Kannada news ಚಿತ್ರದುರ್ಗ ದಾವಣಗೆರೆ ಬೆಂಗಳೂರು ರಾಜಕೀಯ ಚುನಾವಣೆ ಮಳೆ ಕ್ರಿಕೆಟ್ ಭಾರತ ಚಿನ್ನ ಬೆಳ್ಳಿ ಹವಾಮಾನ ಕ್ರಿಕೆಟ್  ಕನ್ನಡ ನ್ಯೂಸ್

ನಾಳೆಯೇ ಜೆಡಿಎಸ್ ತೊರೆದು ಕಾಂಗ್ರೆಸ್ ಸೇರಲಿದ್ದಾರೆ ತುಮಕೂರು ಗ್ರಾಮಾಂತರ ಮಾಜಿ ಶಾಸಕ ಗೌರಿಶಂಕರ್..!

---Advertisement---

 

 

ತುಮಕೂರು: ಲೋಕಸಭಾ ಚುನಾವಣೆ ಬರುತ್ತಿದ್ದಂತೆ ರಾಜ್ಯ ರಾಜಕಾರಣದಲ್ಲಿ ಹಲವು ಬದಲಾವಣೆಗಳು ನಡೆಯುತ್ತಿವೆಮ ಅದರಲ್ಲೂ ಬಿಜೆಪಿ ಮತ್ತು ಜೆಡಿಎಸ್ ಮೈತ್ರಿ ಮಾಡಿಕೊಳ್ಳಲು ಬಯಸುತ್ತಿದ್ದಂತೆ ಎರಡೂ ಪಕ್ಷದಲ್ಲೂ ಅಸಮಾಧಾನ ಹೊಗೆಯಾಡುತ್ತಿದೆ. ಇದರ ಬೆನ್ನಲ್ಲೇ ಪಕ್ಷ ಬಿಡುವವರ ಸಂಖ್ಯೆ ಕೂಡ ಹೆಚ್ಚಾಗಿದೆ. ನಾಳೆಯೇ ಜೆಡಿಎಸ್ ತೊರೆದು ಕಾಂಗ್ರೆಸ್ ಸೇರಲು ಗೌರಿ ಶಂಕರ್ ಸಜ್ಜಾಗಿದ್ದಾರೆ.

 

ತುಮಕೂರು ಗ್ರಾಮಾಂತರ ಮಾಜಿ ಶಾಸಕ ಗೌರಿಶಂಕರ್ ತನ್ನ ಕ್ಷೇತ್ರದಲ್ಲಿ ಹೆಚ್ಚು ಪ್ರಾಬಲ್ಯ ಉಳಿಸಿಕೊಂಡಿದ್ದಾರೆ. ಗ್ರಾಮಾಂತರದಲ್ಲಿ ಗೌರಿ ಶಂಕರ್ ಎಂದರೇನೆ ಯುವಕರಿಗೆ ಸಿಕ್ಕಾಪಟ್ಟೆ ಕ್ರೇಜ್ ಇದೆ. ಕಳೆದ ವಿಧಾನಸಭಾ ಚುನಾವಣೆಯಲ್ಲೂ ಗೆದ್ದೆ ಗೆಲ್ಲುತ್ತಾರೆ ಎಂಬನಂಬಿಕೆ ಅಗಾಧವಾಗಿತ್ತು. ಅವರ ಹಿಂದೆ ಪ್ರಚಾರ ಮಾಡುತ್ತಿದ್ದ ಜನಸಂಖ್ಯೆ ಅಷ್ಟಿತ್ತು. ಆದರೆ ಅನಿರೀಕ್ಷಿತ ಸೋಲು ಕಂಡಿದ್ದಾರೆ. ತುಮಕೂರು ಗ್ರಾಮಾಂತರ ಭಾಗದಲ್ಲಿ ನೆಕ್ ಟು ನೆಕ್ ಫೈಟ್ ಇರುವುದೇ ಕಾಂಗ್ರೆಸ್ ಮತ್ತು ಬಿಜೆಪಿ ಅಭ್ಯರ್ಥಿಯ ನಡುವೆ. ಕಾಂಗ್ರೆಸ್ ಅಷ್ಟಾಗಿ ಸ್ಪರ್ಧೆ ಮಾಡುವಂತ ಕ್ಯಾಂಡಿಡೇಟ್ ಇರಲಿಲ್ಲ. ಇದೀಗ ಅಂತ ಸ್ಪರ್ಧೆ ಕೊಡುವವರೇ ಮೈತ್ರಿ ಮಾಡಿಕೊಳ್ಳುತ್ತಿದ್ದಾರೆ.

 

ಈ ಬೆನ್ನಲ್ಲೇ ಗೌರಿಶಂಕರ್ ಹಾಗೂ ದಾಸರಹಳ್ಳಿ ಮಂಜುನಾಥ್ ಕಾಂಗ್ರೆಸ್ ಸೇರಲು ಗಳಿಗೆ ಫಿಕ್ಸ್ ಆಗಿದೆ. ನಾಳೆ ಸಿಎಂ ಸಿದ್ದರಾಮಯ್ಯ ಹಾಗೂ ಡಿಸಿಎಂ ಡಿಕೆ ಶಿವಕುಮಾರ್ ನೇತೃತ್ವದಲ್ಲಿ, ಕೆಪಿಸಿಸಿ ಕಚೇರಿಯಲ್ಲಿ ಕಾಂಗ್ರೆಸ್ ಪಕ್ಷ ಸೇರಲಿದ್ದಾರೆ. ಇದರ ಜೊತೆಗೆ ನೂರಾರು ಕಾರ್ಯಕರ್ತರು ಸಹ ಕಾಂಗ್ರೆಸ್ ಸೇರಲಿದ್ದಾರೆ. ಮಾಜಿ ಸಿಎಂ ಹೆಚ್ ಡಿ ಕುಮಾರಸ್ವಾಮಿ ಅವರು, ಗೌರಿಶಂಕರ್ ಹಾಗೂ ಮಂಜುನಾಥ್ ಅವರ ಮನವೊಲಿಕೆಗೆ ಸಾಕಷ್ಟು ಪ್ರಯತ್ನ ಪಟ್ಟಿದ್ದರು. ಆದರೂ ಯಾವುದೇ ಪ್ರಯೋಜನವಾಗಿಲ್ಲ.

ಸಾರ್ವಜನಿಕ ಕುಂದುಕೊರತೆ ವಿಭಾಗ : ನಿಮ್ಮ ಧ್ವನಿ - ನಮ್ಮ ವೇದಿಕೆ

ನಿಮ್ಮ ಊರಿನ ಸಮಸ್ಯೆಗಳು ಇನ್ನು ಮುಂದೆ ಕೇವಲ ಚರ್ಚೆಯಾಗಬಾರದು, ಅವುಗಳಿಗೆ ಪರಿಹಾರ ಸಿಗಬೇಕು.

ವರದಿ ಮಾಡುವುದು ಹೇಗೆ?

  • ನಿಮ್ಮ ಸುತ್ತಮುತ್ತಲಿನ ರಸ್ತೆ, ನೀರು, ವಿದ್ಯುತ್ ಸಮಸ್ಯೆಗಳ ಫೋಟೋ, ವಿಡಿಯೋ ಅಥವಾ ಮಾಹಿತಿ ನಮಗೆ ಕಳುಹಿಸಿ.
ವಾಟ್ಸಪ್ ಮಾಡಿ: 90369 74702

ನಾವು ಏನು ಮಾಡುತ್ತೇವೆ?

  • ನೀವು ಕಳುಹಿಸಿದ ವರದಿಗಳನ್ನು suddione.com ನಲ್ಲಿ ಪ್ರಕಟಿಸುತ್ತೇವೆ.
  • ಸಂಬಂಧಪಟ್ಟ ಇಲಾಖೆಯ ಅಧಿಕಾರಿಗಳ ಗಮನಕ್ಕೆ ತಂದು ಪರಿಹಾರಕ್ಕಾಗಿ ಒತ್ತಾಯಿಸುತ್ತೇವೆ.
  • ನಿಮ್ಮೂರಿನ ಅಭಿವೃದ್ಧಿಗೆ ನಿಮ್ಮೊಂದಿಗೆ ಧ್ವನಿಗೂಡಿಸುತ್ತೇವೆ.

suddionenews

ಕನ್ನಡ ಸುದ್ದಿಗಳ ವಿಶ್ವಾಸಾರ್ಹ ಮೂಲ — suddione.com ನಲ್ಲಿ ಓದಿ ರಾಷ್ಟ್ರೀಯ, ಅಂತರರಾಷ್ಟ್ರೀಯ, ರಾಜಕೀಯ, ಕ್ರೀಡೆ, ಮನರಂಜನೆ, ವಾಣಿಜ್ಯ, ಶಿಕ್ಷಣ ಮತ್ತು ತಂತ್ರಜ್ಞಾನಕ್ಕೆ ಸಂಬಂಧಿಸಿದ ಪ್ರತಿಯೊಂದು ಪ್ರಮುಖ ಅಪ್‌ಡೇಟ್. ನೀವು ಯಾವಾಗಲೂ ಅಪ್‌ಡೇಟ್ ಆಗಿರಲು ನಾವು ವೇಗವಾದ, ನಿಖರವಾದ ಮತ್ತು ನಿಷ್ಪಕ್ಷಪಾತವಾದ ಸುದ್ದಿಗಳನ್ನು ಸರಳ ಹಾಗೂ ಸ್ಪಷ್ಟ ಭಾಷೆಯಲ್ಲಿ ನೀಡುತ್ತೇವೆ. ಸಂಪಾದಕರು: ನಾಗೇಂದ್ರ ರೆಡ್ಡಿ ಪಿ.ಎಲ್

Join WhatsApp

Join Now

Join Telegram

Join Now

Leave a Comment