Kannada news ಚಿತ್ರದುರ್ಗ ದಾವಣಗೆರೆ ಬೆಂಗಳೂರು ರಾಜಕೀಯ ಚುನಾವಣೆ ಮಳೆ ಕ್ರಿಕೆಟ್ ಭಾರತ ಚಿನ್ನ ಬೆಳ್ಳಿ ಹವಾಮಾನ ಕ್ರಿಕೆಟ್  ಕನ್ನಡ ನ್ಯೂಸ್

ಮಾಜಿ ಪ್ರಧಾನಿ ಎಚ್.ಡಿ.ದೇವೇಗೌಡರ ಪತ್ನಿ ಚನ್ನಮ್ಮ ನಿಧನ : ಶಾಸಕ ಕೆ.ಸಿ. ವೀರೇಂದ್ರ ಪಪ್ಪಿ ಸಂತಾಪ

---Advertisement---

ಸುದ್ದಿಒನ್, ಚಿತ್ರದುರ್ಗ, ಜುಲೈ. 18 : ಮಾಜಿ ಪ್ರಧಾನಿಗಳಾದ ಹೆಚ್.ಡಿ. ದೇವೇಗೌಡ ಅವರ ಧರ್ಮಪತ್ನಿ ಶ್ರೀಮತಿ ಚೆನ್ನಮ್ಮ ಅವರ ನಿಧನದ ಸುದ್ದಿ ತಿಳಿದು ಮನಸ್ಸಿಗೆ ತೀವ್ರ ದುಃಖವಾಗಿದೆ ಎಂದು ಶಾಸಕ ಕೆ.ಸಿ. ವೀರೇಂದ್ರ ಪಪ್ಪಿ ಸಂತಾಪ ಸೂಚಿಸಿದ್ದಾರೆ.

“ಶ್ರೀಮತಿ ಚೆನ್ನಮ್ಮ ಅವರು ಸರಳತೆ, ಸೌಜನ್ಯ ಮತ್ತು ಕುಟುಂಬ ಮೌಲ್ಯಗಳಿಗೆ ಬದ್ಧತೆಯಿಂದ ಬದುಕಿದ ಮಹನೀಯರು. ತಮ್ಮ ಕುಟುಂಬದ ಬೆನ್ನೆಲುಬಾಗಿ ನಿಂತು ಹೆಚ್.ಡಿ. ದೇವೇಗೌಡ ಅವರ ಸಾರ್ವಜನಿಕ ಹಾಗೂ ರಾಜಕೀಯ ಜೀವನಕ್ಕೆ ಮೌನ ಶಕ್ತಿಯಾಗಿ ಅಪಾರ ಬೆಂಬಲ ನೀಡಿದವರು.

“ಭಗವಂತನು ಶ್ರೀಮತಿ ಚೆನ್ನಮ್ಮ ಅವರ ಆತ್ಮಕ್ಕೆ ಚಿರಶಾಂತಿ ಹಾಗೂ ಸದ್ಗತಿಯನ್ನು ಕರುಣಿಸಲಿ. ಈ ದುಃಖವನ್ನು ಭರಿಸುವ ಶಕ್ತಿ ಮಾಜಿ ಪ್ರಧಾನಿ ಶ್ರೀ ಹೆಚ್.ಡಿ. ದೇವೇಗೌಡರು, ಕೇಂದ್ರ ಸಚಿವರಾದ ಶ್ರೀ ಎಚ್.ಡಿ. ಕುಮಾರಸ್ವಾಮಿ ಸೇರಿದಂತೆ ಕುಟುಂಬದ ಎಲ್ಲ ಸದಸ್ಯರಿಗೆ ನೀಡಲಿ ಎಂದು ಪ್ರಾರ್ಥಿಸುತ್ತೇನೆ.

ಈ ದುಃಖದ ಸಂದರ್ಭದಲ್ಲಿ ದೇವೇಗೌಡ ಕುಟುಂಬದೊಂದಿಗೆ ನಾನೂ ಸಹ ಭಾಗಿಯಾಗಿದ್ದು, ನನ್ನ ಹೃತ್ಪೂರ್ವಕ ಸಂತಾಪವನ್ನು ಸಲ್ಲಿಸುತ್ತೇನೆ” ಎಂದು ಶಾಸಕ ಕೆ.ಸಿ. ವೀರೇಂದ್ರ ಪಪ್ಪಿ ತಿಳಿಸಿದ್ದಾರೆ.

suddionenews

ಕನ್ನಡ ಸುದ್ದಿಗಳ ವಿಶ್ವಾಸಾರ್ಹ ಮೂಲ — suddione.com ನಲ್ಲಿ ಓದಿ ರಾಷ್ಟ್ರೀಯ, ಅಂತರರಾಷ್ಟ್ರೀಯ, ರಾಜಕೀಯ, ಕ್ರೀಡೆ, ಮನರಂಜನೆ, ವಾಣಿಜ್ಯ, ಶಿಕ್ಷಣ ಮತ್ತು ತಂತ್ರಜ್ಞಾನಕ್ಕೆ ಸಂಬಂಧಿಸಿದ ಪ್ರತಿಯೊಂದು ಪ್ರಮುಖ ಅಪ್‌ಡೇಟ್. ನೀವು ಯಾವಾಗಲೂ ಅಪ್‌ಡೇಟ್ ಆಗಿರಲು ನಾವು ವೇಗವಾದ, ನಿಖರವಾದ ಮತ್ತು ನಿಷ್ಪಕ್ಷಪಾತವಾದ ಸುದ್ದಿಗಳನ್ನು ಸರಳ ಹಾಗೂ ಸ್ಪಷ್ಟ ಭಾಷೆಯಲ್ಲಿ ನೀಡುತ್ತೇವೆ. ಸಂಪಾದಕರು: ನಾಗೇಂದ್ರ ರೆಡ್ಡಿ ಪಿ.ಎಲ್

Join WhatsApp

Join Now

Join Telegram

Join Now