ಹಿರಿಯ ಮುತ್ಸದ್ಸಿ ರಾಜಕಾರಣಿ, ಸಮಾಜವಾದಿ ಪಕ್ಷದ ಸಂಸ್ಥಾಪಕ ಮುಲಾಯಂ ಸಿಂಗ್ ಯಾದವ್ ಇನ್ನಿಲ್ಲ

 

 

ನವದೆಹಲಿ, (ಅ.10) : ಉತ್ತರ ಪ್ರದೇಶದ ಮಾಜಿ ಮುಖ್ಯಮಂತ್ರಿ ಮತ್ತು ಸಮಾಜವಾದಿ ಪಕ್ಷದ ಸಂಸ್ಥಾಪಕ ಮುಲಾಯಂ ಸಿಂಗ್ ಯಾದವ್ ಅವರು ಇಂದು (ಅಕ್ಟೋಬರ್ 10,ಸೋಮವಾರ) ಬೆಳಿಗ್ಗೆ 8:15 ಕ್ಕೆ ನಿಧನರಾದರು.

ಮುಲಾಯಂ ಸಿಂಗ್ ಯಾದವ್ ಅವರ ಅನಾರೋಗ್ಯದ ಕಾರಣ ಅವರನ್ನು ಅಕ್ಟೋಬರ್ 2 ರಂದು ಗುರುಗ್ರಾಮ್‌ನ ಮೇದಾಂತ ಆಸ್ಪತ್ರೆಗೆ ದಾಖಲಿಸಲಾಗಿತ್ತು.

“ನನ್ನ ತಂದೆ ಮತ್ತು ಪ್ರತಿಯೊಬ್ಬರ ನಾಯಕ ಇನ್ನಿಲ್ಲ” ಎಂದು ಅಖಿಲೇಶ್ ಯಾದವ್ ಸಮಾಜವಾದಿ ಪಕ್ಷದ ಟ್ವಿಟರ್‌ನಲ್ಲಿ ದುಃಖವನ್ನು ಹಂಚಿಕೊಂಡಿದ್ದಾರೆ.

82 ವರ್ಷ ವಯಸ್ಸಿನ ಸಮಾಜವಾದಿ ಪಕ್ಷದ ಹಿರಿಯ ನಾಯಕ ಉಸಿರಾಟದ ತೊಂದರೆ ಮತ್ತು ಮೂತ್ರದ ಸೋಂಕಿನಿಂದ ಬಳಲುತ್ತಿದ್ದರು ಎಂದು ಆಸ್ಪತ್ರೆ ಮೂಲಗಳು ತಿಳಿಸಿವೆ.

Share This Article
Leave a Comment

Leave a Reply

Your email address will not be published. Required fields are marked *