Kannada news ಚಿತ್ರದುರ್ಗ ದಾವಣಗೆರೆ ಬೆಂಗಳೂರು ರಾಜಕೀಯ ಚುನಾವಣೆ ಮಳೆ ಕ್ರಿಕೆಟ್ ಭಾರತ ಚಿನ್ನ ಬೆಳ್ಳಿ ಹವಾಮಾನ ಕ್ರಿಕೆಟ್  ಕನ್ನಡ ನ್ಯೂಸ್

ಕಾಮಧೇನು ಕ್ರೆಡಿಟ್ ಕೋ-ಆಪರೇಟಿವ್ ಸೊಸೈಟಿಯ ನೂತನ ಶಾಖೆ ಉದ್ಘಾಟಿಸಿದ ಮಾಜಿ ಶಾಸಕ ಎಸ್.ಕೆ.ಬಸವರಾಜನ್

---Advertisement---

 

ವರದಿ ಮತ್ತು ಫೋಟೋ ಕೃಪೆ
ಕೆ.ಎಂ. ಮುತ್ತುಸ್ವಾಮಿ ಕಣ್ಣನ್,
ಮೊ : 78998 64552

ಸುದ್ದಿಒನ್, ಚಿತ್ರದುರ್ಗ, ಫೆಬ್ರವರಿ. 19 : ಮಧ್ಯಮ ವರ್ಗದವರ ಆಶಾಕಿರಣವಾಗಿರುವ ಸಹಕಾರಿ ಸಂಸ್ಥೆಗಳು ಪರಸ್ಪರ ನಂಬಿಕೆ ವಿಶ್ವಾಸವನ್ನು ಕಾಪಾಡಿಕೊಂಡು ವ್ಯವಹರಿಸಿದಾಗ ಮಾತ್ರ ಯಶಸ್ಸು ಕಾಣಲು ಸಾಧ್ಯ ಎಂದು ಮಾಜಿ ಶಾಸಕ ಎಸ್.ಕೆ.ಬಸವರಾಜನ್ ತಿಳಿಸಿದರು.

ರೈತ ಭವನ ಸಮೀಪ ಸೋಮವಾರ ಕಾಮಧೇನು ಕ್ರೆಡಿಟ್ ಕೋ-ಆಪರೇಟಿವ್ ಸೊಸೈಟಿಯ ಐದನೆ ಶಾಖೆ ಉದ್ಘಾಟಿಸಿ ಮಾತನಾಡಿದರು.

ಇಪ್ಪತ್ತು ವರ್ಷಗಳ ಇತಿಹಾಸವಿರುವ ಈ ಸಂಸ್ಥೆ ಎಲ್ಲಾ ವರ್ಗದವರಿಗೆ ಸಾಲ ಸೌಲಭ್ಯ ನೀಡುತ್ತ ಸಮಾಜಮುಖಿಯಾಗಿ ಕೆಲಸ ಮಾಡಿಕೊಂಡು ಬರುತ್ತಿದೆ. ಈ ಭಾಗದ ಜನರಿಗೆ ಇದರ ಪ್ರಯೋಜನ ಲಭಿಸಲಿ ಎಂದು ಹೇಳಿದರು.

ಕಾಮಧೇನು ಕ್ರೆಡಿಟ್ ಕೋ-ಆಪರೇಟಿವ್ ಸೊಸೈಟಿ ವ್ಯವಸ್ಥಾಪಕ ನಿರ್ದೇಶಕ ವೆಂಕಟಪ್ಪ ಮಾತನಾಡಿ ಗ್ರಾಹಕ ಸ್ನೇಹಿ ಯೋಜನೆಗಳನ್ನು ಈ ಸಂಸ್ಥೆ ಜಾರಿಗೆ ತಂದಿದ್ದು, ಲಾಭದ ಸಿಂಹಪಾಲು ಉಳಿತಾಯ ಮಾಡುವವರಿಗೆ ಸಿಗಲಿದೆ. ಸ್ವ-ಉದ್ಯೋಗ ಕೈಗೊಳ್ಳುವವರಿಗೆ ಸಾಲ ಸೌಲಭ್ಯ ದೊರಕಿಸಿ ಸಹಕಾರಿ ತತ್ವದಡಿಯಲ್ಲಿ ಮುನ್ನಡೆಯುತ್ತಿದೆ ಎಂದು ಮೆಚ್ಚುಗೆ ವ್ಯಕ್ತಪಡಿಸಿದರು.

ಶಾಖಾ ವ್ಯವಸ್ಥಾಪಕ ಶ್ರೀನಾಥ್ ಮಾತನಾಡುತ್ತ ಹದಿನೈದು ವರ್ಷಗಳ ಕಾಲ ಸಹಕಾರಿ ಕ್ಷೇತ್ರದಲ್ಲಿ ಅನುಭವವಿದ್ದು, ಈ ಭಾಗದ ಜನತೆಗೆ ಸೇವೆ ಒದಗಿಸುವ ಉದ್ದೇಶದಿಂದ ಇಲ್ಲಿ ನೂತನ ಶಾಖೆಯನ್ನು ಆರಂಭಿಸಿದ್ದು, ಅನುಕೂಲಕರ ಯೋಜನೆಗಳನ್ನು ಅನುಷ್ಟಾನಗೊಳಿಸುವುದಾಗಿ ಷೇರುದಾರರಿಗೆ ಭರವಸೆ ನೀಡಿದರು.

ಮೈಸೂರು, ರಾಮನಗರ, ಮಂಡ್ಯ, ದಾವಣಗೆರೆ, ಹುಬ್ಬಳ್ಳಿ ಶಾಖೆಯ ಸಿಬ್ಬಂದಿಗಳು ಹಾಗೂ ಷೇರುದಾರರು ಈ ಸಂದರ್ಭದಲ್ಲಿ ಹಾಜರಿದ್ದರು. ರಕ್ಷಾ ಪ್ರಾರ್ಥಿಸಿದರು, ಶಿವಾನಂದ್ ನಿರೂಪಿಸಿದರು.

 

suddionenews

ಕನ್ನಡ ಸುದ್ದಿಗಳ ವಿಶ್ವಾಸಾರ್ಹ ಮೂಲ — suddione.com ನಲ್ಲಿ ಓದಿ ರಾಷ್ಟ್ರೀಯ, ಅಂತರರಾಷ್ಟ್ರೀಯ, ರಾಜಕೀಯ, ಕ್ರೀಡೆ, ಮನರಂಜನೆ, ವಾಣಿಜ್ಯ, ಶಿಕ್ಷಣ ಮತ್ತು ತಂತ್ರಜ್ಞಾನಕ್ಕೆ ಸಂಬಂಧಿಸಿದ ಪ್ರತಿಯೊಂದು ಪ್ರಮುಖ ಅಪ್‌ಡೇಟ್. ನೀವು ಯಾವಾಗಲೂ ಅಪ್‌ಡೇಟ್ ಆಗಿರಲು ನಾವು ವೇಗವಾದ, ನಿಖರವಾದ ಮತ್ತು ನಿಷ್ಪಕ್ಷಪಾತವಾದ ಸುದ್ದಿಗಳನ್ನು ಸರಳ ಹಾಗೂ ಸ್ಪಷ್ಟ ಭಾಷೆಯಲ್ಲಿ ನೀಡುತ್ತೇವೆ. ಸಂಪಾದಕರು: ನಾಗೇಂದ್ರ ರೆಡ್ಡಿ ಪಿ.ಎಲ್

Join WhatsApp

Join Now

Join Telegram

Join Now

Leave a Comment

🏫 ಅಡ್ಮಿಷನ್ ಓಪನ್
🔒

ಇಂಡಿಯನ್ ಇಂಟರ್ ನ್ಯಾಷನಲ್ ಸ್ಕೂಲ್

ಸ್ವಾಗತ...