Warning: Undefined array key "options" in /home/nagendra/public_html/content/plugins/elementor-pro/modules/theme-builder/widgets/site-logo.php on line 124

ಚಿತ್ರದುರ್ಗದ ಮಾಜಿ ನಗರಸಭೆ ಅಧ್ಯಕ್ಷ ಕೇಶವಮೂರ್ತಿ ನಿಧನ

Facebook
Twitter
Telegram
WhatsApp

 

ಚಿತ್ರದುರ್ಗ, (ಮೇ.02) : ನಗರದ ರೈಲ್ವೆ ಸ್ಟೇಷನ್ ಬಳಿಯಿರುವ ಸದಾನಂದಯ್ಯ ಬಡಾವಣೆಯ ನಿವಾಸಿ, ಮಾಜಿ ನಗರಸಭೆ ಅಧ್ಯಕ್ಷ ಕೇಶವಮೂರ್ತಿ(61) ಇಂದು (ಮೇ.02) ರಾತ್ರಿ 9 ಗಂಟೆ ಸುಮಾರಿಗೆ ಅನಾರೋಗ್ಯದಿಂದ ನಿಧನರಾದರು.

ಅವಿವಾಹಿತರಾಗಿದ್ದ ಇವರು 6 ಮಂದಿ ಸಹೋದರ ಮತ್ತು 4 ಮಂದಿ ಸಹೋದರಿಯರು ಸೇರಿದಂತೆ ಅಪಾರ ಕುಟುಂಬ ವರ್ಗದವರನ್ನು ಅಗಲಿದ್ದಾರೆ. ಮೃತರ ಅಂತ್ಯಕ್ರಿಯೆಯನ್ನು ನಾಳೆ(ಮೇ.03) ಸದಾನಂದಯ್ಯ ಬಡಾವಣೆ ಸಮೀಪವಿರುವ ರುದ್ರಭೂಮಿಯಲ್ಲಿ ನೆರವೇರಿಸಲಾಗುವುದು ಎಂದು ಕುಟುಂಬದ ಮೂಲಗಳು ತಿಳಿಸಿವೆ.

2001 ರಲ್ಲಿ 8 ತಿಂಗಳುಗಳ ಕಾಲ ಚಿತ್ರದುರ್ಗ ನಗರಸಭೆಯ ಅಧ್ಯಕ್ಷರಾಗಿ ಸೇವೆ ಸಲ್ಲಿಸಿದ್ದರು.

ಸಂತಾಪ : ಕೇಶವಮೂರ್ತಿಯವರ ಅಗಲಿಕೆ ನೋವು ತಂದಿದೆ. ಅವರ ಆತ್ಮಕ್ಕೆ ಶಾಂತಿ ಸಿಗಲಿ,  ಅವರ ಅಗಲಿಕೆಯ ನೋವು ಭರಿಸುವ ಶಕ್ತಿಯನ್ನು ಕುಟುಂಬ ಸದಸ್ಯರು ಹಾಗೂ ಹಿತೈಷಿಗಳಿಗೆ ದೇವರು ನೀಡಲಿ ಎಂದು ಪ್ರಾರ್ಥಿಸುತ್ತೇನೆ ಎಂದು ಅವರ ಸಮಕಾಲೀನರಾದ ಹೆಚ್.ಜೆ. ಕೃಷ್ಣಮೂರ್ತಿ, ಹೆಚ್. ಮಂಜಪ್ಪ, ಬಿ.ಕಾಂತರಾಜ್, SBL ಮಲ್ಲಿಕಾರ್ಜುನ, ನಗರ ಸಭೆಯ ಮಾಜಿ ಅಧ್ಯಕ್ಷರುಗಳು, ಸದಸ್ಯರುಗಳು, ಹಿರಿಯ ಮುಖಂಡರು ಸೇರಿದಂತೆ ಜಿಲ್ಲೆಯ ಗಣ್ಯರು ಸಂತಾಪ ಸೂಚಿಸಿದ್ದಾರೆ.

Facebook
Twitter
Telegram
WhatsApp
suddionenews

suddionenews

Leave a Comment

Top Stories

ಚಳ್ಳಕೆರೆಯಲ್ಲಿ ಮತದಾನ ಮಾಡಿದ ಶತಾಯುಷಿ

ವರದಿ ಮತ್ತು ಫೋಟೋ ಕೃಪೆ ಸುರೇಶ್ ಬೆಳಗೆರೆ ಮೊ : 97398 75729 ಸುದ್ದಿಒನ್, ಚಿತ್ರದುರ್ಗ, ಏಪ್ರಿಲ್. 26 : ರಾಜ್ಯದಲ್ಲಿ ಇಂದು ಲೋಕಸಭಾ ಚುನಾವಣೆ  ಮತದಾನ ಪ್ರಕ್ರಿಯೆ ಭರದಿಂದ ಸಾಗುತ್ತಿದೆ. ಯುವಕ –

ಚಿತ್ರದುರ್ಗದಲ್ಲಿ‌ ಆರಂಭಗೊಂಡ ಮತದಾನ ಪ್ರಕ್ರಿಯೆ : ಬೆಳ್ಳಂಬೆಳಿಗ್ಗೆಯೇ ಸಾಲುಗಟ್ಟಿ ನಿಂತ ಮತದಾರರು

ಸುದ್ದಿಒನ್, ಚಿತ್ರದುರ್ಗ, ಏಪ್ರಿಲ್. 26 : ದೇಶದಾದ್ಯಂತ ನಡೆಯುತ್ತಿರುವ ಲೋಕಸಭಾ ಚುನಾವಣೆಯ ಎರಡನೇ ಹಂತದ ಮತದಾನ ಇಂದು ಆರಂಭವಾಗಿದೆ. ರಾಜ್ಯದ 14 ಕ್ಷೇತ್ರಗಳಲ್ಲಿ ಮೊದಲ ಹಂತದ ಮತದಾನ ಆರಂಭವಾಗಿದೆ. ಚಿತ್ರದುರ್ಗ ನಗರದ ವಿಪಿ ಬಡಾವಣೆಯ

ಮತ ಚಲಾಯಿಸಲು ಯಾವ ದಾಖಲೆಗಳು ಬೇಕು ? ಇಲ್ಲಿದೆ ಮಾಹಿತಿ…!

ಸುದ್ದಿಒನ್, ಚಿತ್ರದುರ್ಗ :  ಮತದಾನ ಮಾಡಲು ಮತದಾರನು ಎಪಿಕ್ (ಆಧಾರ್) ಕಾರ್ಡ್ ಇಲ್ಲವೆಂದು ಚಿಂತಿಸಬೇಕಿಲ್ಲಾ. ಪ್ರಜಾಪ್ರಭುತ್ವದ ಹಬ್ಬದಲ್ಲಿ ಯಾವೊಬ್ಬ ಮತದಾರನು ಮತದಾನದಿಂದ ವಂಚಿತರಾಗಬಾರದು ಎಂಬ ದೃಷ್ಠಿಯಿಂದ ಚುನಾವಣಾ ಆಯೋಗವು ಎಪಿಕ್ ಕಾರ್ಡ್ ಹೊರತುಪಡಿಸಿ 12

error: Content is protected !!