Warning: Undefined array key "options" in /home/nagendra/public_html/content/plugins/elementor-pro/modules/theme-builder/widgets/site-logo.php on line 124

ಗರ್ಭೀಣಿಯರಿಗೆ ಉಚಿತವಾಗಿ ಆಟೋ ಸೇವೆ : ಇದೊಂದು ಮಾನವೀಯತೆಯ ಕಾರ್ಯ : ಜಿಲ್ಲಾಧಿಕಾರಿ ಮೆಚ್ಚುಗೆ

Facebook
Twitter
Telegram
WhatsApp

 

ವರದಿ ಮತ್ತು ಫೋಟೋ ಕೃಪೆ
ಸುರೇಶ್ ಪಟ್ಟಣ್,
ಮೊ : 98862 95817

ಸುದ್ದಿಒನ್, ಚಿತ್ರದುರ್ಗ,(ಜು.18) : ನಗರದ ಸ್ನೇಹ ಜೀವಿ ಆಟೋ ಚಾಲಕರ ಸಂಘದಿಂದ ನಗರ ವ್ಯಾಪ್ತಿಯಲ್ಲಿ ಗರ್ಭೀಣಿಯರಿಗೆ ಉಚಿತವಾಗಿ ಆಟೋ ಸೇವೆಯನ್ನು ಪ್ರಾರಂಭ ಮಾಡಿದ್ದಾರೆ.

ಈ ಸೇವೆಗೆ ಇಂದು ಜಿಲ್ಲಾಧಿಕಾರಿಗಳ ಕಚೇರಿ ಆವರಣದಲ್ಲಿ ಆಟೋಗೆ ಗರ್ಭೀಣಿಯರಿಗೆ ಉಚಿತ ಸೇವೆಯ ಸ್ಟಿಕರ್ ಹಚ್ಚುವುದರ ಮೂಲಕ ಜಿಲ್ಲಾಧಿಕಾರಿಗಳಾದ ಶ್ರೀಮತಿ ದಿವ್ಯ ಪ್ರಭು ಚಾಲನೆ ನೀಡಿದರು.

ಈ ಸಂದರ್ಭದಲ್ಲಿ ಮಾತನಾಡಿದ ಅವರು, ಇದೊಂದು ಉತ್ತಮವಾದ ಕಾರ್ಯವಾಗಿದೆ. ಆಟೋದವರಿಂದ ಮಾನವೀಯತೆಯ ಕಾರ್ಯ ಇದಾಗಿದೆ, ಗರ್ಭೀಣಿಯರಿಗೆ ಅವರ ಮನೆ ಬಾಗಿಲಿನಿಂದ ಆಸ್ಪತೆಯವರೆಗೂ ಉಚಿತವಾದ ಸೇವೆಯನ್ನು ನೀಡುತ್ತಿರುವುದು ಉತ್ತಮವಾದ ಕಾರ್ಯವಾಗಿದೆ.

ಆಟೋದವರ ಈ ಕಾರ್ಯಕ್ಕೆ ಜಿಲ್ಲೆಯವರ ಪರವಾಗಿ ಅಭಿನಂದನೆಯನ್ನು ಸಲ್ಲಿಸುತ್ತೇನೆ. ಆಟೋ ಚಾಲಕರೆ ಸಂಘ ನಮ್ಮ ಆಡಳಿತದಲ್ಲಿ ಪ್ರಮುಖವಾದ ಪಾತ್ರವನ್ನು ವಹಿಸುತ್ತದೆ.ಜನತೆ ತಮ್ಮ ಅನುಕೂಲಕ್ಕಾಗಿ ಆಟೋವನ್ನು ಬಳಕೆ ಮಾಡುತ್ತಾರೆ. ಇದೊಂದು ಒಳ್ಳೆಯ ಕಾರ್ಯಕ್ರಮವಾಗಿದೆ. ಆಟೋದವರ ಜನರಿಗೆ ಯಾವುದೇ ರೀತಿಯ ತೊಂದರೆಯಾಗದಂತೆ ನೋಡಿ ಕೊಳ್ಳಿ ಎಂದರು.

ಸ್ನೇಹ ಜೀವಿ ಆಟೋ ಚಾಲಕ ಸಂಘದ ಅಧ್ಯಕ್ಷರಾದ ತಿಪ್ಪೇಸ್ವಾಮಿ ಮಾತನಾಡಿ ನಮ್ಮ ಆಟೋ ಚಾಲಕರ ಸಂಘಟದಿಂದ ಈ ಕಾರ್ಯವನ್ನು ಕೈಗೆತ್ತಿಕೊಳ್ಳಲಾಗಿದೆ.

ನಗರದ ವ್ಯಾಪ್ತಿಯಲ್ಲಿ ಗರ್ಭಿಣಿಯರಿಗೆ ಉಚಿತವಾಗಿ ಅವರ ಮನೆಯಿಂದ ಆಸ್ಪತ್ರೆಯವರೆಗೂ ಆಟೋ ಸೇವೆಯನ್ನು ದಿನದ 24 ಗಂಟೆಯೂ ಸಹಾ ನೀಡಲಾಗುವುದು. ನಮ್ಮ ಸಂಘದಲ್ಲಿ ಸುಮಾರು 100 ಆಟೋದ ಚಾಲಕರು ಮತ್ತು ಮಾಲೀಕರು ಸದಸ್ಯರಾಗಿದ್ದು, ಅವರೆಲ್ಲರು ಸಹಾ ಈ ಸೇವೆಯನ್ನು ನೀಡಲು ಬದ್ದರಾಗಿದ್ದಾರೆ ಎಂದ ಅವರು ಈ ರೀತಿಯ ಸೇವೆಯನ್ನು ಬೇರೆ ಆಟೋದವರು ಸಹಾ ನೀಡುವಂತಾಗಲಿ ಎಂದು ಆಶಿಸಿದರು.

Facebook
Twitter
Telegram
WhatsApp
suddionenews

suddionenews

Leave a Comment

Top Stories

ನಿಮ್ಮದೇ ರಾಶಿ ಹೊಂದಿರುವರು ಶ್ರೀಮಂತರಾಗಿದ್ದಾರೆ, ಸರಕಾರಿ ಉದ್ಯೋಗದಲ್ಲಿದ್ದಾರೆ ನೀವೇಕೆ ಇಲ್ಲ?

ನಿಮ್ಮದೇ ರಾಶಿ ಹೊಂದಿರುವರು ಶ್ರೀಮಂತರಾಗಿದ್ದಾರೆ, ಸರಕಾರಿ ಉದ್ಯೋಗದಲ್ಲಿದ್ದಾರೆ ನೀವೇಕೆ ಇಲ್ಲ? ಶನಿವಾರ ರಾಶಿ ಭವಿಷ್ಯ -ಮೇ-4,2024 ಸೂರ್ಯೋದಯ: 05:52, ಸೂರ್ಯಾಸ್ತ : 06:33 ಶಾಲಿವಾಹನ ಶಕೆ1945, ಶ್ರೀ ಕ್ರೋಧಿ ನಾಮ ಸಂವತ್ಸರ , ಸಂವತ್2079,

ಆಗ್ನೇಯ ಶಿಕ್ಷಕರ ಕ್ಷೇತ್ರದ ಚುನಾವಣೆ : ಜೂನ್ 3 ರಂದು ಮತದಾನ : ಜಿಲ್ಲಾಧಿಕಾರಿ ಟಿ.ವೆಂಕಟೇಶ್

ಚಿತ್ರದುರ್ಗ. ಮೇ.03: ಆಗ್ನೇಯ ಶಿಕ್ಷಕರ ಕ್ಷೇತ್ರದ ವಿಧಾನ ಪರಿಷತ್ ಸದಸ್ಯರ ಆಯ್ಕೆಯ ಚುನಾವಣೆಗೆ ವೇಳಾಪಟ್ಟಿ ಪ್ರಕಟವಾಗಿದೆ. ಚಿತ್ರದುರ್ಗ ಜಿಲ್ಲೆಯಲ್ಲಿ 4615 ಮತದಾರರು ಇದ್ದು , ಜೂನ್ 3 ರಂದು ಮತದಾನ ಜರುಗಲಿದೆ ಎಂದು ಆಗ್ನೇಯ

ಚಿತ್ರದುರ್ಗದ ರಾಜಬೀದಿಗಳಲ್ಲಿ ವಿಜೃಂಭಣೆಯಿಂದ ಸಾಗಿದ ಏಕನಾಥೇಶ್ವರಿ ಅಮ್ಮನವರ ಮೆರವಣಿಗೆ ಮತ್ತು ಗ್ರಾಮ ದೇವತೆ ಬರಗೇರಮ್ಮನವರ ಮೆರವಣಿಗೆ

  ವರದಿ ಮತ್ತು ಫೋಟೋ ಕೃಪೆ ಕೆ.ಎಂ.ಮುತ್ತುಸ್ವಾಮಿ ಕಣ್ಣನ್,  ಮೊ : 78998 64552 ಸುದ್ದಿಒನ್, ಚಿತ್ರದುರ್ಗ, ಮೇ. 03 : ಏಕನಾಥೇಶ್ವರಿ ಅಮ್ಮನ ಮೆರವಣಿಗೆ ನಗರದ ರಾಜಬೀದಿಗಳಲ್ಲಿ ಶುಕ್ರವಾರ ವಿಜೃಂಭಣೆಯಿಂದ ನಡೆಯಿತು. ಕೋಟೆ

error: Content is protected !!