Kannada news ಚಿತ್ರದುರ್ಗ ದಾವಣಗೆರೆ ಬೆಂಗಳೂರು ರಾಜಕೀಯ ಚುನಾವಣೆ ಮಳೆ ಕ್ರಿಕೆಟ್ ಭಾರತ ಚಿನ್ನ ಬೆಳ್ಳಿ ಹವಾಮಾನ ಕ್ರಿಕೆಟ್  ಕನ್ನಡ ನ್ಯೂಸ್

ಬಿಜೆಪಿ ಸದಸ್ಯತಾ ಅಭಿಯಾನಕ್ಕೆ ಮಾಜಿ ಶಾಸಕ ಮಸಾಲ ಜಯರಾಮ್ ರಿಂದ ಚಾಲನೆ

---Advertisement---

ವರದಿ ಮತ್ತು ಫೋಟೋ ಕೃಪೆ
ರಂಗಸ್ವಾಮಿ, ಗುಬ್ಬಿ
ಮೊ : +91 99019 53364

ಸುದ್ದಿಒನ್, ಗುಬ್ಬಿ, ಸೆಪ್ಟೆಂಬರ್. 24 : ಕೇಂದ್ರ ಸರ್ಕಾರದ ಯೋಜನೆಗಳನ್ನು ಜನರಿಗೆ ತಲುಪಿಸುವ ನಿಟ್ಟಿನಲ್ಲಿ ಸದಸ್ಯತ್ವ ನೋಂದಣಿ ಅಭಿಯಾನವನ್ನು ಹಮ್ಮಿಕೊಳ್ಳಲಾಗಿದೆ ಎಂದು ನಿಕಟ ಪೂರ್ವ ತುರುವೇಕೆರೆ ಶಾಸಕ ಮಸಾಲ ಜಯರಾಮ್ ತಿಳಿಸಿದರು.

ತಾಲೂಕಿನ ಸಿ ಎಸ್ ಪುರ ಗ್ರಾಮದ ಎಸ್ ಎಲ್ ಎನ್ ಕಲ್ಯಾಣ ಮಂಟಪದಲ್ಲಿ ಬಿಜೆಪಿ ಸದಸ್ಯತ್ವ ಅಭಿಯಾನ 2024 ಚಾಲನೆ ನೀಡಿ ಮಾತನಾಡಿ, ಬಿಜೆಪಿ ಪಕ್ಷದ ಬಹಳ ಮಹತ್ವಪೂರ್ಣವಾದ ಅಭಿಯಾನವಾಗಿದ್ದು. ಕ್ಷೇತ್ರದಲ್ಲಿ 1 ಲಕ್ಷ ಸದಸ್ಯತ್ವ ಮಾಡುವ ಗುರಿಯನ್ನು ಇಟ್ಟುಕೊಂಡಿದ್ದು. ಹೋಬಳಿ ಭಾಗದ ಅಧ್ಯಕ್ಷರು ಪದಾಧಿಕಾರಿಗಳು ಸಹಕರಿಸಬೇಕು. ಸದಸ್ಯತ್ವ ಹೊಂದುವ ಮಾಹಿತಿಯನ್ನು ಅರ್ಥವಾಗುವ ರೀತಿಯಲ್ಲಿ ಜನರಿಗೆ ತಿಳಿಸಬೇಕು.

ಬಿಜೆಪಿ ಸದಸ್ಯತ್ವ ಪಡೆಯಲು 8800002024 ನಂಬರಿಗೆ ಮಿಸ್ ಕಾಲ್ ನೀಡಿ ಸದಸ್ಯತ್ವಕ್ಕಾಗಿ ಎಸ್ಎಂಎಸ್ ಮೂಲಕ ಸ್ವೀಕರಿಸಿದ ಲಿಂಕ್ ಬಳಸಿ ಪೂರ್ಣ ವಿವರವನ್ನು ಭರ್ತಿ ಮಾಡಿ ಎಸ್ಎಮ್ಎಸ್ ಮೂಲಕ ಸದಸ್ಯತ್ವದ ಪಡೆಯಬಹುದು. ಸ್ಮಾರ್ಟ್ ಫೋನ್ ಇಲ್ಲದಿದ್ದಲ್ಲಿ ಸದಸ್ಯತ್ವ ಹೊಂದಿದವರ ಸಹಾಯದ ಮೂಲಕ ಸದಸ್ಯತ್ವದ ಅರ್ಜಿಯ ಲಿಂಕ್ ಅನ್ನು ಕ್ಲಿಕ್ ಮಾಡಬಹುದು ಎಂದು ತಿಳಿಸಿದರು.

ಈ ವೇಳೆ ಮಂಡಲದ ಅಧ್ಯಕ್ಷ ಕೆವಿ ಮೃತ್ಯುಂಜಯ, ಭಾನುಪ್ರಕಾಶ್, ಜಿ ವಿ ಪ್ರಕಾಶ್, ಮಾದೇಶ್, ದಂಡಿನ ಶಿರ ಹೋಬಳಿ ಅಧ್ಯಕ್ಷ ಸಿದ್ದಪ್ಪಾಜಿ, ಲೋಕೇಶ್ ಮುಂತಾದವರಿದ್ದರು.

suddionenews

ಕನ್ನಡ ಸುದ್ದಿಗಳ ವಿಶ್ವಾಸಾರ್ಹ ಮೂಲ — suddione.com ನಲ್ಲಿ ಓದಿ ರಾಷ್ಟ್ರೀಯ, ಅಂತರರಾಷ್ಟ್ರೀಯ, ರಾಜಕೀಯ, ಕ್ರೀಡೆ, ಮನರಂಜನೆ, ವಾಣಿಜ್ಯ, ಶಿಕ್ಷಣ ಮತ್ತು ತಂತ್ರಜ್ಞಾನಕ್ಕೆ ಸಂಬಂಧಿಸಿದ ಪ್ರತಿಯೊಂದು ಪ್ರಮುಖ ಅಪ್‌ಡೇಟ್. ನೀವು ಯಾವಾಗಲೂ ಅಪ್‌ಡೇಟ್ ಆಗಿರಲು ನಾವು ವೇಗವಾದ, ನಿಖರವಾದ ಮತ್ತು ನಿಷ್ಪಕ್ಷಪಾತವಾದ ಸುದ್ದಿಗಳನ್ನು ಸರಳ ಹಾಗೂ ಸ್ಪಷ್ಟ ಭಾಷೆಯಲ್ಲಿ ನೀಡುತ್ತೇವೆ. ಸಂಪಾದಕರು: ನಾಗೇಂದ್ರ ರೆಡ್ಡಿ ಪಿ.ಎಲ್

Join WhatsApp

Join Now

Join Telegram

Join Now

Leave a Comment