಧಾರಣೆ ವಿಚಾರವಾಗಿ ದಿನೇಶ್ ಗುಂಡೂರಾವ್ ಮಾಹಿತಿ ನೀಡಿದ್ದಾರೆ.

Facebook
Twitter
Telegram
WhatsApp
suddionenews

suddionenews

Leave a Comment

Top Stories

ಹಿರಿಯೂರಿನಲ್ಲಿ ಜನತಾದರ್ಶನ ಕಾರ್ಯಕ್ರಮಕ್ಕೆ ಸಚಿವ ಡಿ. ಸುಧಾಕರ್ ಚಾಲನೆ : ಸಾರ್ವಜನಿಕರಿಂದ ಅಹವಾಲು ಸ್ವೀಕಾರ

  ಸುದ್ದಿಒನ್, ಹಿರಿಯೂರು, ಸೆಪ್ಟೆಂಬರ್.25 :  ನಗರದ ತಾಹಾ ಪ್ಯಾಲೇಸ್‌ನಲ್ಲಿ ಸೋಮವಾರ‌ ಜಿಲ್ಲಾ ಉಸ್ತುವಾರಿ ಸಚಿವರಾದ  ಡಿ. ಸುಧಾಕರ್ ಅವರ ಅಧ್ಯಕ್ಷತೆಯಲ್ಲಿ ಜಿಲ್ಲಾ ಮಟ್ಟದ ಜನತಾದರ್ಶನ ಕಾರ್ಯಕ್ರಮ ನೆಡಯಿತು. ಕಾರ್ಯಕ್ರಮದಲ್ಲಿ ಸಚಿವ ಡಿ. ಸುಧಾಕರ್

ಜನತಾ ದರ್ಶನದಲ್ಲಿ ವೇದಿಕೆಯಲ್ಲೇ ಕಿತ್ತಾಡಿಕೊಂಡ ಬಿಜೆಪಿ ಸಂಸದ ಹಾಗೂ ಕಾಂಗ್ರೆಸ್ ಶಾಸಕ..!

  ಕೋಲಾರ: ಇಂದು ಸಿದ್ದರಾಮಯ್ಯ ನೇತೃತ್ವದ ಸರ್ಕಾರದಲ್ಲಿ ಮಹತ್ವದ ಬೆಳವಣಿಗೆಯ ದಿನ. ರಾಜ್ಯಾದ್ಯಂತ ಒಂದೇ ದಿನ ಜನತಾ ದರ್ಶನ ಕಾರ್ಯಕ್ರಮ ನಡೆಯುತ್ತಿದೆ. ಆದರೆ ಈ ಕಾರ್ಯಕ್ರಮದಲ್ಲಿ ಬಿಜೆಪಿ ಸಂಸದ ಹಾಗೂ ಕಾಂಗ್ರೆಸ್ ಶಾಸಕ ತುಂಬಿದ

ನಾಳೆ ಬೆಂಗಳೂರು ಬಂದ್ ಏನಿರುತ್ತೆ..? ಏನಿರಲ್ಲ..?

  ಬೆಂಗಳೂರು: ತಮಿಳುನಾಡಿಗೆ ಕಾವೇರಿ ನೀರು ಹರಿಸುತ್ತಿರುವುದನ್ನು ಖಂಡಿಸಿ, ನಾಳೆ ಬೆಂಗಳೂರು ಬಂದ್ ಮಾಡಲು ರೈತ ಸಂಘಟನೆ, ಬಿಜೆಪಿ ನಾಯಕರು, ಕನ್ನಡಪರ ಸಂಘಟನೆ, ಜೆಡಿಎಸ್ ನಾಯಕರು ಸೇರಿದಂತೆ ಹಲವು ಸಂಘಟನೆಗಳು ನಿರ್ಧರಿಸಿವೆ. ಈಗಾಗಲೇ ಮಂಡ್ಯ

error: Content is protected !!