Notice: Undefined index: options in /home/nagendra/public_html/content/plugins/elementor-pro/modules/theme-builder/widgets/site-logo.php on line 124

ಯಳಗೋಡಿನಲ್ಲಿ ನಡೆದ ಉಚಿತ ಆರೋಗ್ಯ ತಪಾಸಣಾ ಶಿಬಿರ

Facebook
Twitter
Telegram
WhatsApp

ವರದಿ ಮತ್ತು ಫೋಟೋ : ಸುರೇಶ್ ಪಟ್ಟಣ್

ಚಿತ್ರದುರ್ಗ(ಜು.07) :  ರೋಟರಿ ಕ್ಲಬ್ ಮತ್ತು ಬಸವೇಶ್ವರ ಮೆಡಿಕಲ್ ಕಾಲೇಜು ಮತ್ತು ಆಸ್ಪತ್ರೆ ಚಿತ್ರದುರ್ಗ ಇವರ ಸಂಯುಕ್ತಾಶ್ರಯದಲ್ಲಿ ಚಿತ್ರದುರ್ಗ ತಾಲ್ಲೂಕಿನ ಯಳಗೋಡು ಪ್ರಾಥಮಿಕ ಆರೋಗ್ಯ ಕೇಂದ್ರದಲ್ಲಿ ಉಚಿತ ಆರೋಗ್ಯ ತಪಾಸಣಾ ಶಿಬಿರವನ್ನು ಏರ್ಪಡಿಸಲಾಗಿತ್ತು.

ಈ ಶಿಬಿರದಲ್ಲಿ ರಕ್ತದೂತ್ತಡ, ಸಕ್ಕರೆ ಖಾಯಿಲೆ, ಕಿವಿ ಮೂಗು ಗಂಟಲು, ಕಣ್ಣು ಸಂಬಂಧಿಸಿದ ತೊಂದರೆ, ತೆಲೆನೋವು, ಚರ್ಮದ ಸಮಸ್ಯೆಗಳು, ಅಲರ್ಜಿ, ತುರಿಕೆ ಸೇರಿದಂತೆ ಇತರೆ ಸಮಸ್ಯೆಗಳ ಬಗ್ಗೆ ತಪಾಸಣೆಯನ್ನು ನಡೆಸಲಾಯಿತು. ಈ ಸಂದರ್ಭದಲ್ಲಿ ತಪಾಸಣೆ  ಮಾತ್ರವಲ್ಲದೆ ಉಚಿತವಾಗಿ ಔಷಧಿಯನ್ನು ಸಹಾ ವಿತರಣೆ ಮಾಡಲಾಯಿತು.

ಈ ಶಿಬಿರದಲ್ಲಿ ಯಖಗೋಡು ಗ್ರಾಮದ
ಸುತ್ತಮುತ್ತಲಿನ ಗ್ರಾಮ ಗ್ರಾಮಸ್ಥರು ಆಗಮಿಸಿ ಶಿಬಿರದ ಲಾಭವನ್ನು ಪಡೆದಿದ್ದಾರೆ. ಇದರಲ್ಲಿ 90 ಜನ ತಪಾಸಣೆಗೆ ಒಳಗಾಗಿದ್ದು ಇದರಲ್ಲಿ ಹೊಸದಾಗಿ 25 ಜನ, ಆಥ್ರೋ 05, ಸಕ್ಕರೆ ಖಾಯಿಲೆಯವರು 05, ಇಎನ್‍ಟಿ  05 ಹಾಗೂ ಆಥ್ರೋಪಡಿಕ್ಸ್ 10 ಚಿಕಿತ್ಸೆಯನ್ನು ಪಡೆದಿದ್ದಾರೆ.

ರೋಟರಿ ಕ್ಲಬ್‍ನ ಅಧ್ಯಕ್ಷರಾದ ಮಾಧುರಿ ಮಧುಪ್ರಸಾದ್, ಕಾರ್ಯದರ್ಶಿ ಜಯಶ್ರೀ ಷಾ, ಕಾರ್ಯಕ್ರಮದ ಸಂಯೋಜಕರಾದ ಎಸ್.ವಿರೇಶ್, ರೋಟೇರಿಯನ್ ಗಳಾದ ಮೈಲೇಶ್, ಕುರುಬರಹಳ್ಳಿ ಶಿವಣ್ಣ, ಮಧುಪ್ರಸಾದ್, ವೀರಭದ್ರಸ್ವಾಮಿ, ಬ್ರಹ್ಮಾನಂದ ಗುಪ್ತ, ಪ್ರಾಥಮಿಕ ಆರೋಗ್ಯ ಕೇಂದ್ರದ  ಡಾ. ನವೀದ್ ಬೇಗ್, ಡಾ. ಸೀತಾ, ಡಾ. ತೇಜಸ್ವಿ, ಡಾ.ರೈಜಾ, ಡಾ.ಚಿರು ಮಾಧವ್ ಭಾಗವಹಿಸಿದ್ದರು.

Facebook
Twitter
Telegram
WhatsApp
suddionenews

suddionenews

Leave a Comment

Top Stories

43 ವಯಸ್ಸು ಅಂತ ಚಿಂತೆ ಬೇಡ.. PDO ಹುದ್ದೆಗೆ ನೀವೂ ಅರ್ಜಿ ಹಾಕಬಹುದು..!

ಬೆಂಗಳೂರು: ಎಷ್ಟೋ ಯುವಕ-ಯುವತಿಯರು ಸರ್ಕಾರಿ ಕೆಲಸಕ್ಕಾಗಿ ತಮ್ಮಿಡಿ ಜೀವನವನ್ನ ಮುಡಿಪಾಗಿಟ್ಟು ಓದುತ್ತಾ ಇರುತ್ತಾರೆ. ಆದರೆ ಎಲ್ಲರಿಗೂ ಸರ್ಕಾರಿ ಕೆಲಸಕ್ಕೆ ಹೋಗುವ ಅದೃಷ್ಟವೂ ಇರುವುದಿಲ್ಲ, ಕೆಲಸವೂ ಸಿಗುವುದಿಲ್ಲ. ವಯಸ್ಸು ಮೀರುತ್ತೆ. ಆದ್ರೀಗ ಅರ್ಜಿ ಆಹ್ವಾನಿಸಿರುವ ಪಿಡಿಓ

Tirumala Laddu : ತಿರುಪತಿ ಲಡ್ಡುವಿನಲ್ಲಿ ಪ್ರಾಣಿಗಳ ಕೊಬ್ಬು : ಬಿಡುಗಡೆಯಾದ ಲ್ಯಾಬ್ ವರದಿಯಲ್ಲೇನಿದೆ ?

ಸುದ್ದಿಒನ್, ತಿರುಮಲ, ಸೆಪ್ಟೆಂಬರ್. 19 : ಆಂಧ್ರಪ್ರದೇಶದಲ್ಲಿ ತಿರುಮಲ ತಿರುಪತಿ ಲಡ್ಡು ವಿಚಾರ ಬಾರೀ ಸದ್ದು ಮಾಡುತ್ತಿದೆ. ವೈಸಿಪಿ ಆಡಳಿತದಲ್ಲಿ ಲಡ್ಡೂಗಳಿಗೆ ಪ್ರಾಣಿಗಳ ಕೊಬ್ಬನ್ನು ಬಳಸಲಾಗುತ್ತಿತ್ತು ಎಂಬ ಸಿಎಂ ಚಂದ್ರಬಾಬು ಹೇಳಿಕೆ ಸಂಚಲನ ಮೂಡಿಸಿತ್ತು.

ಸೆಪ್ಟೆಂಬರ್ 21 ರಂದು ದಾವಣಗೆರೆಯಲ್ಲಿ ಉದ್ಯೋಗ ಮೇಳ

ದಾವಣಗೆರೆ,ಸೆಪ್ಟೆಂಬರ್.19 : ಜಿಲ್ಲಾ ಉದ್ಯೋಗ ವಿನಿಮಯ ಕೇಂದ್ರ, ಇವರ ವತಿಯಿಂದ ಸೆ.21 ರಂದು ಬೆಳಗ್ಗೆ 10 ಗಂಟೆಗೆ ಜಿಲ್ಲಾ ಉದ್ಯೋಗ ವಿನಿಮಯ ಕೇಂದ್ರ, ಕೊಠಡಿ ಸಂಖ್ಯೆ-51,  ಜಿಲ್ಲಾಧಿಕಾರಿಗಳ ಕಚೇರಿ, ದಾವಣಗೆರೆ ಇಲ್ಲಿ ಉದ್ಯೋಗಮೇಳ ಆಯೋಜಿಸಲಾಗಿದೆ.

error: Content is protected !!