Kannada news ಚಿತ್ರದುರ್ಗ ದಾವಣಗೆರೆ ಬೆಂಗಳೂರು ರಾಜಕೀಯ ಚುನಾವಣೆ ಮಳೆ ಕ್ರಿಕೆಟ್ ಭಾರತ ಚಿನ್ನ ಬೆಳ್ಳಿ ಹವಾಮಾನ ಕ್ರಿಕೆಟ್  ಕನ್ನಡ ನ್ಯೂಸ್

ಚೈತ್ರಾ ಕುಂದಾಪುರ ಆಡಿಯೋದಲ್ಲಿ ಮಾಜಿ ಸಚಿವರ ಹೆಸರು ಬಹಿರಂಗ..!

---Advertisement---

 

ಬೆಂಗಳೂರು: ಎಂಎಲ್ಎ ಟಿಕೆಟ್ ಕೊಡಿಸುತ್ತೇನೆ ಎಂದು ಹೇಳಿ ಉದ್ಯಮಿ ಗೋವಿಂದ ಬಾಬು ಬಳಿ ಐದು ಕೋಟಿ ಹಣ ಪಡೆದ ಆರೋಪದ ಮೇಲೆ ಚೈತ್ರಾ ಕುಂದಾಪುರ ಸಿಸಿಬಿ ವಶದಲ್ಲಿದ್ದಾಳೆ. ಸಿಸಿಬಿ ಪೊಲೀಸರು ತನಿಖೆ ನಡೆಸುತ್ತಿದ್ದು, ಒಂದೊಂದೆ ವಿಚಾರಗಳು ಹೊರ ಬರುತ್ತಿವೆ. ಚೈತ್ರಾ ಯಾರ್ಯಾರದ್ದೋ ಜೊತೆಗೆ ಮಾತನಾಡಿರುವ ಆಡಿಯೋಗಳು ಲೀಕ್ ಆಗುತ್ತಿವೆ.

ಆ ಆಡಿಯೋದಲ್ಲಿ ಬಿಜೆಪಿ ಮಾಜಿ ಸಚಿವ ಸುನೀಲ್ ಕುಮಾರ್ ಹೆಸರು ಕೂಡ ಕೇಳಿ ಬಂದಿದೆ. ಚೈತ್ರಾ ಬೇರೆ ಪೊಲೀಸ್ ಕಸ್ಟಡಿಗೆ ಹೋಗುವ ಮುನ್ನ ಸ್ವಾಮೀಜಿಯ ಬಂಧನವಾದರೆ ದೊಡ್ಡ ದೊಡ್ಡವರ ಹೆಸರು ಹೊರಗೆ ಬರಲಿದೆ ಎಂದು ಬೇರೆ ಹೇಳಿದ್ದಳು. ಅದರ ಬೆನ್ನಲ್ಲೇ ಹಲವು ಹೆಸರುಗಳು ಕೇಳಿ ಬರುತ್ತಿವೆ.

ಈ ಸಂಬಂಧ ಕಾಂಗ್ರೆಸ್ ಟ್ವೀಟ್ ಮಾಡಿದೆ. ಬಿಜೆಪಿಯ ಟಿಕೆಟ್ ಹಗರಣದಲ್ಲಿ ದಿನಕ್ಕೊಂದೊಂದು ಹೆಸರು ಹೊರಬರುತ್ತಿವೆ, ಚೈನ್ ಚೈತ್ರಳ ಆಡಿಯೋದಲ್ಲಿ ಮಾಜಿ ಸಚಿವ ಸುನಿಲ್ ಕುಮಾರ್ ಅವರ ಹೆಸರು ಪ್ರಸ್ತಾಪವಾಗಿದೆ, ಸುನಿಲ್ ಕುಮಾರ್ ಅವರಿಗೂ ಚೈತ್ರಳಿಗೂ ಈ ಹಗರಣದಲ್ಲಿ ಇರುವ ಸಂಬಂಧವೇನು ಎಂಬುದು ಇನ್ನೂ ನಿಗೂಢ. ಬಿಜೆಪಿ ನಾಯಕರ ಹೆಸರುಗಳು ಕೇಳಿಬಂದರೂ @BJP4Karnataka ಇದಕ್ಕೂ ನಮಗೂ ಸಂಬಂಧವಿಲ್ಲ ಎನ್ನುತ್ತಿರುವುದೇಕೆ ? ಪಕ್ಷದ ಹೆಸರಲ್ಲೇ ವಂಚನೆ ನಡೆದಿದ್ದರೂ ಬಿಜೆಪಿ ದೂರು ದಾಖಲಿಸದೆ ಸುಮ್ಮನಿರುವುದೇಕೆ? ಎಂದು ಪ್ರಶ್ನಿಸಿದೆ.

suddionenews

ಕನ್ನಡ ಸುದ್ದಿಗಳ ವಿಶ್ವಾಸಾರ್ಹ ಮೂಲ — suddione.com ನಲ್ಲಿ ಓದಿ ರಾಷ್ಟ್ರೀಯ, ಅಂತರರಾಷ್ಟ್ರೀಯ, ರಾಜಕೀಯ, ಕ್ರೀಡೆ, ಮನರಂಜನೆ, ವಾಣಿಜ್ಯ, ಶಿಕ್ಷಣ ಮತ್ತು ತಂತ್ರಜ್ಞಾನಕ್ಕೆ ಸಂಬಂಧಿಸಿದ ಪ್ರತಿಯೊಂದು ಪ್ರಮುಖ ಅಪ್‌ಡೇಟ್. ನೀವು ಯಾವಾಗಲೂ ಅಪ್‌ಡೇಟ್ ಆಗಿರಲು ನಾವು ವೇಗವಾದ, ನಿಖರವಾದ ಮತ್ತು ನಿಷ್ಪಕ್ಷಪಾತವಾದ ಸುದ್ದಿಗಳನ್ನು ಸರಳ ಹಾಗೂ ಸ್ಪಷ್ಟ ಭಾಷೆಯಲ್ಲಿ ನೀಡುತ್ತೇವೆ. ಸಂಪಾದಕರು: ನಾಗೇಂದ್ರ ರೆಡ್ಡಿ ಪಿ.ಎಲ್

Join WhatsApp

Join Now

Join Telegram

Join Now

Leave a Comment

🏫 ಅಡ್ಮಿಷನ್ ಓಪನ್
🔒

ಇಂಡಿಯನ್ ಇಂಟರ್ ನ್ಯಾಷನಲ್ ಸ್ಕೂಲ್

ಸ್ವಾಗತ...