Warning: Undefined array key "options" in /home/nagendra/public_html/content/plugins/elementor-pro/modules/theme-builder/widgets/site-logo.php on line 124

ಮೋದಿಯವರಿಗೆ ಇರುವ ಗುಣ ನಮ್ಮಲ್ಲೂ ಬರಬೇಕು : ಮಾಜಿ ಪ್ರಧಾನಿ ದೇವೇಗೌಡ

Facebook
Twitter
Telegram
WhatsApp

ಬೆಂಗಳೂರು: ಪಂಚರಾಜ್ಯ ಚುನಾವಣೆಯ ಫಲಿತಾಂಶದ ಬೆನ್ನಲ್ಲೇ ಕರ್ನಾಟಕದಲ್ಲಿ ಅವಧಿಗೂ ಮುನ್ನವೇ ಚುನಾವಣೆ ನಡೆಯುತ್ತೆ ಎಂಬ ಊಹಾಫೊಹಾಗಳು ಹರಿದಾಡುತ್ತಿವೆ. ಈ ಸಂಬಂಧ ಮಾಜಿ ಪ್ರಧಾನಿ ದೇವೇವೌಡ ಅವರು ಪ್ರತಿಕ್ರಿಯೆ ನೀಡಿದ್ದಾರೆ.

ನಗರದಲ್ಲಿ ಮಾತನಾಡಿದ ಅವರು, ರಾಜ್ಯದಲ್ಲಿರುವ ಸರ್ಕಾರ ಚೆನ್ನಾಗಿಯೇ ಆಡಳಿತ ನಡೆಸುತ್ತಿದೆಯಲ್ವಾ..? ಹೀಗಿರುವಾಗ ಅವಧಿಗೂ ಮುನ್ನವೇ ಚುನಾವಣೆ ಯಾಕೆ ಬೇಕು ಎಂದು ಮಾಜಿ ಪ್ರಧಾನಿ ದೇವೇಗೌಡ ಅವರು ಪ್ರಶ್ನಿಸಿದ್ದಾರೆ.

ಚುನಾವಣೆ ಆದರೆ ಎದುರಿಸಲು ಸಿದ್ಧ, ಆದರೆ ಅದು ಅಷ್ಟು ಸುಲಭವಲ್ಲ. ಜೊತೆಗೆ ಚುನಾವಣೆಯಲ್ಲಿ ಯಶಸ್ವಿಯಾಗೋದು ಸುಲಭವಲ್ಲ. ಬಿ ಎಸ್ ಯಡಿಯೂರಪ್ಪ ಸಹ ಇದೇ ಮಾತನ್ನ ಹೇಳಿದ್ದಾರೆ.

ಕನ್ನಡಿಗ ಪ್ರಧಾನಿಯಾಗಿದ್ದನ್ನು ನೋಡಿ ಇವರಿಗೆ ಸಹಿಸಲು ಆಗಲಿಲ್ಲ. ನಾನು ಶಕ್ತಿ ಮೀರಿ ಪಕ್ಷ ಉಳಿಸುವ ಕೆಲಸ ಮಾಡುತ್ತೇನೆ. ಪ್ರಧಾನಿ ಮೋದಿ ನಿಷ್ಠೆಯಿಂದ ಚುನಾವಣೆ ಮಾಡುತ್ತಾರೆ. ನಾಲ್ಜು ದಿಕ್ಕಿನಿಂದಲೂ ಪಕ್ಷ ಅಧಿಕಾರಕ್ಕೆ ತರಲು ಪ್ರಯತ್ನಿಸಿದ್ದಾರೆ. ಮೋದಿಯವರಿಗೆ ಇರುವ ಗುಣ ನಮ್ಮಲ್ಲೂ ಬರಬೇಕು.

ಮುಂದಿನ ಚುನಾವಣೆಯಲ್ಲಿ ಎರಡು ಪಕ್ಷಗಳ ವಿರುದ್ಧ ಅಭ್ಯರ್ಥಿ ಹಾಕಲಾಗುತ್ತೆ. ಬೇರೆ ಪಕ್ಷದೊಂದಿಗೆ ಚುನಾವಣಾ ಪೂರ್ವ ಮೈತ್ರಿ ಇಲ್ಲ ಎಂದಿದ್ದಾರೆ. ಇನ್ನು ಸಿ ಎಂ ಇಬ್ರಾಹಿಂ ಜೆಡಿಎಸ್ ಸೇರುವ ಬಗ್ಗೆ ಮಾತನಾಡಿದ್ದು, ಈ ಬಗ್ಗೆ ಹಲವಯ ತಿಂಗಳಿನಿಂದ ಚರ್ಚೆ ನಡೆಯುತ್ತಲೆ ಇದೆ. ಆದರೇ ಈವರೆಗೆ ಸಿ ಎಂ ಇಬ್ರಾಹಿಂ ನನ್ನ ಜೊತೆ ಅಧಿಕೃತವಾಗಿ ಮಾತನಾಡಿಲ್ಲ ಎಂದಿದ್ದಾರೆ.

Facebook
Twitter
Telegram
WhatsApp
suddionenews

suddionenews

Leave a Comment

Top Stories

ಈಗ ನಡೆಯುತ್ತಿರುವ ಲೋಕಸಭಾ ಚುನಾವಣೆ ಎರಡನೇ ಸ್ವಾತಂತ್ರ್ಯ ಹೋರಾಟ : ಮುಖ್ಯಮಂತ್ರಿ ಸಿದ್ದರಾಮಯ್ಯ

  ಬೆಳಗಾವಿ , ಮೇ 05 : ಲೋಕಸಭಾ ಚುನಾವಣೆಯಲ್ಲಿ ಬಿಜೆಪಿಗೆ 400 ಸ್ಥಾನಗಳನ್ನು ನೀಡಿದರೆ ಸಂವಿಧಾನವನ್ನು ಬದಲಾವಣೆ ಮಾಡುವುದಾಗಿ ಬಿಜೆಪಿ ಹಾಗೂ ಆರ್ ಎಸ್ ಎಸ್ ಹೇಳುತ್ತಿದ್ದು, ಈ ಚುನಾವಣೆ ಎರಡನೇ ಸ್ವಾತಂತ್ರ್ಯ

ರೇವಣ್ಣ ಬಂಧನದ ಬೆನ್ನಲ್ಲೇ ದೂರು ನೀಡಲು ಬಂದ ಮೂವರು ಸಂತ್ರಸ್ತೆಯರು : ಮತ್ತಷ್ಟು ಸಂಕಷ್ಟ..!

ಬೆಂಗಳೂರು: ಮಹಿಳೆಯನ್ನು ಕಿಡ್ನ್ಯಾಪ್ ಮಾಡಿದ ಆರೋಪದ ಹಿನ್ನೆಲೆ ಮಾಜಿ ಸಚಿವ ಹೆಚ್ ಡಿ ರೇವಣ್ಣ ಅವರನ್ನು ಎಸ್ಐಟಿ ಪೊಲೀಸರು ಬಂಧಿಸಿದ್ದಾರೆ. ಸಂತ್ರಸ್ತೆಯೊಬ್ಬರು ದೂರು ನೀಡಿರುವುದು ಹಾಗೂ ಇನ್ನೊಬ್ಬ ಸಂತ್ರಸ್ತೆಯ ಮಗ ಕಿಡ್ನ್ಯಾಪ್ ಪ್ರಕರಣದಲ್ಲಿ ದೂರು

ಭಾಷಣದಲ್ಲಿ ಯಡವಟ್ಟು : ದಿಂಗಾಲೇಶ್ವರ ಸ್ವಾಮೀಜಿ ವಿರುದ್ಧ ಕುಮಾರಸ್ವಾಮಿ ದೂರು.. ಎಫ್ಐಆರ್ ದಾಖಲು..!

ಹುಬ್ಬಳ್ಳಿ: ಧಾರವಾಡ ಲೋಕಸಭಾ ಚುನಾವಣಾ ಕ್ಷೇತ್ರಕ್ಕೆ ಬಿಜೆಪಿ ಅದ್ಯಾವಾಗ ಮತ್ತೆ ಪ್ರಹ್ಲಾದ್ ಜೋಶಿ ಅವರಿಗೇನೆ ಟಿಕೆಟ್ ಕೊಟ್ಟಿತೇ ಅಂದಿನಿಂದಾನೇ ದಿಂಗಾಲೇಶ್ವರ ಸ್ವಾಮೀಜಿಗೆ ಬೇಸರ ಉಂಟಾಗಿತ್ತು. ಅಭ್ಯರ್ಥಿಯನ್ನು ಬದಲಾಯಿಸಿ ಎಂದು ಮನವಿ ಕೂಡ ಅಭ್ಯರ್ಥಿಯ ಬದಲಾವಣೆ

error: Content is protected !!