Kannada news ಚಿತ್ರದುರ್ಗ ದಾವಣಗೆರೆ ಬೆಂಗಳೂರು ರಾಜಕೀಯ ಚುನಾವಣೆ ಮಳೆ ಕ್ರಿಕೆಟ್ ಭಾರತ ಚಿನ್ನ ಬೆಳ್ಳಿ ಹವಾಮಾನ ಕ್ರಿಕೆಟ್  ಕನ್ನಡ ನ್ಯೂಸ್

ಗ್ರಾಮೀಣ ಪತ್ರಕರ್ತರಿಗೆ ಉಚಿತ ಬಸ್ ಪಾಸ್ : ಸಚಿವ ಡಿ ಸುಧಾಕರ್ ನಿವಾಸದ ಮುಂದೆ ಪ್ರತಿಭಟನೆ 

---Advertisement---

 

ವರದಿ ಮತ್ತು ಫೋಟೋ ಕೃಪೆ
ಸುರೇಶ್ ಬೆಳಗೆರೆ
ಮೊ : 97398 75729

ಸುದ್ದಿಒನ್, ಚಳ್ಳಕೆರೆ, ಅಕ್ಟೋಬರ್. 06 : ಗ್ರಾಮೀಣ ಪತ್ರಕರ್ತರಿಗೆ ವೃತ್ತಿ ಸಂಬಂಧಿ ಚಟುವಟಿಕೆಗಳಿಗೆ ಜಿಲ್ಲಾ ವ್ಯಾಪ್ತಿಯಲ್ಲಿ ಪ್ರಯಾಣಿಸಲು ಉಚಿತ ಬಸ್ ಪಾಸಿಗೆ ಸಂಬಂಧಿಸಿದಂತೆ ಸರ್ಕಾರ ಹೊರಡಿಸಿರುವ ಆದೇಶವನ್ನು ವಿರೋಧಿಸಿ ಕರ್ನಾಟಕ ರಾಜ್ಯ ಕಾರ್ಯನಿರತ ಪತ್ರಕರ್ತರ ಧ್ವನಿ ಸಂಘಟನೆ ಪದಾಧಿಕಾರಿಗಳು ರಾಜ್ಯಧ್ಯಕ್ಷ  ಮಲ್ಲಿಕಾರ್ಜುನರವರ ನೇತೃತ್ವದಲ್ಲಿ ಸಚಿವ ಡಿ ಸುಧಾಕರ್ ರವರ ಚಳ್ಳಕೆರೆ ನಿವಾಸದ ಮುಂದೆ ಪ್ರತಿಭಟನೆ ನಡೆಸಿತು.

ಈ ವೇಳೆ ಮಾತಾಡಿದ ಧ್ವನಿ ಸಂಘಟನೆಯ ರಾಜ್ಯದ್ಯಕ್ಷರು ಗ್ರಾಮೀಣ ಪತ್ರಕರ್ತರಿಗೆ ವೃತ್ತಿ ಸಂಬಂಧಿ ಚಟುವಟಿಕೆಗಳಿಗೆ ಜಿಲ್ಲಾ ವ್ಯಾಪ್ತಿಯಲ್ಲಿ ಓಡಾಡಲು ಉಚಿತ ಬಸ್ ಪಾಸ್ ಸಂಬಂದಿಸಿದಂತೆ ರಾಜ್ಯ ಸರ್ಕಾರ ಕರಾಳ ಆದೇಶವನ್ನು ಹೊರಡಿಸಿದ್ದು ಗ್ರಾಮಾಂತರ ಪತ್ರಕರ್ತರಿಗೆ ಮರಣ ಶಾಸನದಂತಿದೆ. ಪತ್ರಿಕೆಗಳು ಮಾಧ್ಯಮ ಪಟ್ಟಿಯಲ್ಲಿ ಇರಬೇಕು ಹಾಗೂ ಪತ್ರಕರ್ತರಿಗೆ ಖಾಯಂ ನೇಮಕಾತಿ ಆದೇಶ ಪತ್ರ ಹೊಂದಿರಬೇಕು ಎಂಬ ಆದೇಶದಿಂದಾಗಿ ರಾಜ್ಯದಲ್ಲಿರುವ ಯಾವೊಬ್ಬ ಗ್ರಾಮೀಣ ಪತ್ರಕರ್ತರಿಗೂ ಈ ಯೋಜನೆ ಪ್ರಯೋಜನವಾಗುವುದಿಲ್ಲ. ಸರ್ಕಾರ ಹೊರಡಿಸಿರುವ ಆದೇಶದಲ್ಲಿ ಮಾಧ್ಯಮ ಪಟ್ಟಿಯಲ್ಲಿರುವ ಮುದ್ರಣ, ವಿದ್ಯುನ್ಮಾನ ಮಾಧ್ಯಮಗಳ ಸಂಖ್ಯೆಯನ್ನು ಆದರಿಸಿ ರಾಜ್ಯಾದ್ಯಂತ ಒಟ್ಟು 5222 ಪತ್ರಕರ್ತರಿಗೆ ಮಾತ್ರ ಈ ಯೋಜನೆಯ ಪ್ರಯೋಜನ ಎಂದು ಸರ್ಕಾರ ತಿಳಿಸಿದ್ದು ಮಾಧ್ಯಮ ಪಟ್ಟಿಯಲ್ಲಿರುವ ಪತ್ರಿಕೆಗಳ ಸಂಪಾದಕರು ಹಾಗೂ ವರದಿಗಾರರಿಗೆ ಈ ಆದೇಶದಿಂದ ಅನ್ಯಾಯವಾಗಿದೆ.

ಮಾಧ್ಯಮ ಪಟ್ಟಿಯಲ್ಲಿರದ ಪತ್ರಿಕೆಗಳ ಸಂಪಾದಕರು ಹಾಗೂ ವರದಿಗಾರರು ಸರ್ಕಾರದ ಲೆಕ್ಕದಲ್ಲಿ ಪತ್ರಕರ್ತರೆ ಅಲ್ಲವೇ ಜೊತೆಗೆ ನಿಯತಕಾಲಿಕೆಗಳಿಗೆ ಈ ಸೌಲಭ್ಯ ನೀಡಲು ಅವಕಾಶ ಇಲ್ಲ ಎಂದಿರುವುದು ದುರದೃಷ್ಟಕರ ಪ್ರತಿಯೊಬ್ಬ ಪತ್ರಕರ್ತ ಹಾಗೂ ಸಂಪಾದಕರಿಗೆ ಆರ್ ಎನ್ ಐ ಪ್ರಮುಖವಾಗಿದ್ದು ಇದರ ಜೊತೆಗೆ ಪ್ರಕಟವಾಗುವ ಪತ್ರಿಕೆಗಳ ಸಂಚಿಕೆಯನ್ನು ಸರ್ಕಾರ ಪರಿಗಣಿಸಬೇಕು. ಈಗಾಗಲೇ ಶಕ್ತಿ ಯೋಜನೆ ಅಡಿ ರಾಜ್ಯಾದ್ಯಂತ ಓಡಾಡಲು ಮಹಿಳೆಯರಿಗೆ 1800 ಕೋಟಿ ರೂಗಳು ಮೀಸಲಿರಿಸಿ ಓಡಾಡಲು ಆಧಾರ್ ಕಾರ್ಡ್ ಮಾನದಂಡ ಮಾಡಿದ್ದು ರಾಜ್ಯದಲ್ಲಿ 12 ಸಾವಿರ ಪತ್ರಕರ್ತರಿಗೆ ಜಿಲ್ಲಾ ಮಟ್ಟದಲ್ಲಿ ಓಡಾಡಲು ಈ ರೀತಿಯ ಕಠಿಣ ಮಾನದಂಡ ವಿಧಿಸಿರುವುದು ಸರಿಯಲ್ಲ. ಕೂಡಲೇ ಸರ್ಕಾರ ಆದೇಶದಲ್ಲಿರುವ ಮಾಧ್ಯಮ ಪಟ್ಟಿಯಲ್ಲಿ ಇರಬೇಕೆಂಬ ನಿಯಮವನ್ನು ತೆಗೆದುಹಾಕಿ ಖಾಯಂ ನೇಮಕಾತಿ ಆದೇಶ ಪತ್ರದ ಬದಲಾಗಿ ನೇಮಕಾತಿ ಪತ್ರದ ಆದೇಶ ಇದ್ದರೆ ಸಾಕು ಎಂಬ ನಿಯಮವನ್ನು ಒಳಪಡಿಸಿ ಮರು ಆದೇಶ ಹೊರಡಿಸಿ ನಾಡಿನ ಪತ್ರಕರ್ತರಿಗೆ ಅನುಕೂಲ ಮಾಡಿಕೊಡಬೇಕು ಎಂದು ಆಗ್ರಹಿಸಿದರು.

ಜಿಲ್ಲಾ ಉಸ್ತುವಾರಿ ಸಚಿವ ಡಿ ಸುಧಾಕರ್ ಮಾತನಾಡಿ ಪತ್ರಕರ್ತರ ಬೇಡಿಕೆಗಳನ್ನು ಈಡೇರಿಸಲು ಸರ್ಕಾರ ಬದ್ಧವಾಗಿದ್ದು ಮುಖ್ಯಮಂತ್ರಿಗಳೊಂದಿಗೆ ಚರ್ಚಿಸಿ ಪರಿಹಾರ ಸೂಚಿಸಲಾಗುವುದು ಎಂದು ಭರವಸೆ ನೀಡಿದರು.

ಈ ಸಂದರ್ಭದಲ್ಲಿ ಪತ್ರಕರ್ತರ ಧ್ವನಿ ಸಂಘಟನೆಯ ಗೌರವಾಧ್ಯಕ್ಷ ಡಿ ವೀರಣ್ಣ ತಾಲೂಕು ಅಧ್ಯಕ್ಷ ಜಾಲಿ ಮಂಜುನಾಥ್ ಜಿಲ್ಲಾಧ್ಯಕ್ಷ ಅನಂತಮೂರ್ತಿ ನಾಯಕ್ ಉಪಾಧ್ಯಕ್ಷ ದಿನೇಶ್ ಜಿಲ್ಲಾ ಕಾರ್ಯದರ್ಶಿ ದ್ಯಾಮರಾಜ್ ಈ ನಾಗರಾಜ್ ಶ್ರೀನಿವಾಸ ವಿಜಯಕುಮಾರ್ ಮಹಾಂತೇಶ್ ರಾಮಪ್ಪ ಸುರೇಶ್ ನಾರಾಯಣಸ್ವಾಮಿ ಸಂಜೀವ ಮೂರ್ತಿ ತಿಪ್ಪೇಸ್ವಾಮಿ ರುದ್ರಮುನಿ ರಂಗಸ್ವಾಮಿ ರಮಾಮಣಿ ಸುಪ್ರಿತ ಪ್ರತಿಭಟನೆಯಲ್ಲಿ ಭಾಗವಹಿಸಿದರು.

ಸಾರ್ವಜನಿಕ ಕುಂದುಕೊರತೆ ವಿಭಾಗ : ನಿಮ್ಮ ಧ್ವನಿ - ನಮ್ಮ ವೇದಿಕೆ

ನಿಮ್ಮ ಊರಿನ ಸಮಸ್ಯೆಗಳು ಇನ್ನು ಮುಂದೆ ಕೇವಲ ಚರ್ಚೆಯಾಗಬಾರದು, ಅವುಗಳಿಗೆ ಪರಿಹಾರ ಸಿಗಬೇಕು.

ವರದಿ ಮಾಡುವುದು ಹೇಗೆ?

  • ನಿಮ್ಮ ಸುತ್ತಮುತ್ತಲಿನ ರಸ್ತೆ, ನೀರು, ವಿದ್ಯುತ್ ಸಮಸ್ಯೆಗಳ ಫೋಟೋ, ವಿಡಿಯೋ ಅಥವಾ ಮಾಹಿತಿ ನಮಗೆ ಕಳುಹಿಸಿ.
ವಾಟ್ಸಪ್ ಮಾಡಿ: 90369 74702

ನಾವು ಏನು ಮಾಡುತ್ತೇವೆ?

  • ನೀವು ಕಳುಹಿಸಿದ ವರದಿಗಳನ್ನು suddione.com ನಲ್ಲಿ ಪ್ರಕಟಿಸುತ್ತೇವೆ.
  • ಸಂಬಂಧಪಟ್ಟ ಇಲಾಖೆಯ ಅಧಿಕಾರಿಗಳ ಗಮನಕ್ಕೆ ತಂದು ಪರಿಹಾರಕ್ಕಾಗಿ ಒತ್ತಾಯಿಸುತ್ತೇವೆ.
  • ನಿಮ್ಮೂರಿನ ಅಭಿವೃದ್ಧಿಗೆ ನಿಮ್ಮೊಂದಿಗೆ ಧ್ವನಿಗೂಡಿಸುತ್ತೇವೆ.

suddionenews

ಕನ್ನಡ ಸುದ್ದಿಗಳ ವಿಶ್ವಾಸಾರ್ಹ ಮೂಲ — suddione.com ನಲ್ಲಿ ಓದಿ ರಾಷ್ಟ್ರೀಯ, ಅಂತರರಾಷ್ಟ್ರೀಯ, ರಾಜಕೀಯ, ಕ್ರೀಡೆ, ಮನರಂಜನೆ, ವಾಣಿಜ್ಯ, ಶಿಕ್ಷಣ ಮತ್ತು ತಂತ್ರಜ್ಞಾನಕ್ಕೆ ಸಂಬಂಧಿಸಿದ ಪ್ರತಿಯೊಂದು ಪ್ರಮುಖ ಅಪ್‌ಡೇಟ್. ನೀವು ಯಾವಾಗಲೂ ಅಪ್‌ಡೇಟ್ ಆಗಿರಲು ನಾವು ವೇಗವಾದ, ನಿಖರವಾದ ಮತ್ತು ನಿಷ್ಪಕ್ಷಪಾತವಾದ ಸುದ್ದಿಗಳನ್ನು ಸರಳ ಹಾಗೂ ಸ್ಪಷ್ಟ ಭಾಷೆಯಲ್ಲಿ ನೀಡುತ್ತೇವೆ. ಸಂಪಾದಕರು: ನಾಗೇಂದ್ರ ರೆಡ್ಡಿ ಪಿ.ಎಲ್

Join WhatsApp

Join Now

Join Telegram

Join Now

Leave a Comment