Kannada news ಚಿತ್ರದುರ್ಗ ದಾವಣಗೆರೆ ಬೆಂಗಳೂರು ರಾಜಕೀಯ ಚುನಾವಣೆ ಮಳೆ ಕ್ರಿಕೆಟ್ ಭಾರತ ಚಿನ್ನ ಬೆಳ್ಳಿ ಹವಾಮಾನ ಕ್ರಿಕೆಟ್  ಕನ್ನಡ ನ್ಯೂಸ್

ಪ್ರಕೃತಿ ಶಾಲೆಯಲ್ಲಿ ಉಚಿತ ದಂತ ತಪಾಸಣಾ ಶಿಬಿರ ಮತ್ತು ಉಪನ್ಯಾಸ

---Advertisement---

 

ಸುದ್ದಿಒನ್, ಚಿತ್ರದುರ್ಗ, (ಆ.11) : ವಿದ್ಯಾರ್ಥಿಗಳ ಆರೋಗ್ಯ ಬಹಳ ಮುಖ್ಯ. ಮಕ್ಕಳು ಆರೋಗ್ಯವಾಗಿದ್ದರೆ ಶಾಲೆಗೆ ಹಾಜರಾಗುತ್ತಾರೆ ಅವರ ವಿದ್ಯಾಭ್ಯಾಸಕ್ಕೆ ಇದು ಬಹಳ ಮುಖ್ಯ ಎಂದು ಶಾಲೆಯ ಅಧ್ಯಕ್ಷ ಎಂ.ಕೆ. ರವೀಂದ್ರ ಹೇಳಿದರು.

ನಗರದ ಪ್ರಕೃತಿ ಶಾಲೆಯಲ್ಲಿ ಉಚಿತ ದಂತ ತಪಾಸಣಾ ಶಿಬಿರ ಮತ್ತು ಉಪನ್ಯಾಸ ಕಾರ್ಯಕ್ರಮದಲ್ಲಿ ಭಾಗವಹಿಸಿ ಅವರು ಮಾತನಾಡಿದರು.

ಶಾಲೆಯ ಕಾರ್ಯದರ್ಶಿ ಎಂ.ಕಾರ್ತಿಕ್  ಮಾತನಾಡುತ್ತಾ ಮಕ್ಕಳು ಏನಾದರೂ ಸಾಧಿಸಬೇಕಾದರೆ ಅವರಿಗೆ ಉತ್ತಮ ಆರೋಗ್ಯ, ಅತ್ಯುನ್ನತ ವಿದ್ಯಾಭ್ಯಾಸ ಹಾಗೂ ಆರೋಗ್ಯಕರ ಕಲಿಕಾ ವಾತಾವರಣ ಬೇಕಾಗುತ್ತದೆ. ಕಲಿಕಾ ವಾತಾವರಣ ಹಾಗೂ ಉತ್ತಮ ವಿದ್ಯಾಭ್ಯಾಸವನ್ನು ಶಾಲೆಗಳು ಒದಗಿಸಬಹುದು ಆದರೆ ವಿದ್ಯಾರ್ಥಿಗಳೇ ಅವರವರ ಆರೋಗ್ಯವನ್ನು ಕಾಪಾಡಿಕೊಳ್ಳಬೇಕು ಎಂದು ತಿಳಿಸಿದರು.

ಈ ಸಂದರ್ಭದಲ್ಲಿ ಡಾ.ಜಯಚಂದ್ರ ಅವರು prevention is better than cure ಎಂಬ ನುಡಿಯಂತೆ ವಿದ್ಯಾರ್ಥಿಗಳಿಗೆ ಹಲ್ಲು ಹಾಗೂ ಬಾಯಿಯ ಸ್ವಚ್ಛತೆಯ ಬಗ್ಗೆ ಸವಿಸ್ತಾರವಾಗಿ ತಿಳಿಸಿಕೊಟ್ಟರು. ಈ ಕಾರ್ಯಕ್ರಮದಲ್ಲಿ ಬೇಬಿ ಸಿಟ್ಟಿಂಗ್ ನಿಂದ ಏಳನೇ ತರಗತಿಯವರಗೆ ಎಲ್ಲ ವಿದ್ಯಾರ್ಥಿಗಳಿಗೂ ಉಚಿತ ದಂತ ತಪಾಸಣೆಯನ್ನು ನಡೆಸಿ  ಮಾರ್ಗದರ್ಶನ ನೀಡಲಾಯಿತು.

ದಂತ ತಪಾಸಣಾ ಶಿಬಿರದ ನಂತರ ವಿದ್ಯಾರ್ಥಿಗಳೇ ಖುದ್ದಾಗಿ ಎಲ್ಲರೂ ತಮ್ಮ ಜೇಬಿನಲ್ಲಿದ್ದ ಚಾಕಲೇಟ್, ಚ್ಯೂಯಿಂಗ ಗಮ್ ಗಳನ್ನು ಕಸದ ಡಬ್ಬಿಗೆ ಎಸೆದಿದ್ದು ಒಂದು ಅಚ್ಚರಿ ಹಾಗೂ ಸಂತಸದ ವಿಚಾರ. ಈ ಕಾರ್ಯಕ್ರಮದಲ್ಲಿ ಪರಿಸರ ಪ್ರೇಮಿ ಬ್ಯಾನರ್ ಅನ್ನು ಬಳಕೆಮಾಡಿದ್ದರು. ಈ ಕಾರ್ಯಕ್ರಮದಲ್ಲಿ ಪರಿವರ್ತನಾ ಟ್ರಸ್ಟ್‌ನ ಎಲ್ಲಾ ಟ್ರಸ್ಟಿಗಳು ಮತ್ತು ಶಾಲೆಯ ಎಲ್ಲ ಶಿಕ್ಷಕರು ಹಾಜರಿದ್ದರು.

ಸಾರ್ವಜನಿಕ ಕುಂದುಕೊರತೆ ವಿಭಾಗ : ನಿಮ್ಮ ಧ್ವನಿ - ನಮ್ಮ ವೇದಿಕೆ

ನಿಮ್ಮ ಊರಿನ ಸಮಸ್ಯೆಗಳು ಇನ್ನು ಮುಂದೆ ಕೇವಲ ಚರ್ಚೆಯಾಗಬಾರದು, ಅವುಗಳಿಗೆ ಪರಿಹಾರ ಸಿಗಬೇಕು.

ವರದಿ ಮಾಡುವುದು ಹೇಗೆ?

  • ನಿಮ್ಮ ಸುತ್ತಮುತ್ತಲಿನ ರಸ್ತೆ, ನೀರು, ವಿದ್ಯುತ್ ಸಮಸ್ಯೆಗಳ ಫೋಟೋ, ವಿಡಿಯೋ ಅಥವಾ ಮಾಹಿತಿ ನಮಗೆ ಕಳುಹಿಸಿ.
ವಾಟ್ಸಪ್ ಮಾಡಿ: 90369 74702

ನಾವು ಏನು ಮಾಡುತ್ತೇವೆ?

  • ನೀವು ಕಳುಹಿಸಿದ ವರದಿಗಳನ್ನು suddione.com ನಲ್ಲಿ ಪ್ರಕಟಿಸುತ್ತೇವೆ.
  • ಸಂಬಂಧಪಟ್ಟ ಇಲಾಖೆಯ ಅಧಿಕಾರಿಗಳ ಗಮನಕ್ಕೆ ತಂದು ಪರಿಹಾರಕ್ಕಾಗಿ ಒತ್ತಾಯಿಸುತ್ತೇವೆ.
  • ನಿಮ್ಮೂರಿನ ಅಭಿವೃದ್ಧಿಗೆ ನಿಮ್ಮೊಂದಿಗೆ ಧ್ವನಿಗೂಡಿಸುತ್ತೇವೆ.

suddionenews

ಕನ್ನಡ ಸುದ್ದಿಗಳ ವಿಶ್ವಾಸಾರ್ಹ ಮೂಲ — suddione.com ನಲ್ಲಿ ಓದಿ ರಾಷ್ಟ್ರೀಯ, ಅಂತರರಾಷ್ಟ್ರೀಯ, ರಾಜಕೀಯ, ಕ್ರೀಡೆ, ಮನರಂಜನೆ, ವಾಣಿಜ್ಯ, ಶಿಕ್ಷಣ ಮತ್ತು ತಂತ್ರಜ್ಞಾನಕ್ಕೆ ಸಂಬಂಧಿಸಿದ ಪ್ರತಿಯೊಂದು ಪ್ರಮುಖ ಅಪ್‌ಡೇಟ್. ನೀವು ಯಾವಾಗಲೂ ಅಪ್‌ಡೇಟ್ ಆಗಿರಲು ನಾವು ವೇಗವಾದ, ನಿಖರವಾದ ಮತ್ತು ನಿಷ್ಪಕ್ಷಪಾತವಾದ ಸುದ್ದಿಗಳನ್ನು ಸರಳ ಹಾಗೂ ಸ್ಪಷ್ಟ ಭಾಷೆಯಲ್ಲಿ ನೀಡುತ್ತೇವೆ. ಸಂಪಾದಕರು: ನಾಗೇಂದ್ರ ರೆಡ್ಡಿ ಪಿ.ಎಲ್

Join WhatsApp

Join Now

Join Telegram

Join Now

Leave a Comment