ನಾಳೆ ಮಧ್ಯಾಹ್ನದಿಂದ ಸಿಗಲಿದೆ ಉಚಿತ ಬಸ್ ಪ್ರಯಾಣ..!

suddionenews
1 Min Read

 

 

ಬೆಂಗಳೂರು: ರಾಜ್ಯ ಸರ್ಕಾರದ ಐದು ಗ್ಯಾರಂಟಿ ಯೋಜನೆಗಳಲ್ಲಿ ಒಂದು ಯೋಜನೆ ನಾಳೆಯಿಂದ ಜಾರಿಗೆ ಬರಲಿದೆ. ಇಂದು ಸಿಎಂ ಸಿದ್ದರಾಮಯ್ಯ ಮೈಸೂರಿಗೆ ಆಗಮಿಸಿದ್ದಾರೆ. ಸಿಎಂ ಆದ ಬಳಿಕ ಮೊದಲ ಬಾರಿಗೆ ಸಿಎಂ ಸಿದ್ದರಾಮಯ್ಯ ತವರಿಗೆ ಆಗಮಿಸಿದ್ದಾರೆ. ನಾಳೆಯೇ ಶಕ್ತಿ ಯೋಜನೆಗೆ ಚಾಲನೆಯನ್ನು ನೀಡಲಿದ್ದಾರೆ. ಈ ಮೂಲಕ ಎಲ್ಲಾ‌ಮಹಿಳೆಯರಿಗೂ ಉಚಿತ ಪ್ರಯಾಣ ಸಿಗಲಿದೆ.

ಸುತ್ತೂರು ಹೆಲಿಪ್ಯಾಡ್ ನಲ್ಲಿ ಈ ಸಂಬಂಧ ಮಾತನಾಡಿದ ಸಿಎಂ ಸಿದ್ದರಾಮಯ್ಯ, ನಾಳೆಯಿಂದ ಎಲ್ಲಾ ಮಹಿಳೆಯರು ಬಸ್ ನಲ್ಲಿ ಉಚಿತ ಪ್ರಯಾಣ ಮಾಡಬಹುದು. ನಾನು, ಡಿಕೆ, ರಾಮಲಿಂಗಾ ರೆಡ್ಡಿ‌ ಚಾಲನೆ ನೀಡ್ತೇವೆ. ಮೈಸೂರು ಜಿಲ್ಲೆಯಲ್ಲಿ ಅನ್ನಭಾಗ್ಯ ಯೋಜನೆಗೂ ಚಾಲನೆ‌ ನೀಡ್ತೇವೆ.

ಬಳಿಕ ವರುಣಾದಲ್ಲಿ ಕೃತಜ್ಞತಾ ಸಮಾವೇಶದಲ್ಲಿ ಭಾಗಿಯಾಗಲಿದ್ದಾರೆ. ಎಲ್ಲಾ ಕಾರ್ಯಕರ್ತರಿಗೂ ಸಮಾವೇಶದ ಮೂಲಕ ಧನ್ಯವಾದ ಅರ್ಪಿಸಲಿದ್ದಾರೆ.

Share This Article
Leave a Comment

Leave a Reply

Your email address will not be published. Required fields are marked *