ಚಿತ್ರದುರ್ಗದಲ್ಲಿ ಅಕ್ಟೋಬರ್ 19 ರಿಂದ 21 ರವರೆಗೆ ಮಕ್ಕಳಿಗಾಗಿ ಉಚಿತ ಇಂಗ್ಲಿಷ್ ಕಾರ್ಯಾಗಾರ

1 Min Read

ಸುದ್ದಿಒನ್, ಚಿತ್ರದುರ್ಗ, ಅಕ್ಟೋಬರ್.18  : ನಗರದ ಐಯುಡಿಪಿ ಲೇಔಟ್ ಗಾಂಧಿನಗರದ ಸಮುದಾಯ ಭವನದಲ್ಲಿ ಅಕ್ಟೋಬರ್ 19 ರಿಂದ  21 ರ ವರೆಗೆ ಮೂರು ದಿನಗಳ ವರೆಗೂ ಯೋಗೀಶ್ ಸಹ್ಯಾದ್ರಿ ಎಜುಕೇಷನ್ ಟ್ರಸ್ಟ್ (ರಿ.), ಚಿತ್ರದುರ್ಗ, ಜಿಲ್ಲಾ ಕುರುಬರ ಸಂಘ (ರಿ.), ಚಿತ್ರದುರ್ಗ, ಜಿಲ್ಲಾ ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ, ಚಿತ್ರದುರ್ಗ ಇವರ ಸಹಯೋಗದಲ್ಲಿ ಮಕ್ಕಳಿಗಾಗಿ ಉಚಿತ ಇಂಗ್ಲಿಷ್ ಕಾರ್ಯಾಗಾರ ವನ್ನು ಹಮ್ಮಿಕೊಳ್ಳಲಾಗಿದೆ.

ಕಾರ್ಯಕ್ರಮದ  ಉದ್ಘಾಟನೆಯನ್ನು ಶಾಸಕ ಕೆ ಸಿ ವೀರೇಂದ್ರ (ಪಪ್ಪಿ) ಅವರು ಗುರುವಾರ ಬೆಳಗ್ಗೆ 10 ಗಂಟೆಗೆ ನೆರವೇರಿಸಲಿದ್ದು, ಶ್ರೀ ಬಸವಮೂರ್ತಿ ಮಾದಾರ ಚನ್ನಯ್ಯ ಸ್ವಾಮೀಜಿಯವರು ದಿವ್ಯ ಸಾನಿಧ್ಯ ವಹಿಸಲಿದ್ದಾರೆ.

ಕಾರ್ಯಾಗಾರದ ಸಂಪನ್ಮೂಲ ವ್ಯಕ್ತಿಯಾಗಿ ಉಪನ್ಯಾಸಕರು ಹಾಗು ಸಹ್ಯಾದ್ರಿ ಇಂಗ್ಲಿಷ್ ಅಕಾಡೆಮಿಯ ಅಧ್ಯಕ್ಷರಾದ ಯೋಗೀಶ್ ಸಹ್ಯಾದ್ರಿ ಭಾಗವಹಿಸಲಿದ್ದಾರೆ.

ಮುಖ್ಯ ಅತಿಥಿಗಳಾಗಿ ಡಿಡಿಪಿಐ ರವಿಶಂಕರ್ ರೆಡ್ಡಿ ಕೆ, ಬಿಜೆಪಿ ಜಿಲ್ಲಾಧ್ಯಕ್ಷ ಮುರುಳಿ ಎ, ಕಾಂಗ್ರೆಸ್ ಜಿಲ್ಲಾಧ್ಯಕ್ಷ ತಾಜ್ ಪೀರ್ ಎಂ ಕೆ,  ಕುರುಬರ ಸಂಘದ ಜಿಲ್ಲಾಧ್ಯಕ್ಷ ಶ್ರೀರಾಮ್,
ಮಾಜಿ ನಗರಸಭೆ ಅಧ್ಯಕ್ಷರ ಹೆಚ್. ಮಂಜಪ್ಪ,  ನಗರಸಭೆ ಸದಸ್ಯ ಭಾಸ್ಕರ್ ಎಸ್, ಶ್ರೀಮತಿ ಭಾರತಿ ಆರ್ ಬಣಕಾರ, ಉಪ ನಿರ್ದೇಶಕರು, ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ, ಚಿತ್ರದುರ್ಗ ಭಾಗವಹಿಸಲಿದ್ದಾರೆ ಎಂದು ಚಿತ್ರದುರ್ಗ ಜಿಲ್ಲಾ ಕುರುಬರ ಸಂಘದ ಜಿಲ್ಲಾಧ್ಯಕ್ಷ ಶ್ರೀರಾಮ್ ಅವರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

Share This Article
Leave a Comment

Leave a Reply

Your email address will not be published. Required fields are marked *