Kannada news ಚಿತ್ರದುರ್ಗ ದಾವಣಗೆರೆ ಬೆಂಗಳೂರು ರಾಜಕೀಯ ಚುನಾವಣೆ ಮಳೆ ಕ್ರಿಕೆಟ್ ಭಾರತ ಚಿನ್ನ ಬೆಳ್ಳಿ ಹವಾಮಾನ ಕ್ರಿಕೆಟ್  ಕನ್ನಡ ನ್ಯೂಸ್

ಕುಮಾರಸ್ವಾಮಿ ಪೋಸ್ಟರ್ ಅಂಟಿಸಿದವರನ್ನು ಹಿಡಿದ ಮಾಜಿ ವಿಧಾನಪರಿಷತ್ ಸದಸ್ಯ..!

---Advertisement---

ಬೆಂಗಳೂರು: ದೀಪಾವಳಿ ಹಬ್ಬದ ದಿನ ಕುಮಾರಸ್ವಾಮಿ ಅವರ ಮನೆಗೆ ದೀಪಲಂಕಾರ ಮಾಡಿದ್ದರು. ಅದಕ್ಕೆ ಅಕ್ರಮವಾಗಿ ಕರೆಂಟ್ ಎಳೆದುಕೊಂಡಿದ್ದರು. ಇದನ್ನು ಕಾಂಗ್ರೆಸ್ ಟೀಕೆ ಮಾಡಿತ್ತು. ಈ ಪ್ರಕರಣಕ್ಕೆ ಸಂಬಂಧಿಸಿದಂತೆ ಕುಮಾರಸ್ವಾಮಿಯವರ ಬಗ್ಗೆ ಕರೆಂಟ್ ಕಳ್ಳ ಎಂಬ ಪೋಸ್ಟರ್ ಅಂಟಿಸಲಾಗಿತ್ತು. ಇದೀಗ ಆ ಪೋಸ್ಟರ್ ಅಂಟಿಸಿದವರು ಯಾರೆಂಬುದನ್ನು ಕಂಡು ಹಿಡಿದಿದ್ದಾರೆ.

ಮಾಜಿ ವಿಧಾನಪರಿಷತ್ ಸದಸ್ಯ ರಮೇಶ್ ಗೌಡ ಈ ಬಗ್ಗೆ ಮಾತನಾಡಿದ್ದಾರೆ. ಕರೆಂಟ್ ಕಳ್ಳ ಎಂದು ಪೋಸ್ಟರ್ ಅಂಟಿಸಿದ್ದಂತ ಕಾಂಗ್ರೆಸ್ ಪಕ್ಷದ ಮುಖಂಡರೊಬ್ಬರ ವಿರುದ್ಧ ದೂರು ದಾಖಲಿಸಿದ್ದಾರೆ. ಬಳಿಕ ಮಾತನಾಡಿ, ಕಾಂಗ್ರೆಸ್ ಮುಖಂಡನ ವಿರುದ್ಧ ಕಿಡಿಕಾರಿದ್ದಾರೆ.

ಮಾಧ್ಯಮದವರೊಂದಿಗೆ ಮಾತನಾಡಿ, ಪೋಸ್ಟರ್ ಅಂಟಿಸಿದ ಮುಖಂಡನ ಹೆಸರು ಎಸ್ ಮನೋಹರ್ ಅಂತ. ಅವನೊಬ್ಬ ಲೋಫರ್. ಪೋಸ್ಟರ್ ಅಂಟಿಸಿದ ಉದ್ದೇಶ ಜೆಡಿಎಸ್ ಕಾರ್ಯಕರ್ತರನ್ನು ಕೆರಳಿಸುವುದಾಗಿತ್ತು. ಅವರು ಕೆರಳಿ ದಾಂಧಲೆ ಮಾಡುವಂತಾಗಿ, ಶಾಂತಿ, ಸುವ್ಯವಸ್ಥೆಯನ್ನು ಹಾಳು ಮಾಡುವುದು ಅವನ ಗುರಿಯಾಗಿತ್ತು ಎಂದು ರಮೇಶ್ ಗೌಡ ಕಿಡಿಕಾರಿದ್ದಾರೆ. ಅದರ ಜೊತೆಗೆ ಕಾಂಗ್ರೆಸ್ ಮುಖಂಡರ ಫೋಟೋವನ್ನು ತೋರಿಸಿದ್ದಾರೆ.

suddionenews

ಕನ್ನಡ ಸುದ್ದಿಗಳ ವಿಶ್ವಾಸಾರ್ಹ ಮೂಲ — suddione.com ನಲ್ಲಿ ಓದಿ ರಾಷ್ಟ್ರೀಯ, ಅಂತರರಾಷ್ಟ್ರೀಯ, ರಾಜಕೀಯ, ಕ್ರೀಡೆ, ಮನರಂಜನೆ, ವಾಣಿಜ್ಯ, ಶಿಕ್ಷಣ ಮತ್ತು ತಂತ್ರಜ್ಞಾನಕ್ಕೆ ಸಂಬಂಧಿಸಿದ ಪ್ರತಿಯೊಂದು ಪ್ರಮುಖ ಅಪ್‌ಡೇಟ್. ನೀವು ಯಾವಾಗಲೂ ಅಪ್‌ಡೇಟ್ ಆಗಿರಲು ನಾವು ವೇಗವಾದ, ನಿಖರವಾದ ಮತ್ತು ನಿಷ್ಪಕ್ಷಪಾತವಾದ ಸುದ್ದಿಗಳನ್ನು ಸರಳ ಹಾಗೂ ಸ್ಪಷ್ಟ ಭಾಷೆಯಲ್ಲಿ ನೀಡುತ್ತೇವೆ. ಸಂಪಾದಕರು: ನಾಗೇಂದ್ರ ರೆಡ್ಡಿ ಪಿ.ಎಲ್

Join WhatsApp

Join Now

Join Telegram

Join Now

Leave a Comment

🏫 ಅಡ್ಮಿಷನ್ ಓಪನ್
🔒

ಇಂಡಿಯನ್ ಇಂಟರ್ ನ್ಯಾಷನಲ್ ಸ್ಕೂಲ್

ಸ್ವಾಗತ...