ಕನ್ನಡ ರಾಜ್ಯೋತ್ಸವ ಪ್ರಯುಕ್ತ ಉಚಿತ ಹೃದಯ ತಪಾಸಣೆ

1 Min Read

ಕನ್ನಡ ರಾಜ್ಯೋತ್ಸವ ಪ್ರಯುಕ್ತ ಉಚಿತ ಹೃದಯ ತಪಾಸಣೆ

ಸುದ್ದಿಒನ್, ಚಿತ್ರದುರ್ಗ : ನಗರದ ಬಸವೇಶ್ವರ ಆಸ್ಪತ್ರೆಯಲ್ಲಿ ಕನ್ನಡ ರಾಜ್ಯೋತ್ಸವ ಪ್ರಯುಕ್ತ ಇಂಡಿಯಾನ ಎಸ್ ಜೆ ಎಂ ಹಾರ್ಟ್ ಸೆಂಟರ್ ಹಾಗೂ ಬಸವೇಶ್ವರ ವೈದ್ಯಕೀಯ ಆಸ್ಪತ್ರೆ ಮತ್ತು ಜೋಗಿಮಟ್ಟಿ ಗೆಳೆಯರ ಬಳಗ ಇವರ ಸಂಯುಕ್ತಾಶ್ರಯದಲ್ಲಿ ಉಚಿತ ಹೃದಯ ತಪಾಸಣೆ ಮತ್ತು ಕಣ್ಣಿನ ತಪಾಸಣೆ ಶಿಬಿರ ನಡೆಸಲಾಯಿತು.

ಇಂಡಿಯಾನ ಎಸ್. ಜೆ. ಎಂ. ಹಾರ್ಟ್ ಸೆಂಟರ್ ಹೃದಯ ತಜ್ಞರಾದ ಡಾ.ಜಿ.ಮಂಜುನಾಥ್, ಡಾ.ರವೀಂದ್ರ ಜಿಲ್ಲಾ ಶಸ್ತ್ರಚಿಕಿತ್ಸಕ , ಜೋಗಿಮಟ್ಟಿ ಗೆಳೆಯರ ಬಳಗ ಸದಸ್ಯರು ಹಾಗೂ ಇಂಡಿಯಾನಾ ಎಸ್ಎಂ ಹಾರ್ಟ್ ಸೆಂಟರ್ ಮತ್ತು ಬಸವೇಶ್ವರ ಆಸ್ಪತ್ರೆ ಸಿಬ್ಬಂದಿ ವರ್ಗದವರು ಉಪಸ್ಥಿತರಿದ್ದರು.

ಶಿಬಿರವನ್ನು ದೀಪ ಬೆಳಗುವುದರ ಮೂಲಕ ಉಚಿತ ಹೃದಯ ತಪಾಸಣಾ ಶಿಬಿರಕ್ಕೆ ಚಾಲನೆ ನೀಡಿದರು.

ಶಿಬಿರದಲ್ಲಿ ಹೆಚ್ಚು ರೋಗಿಗಳಿಗೆ ಉಚಿತ ಹೃದಯ ತಪಾಸಣೆ ಮಾಡಲಾಯಿತು.  ಬಿಪಿ, ಜಿ.ಆರ್‌. ಬಿ.ಎಸ್. 2ಡಿ ಎಕೋ, ಇಸಿಜಿ ತಪಾಸಣೆ ನಡೆಸಿ ಹಾಗೂ ತಜ್ಞ ವೈದ್ಯರೊಂದಿಗೆ ಸಮಾಲೋಚನೆ ಮಾಡಲಾಯಿತು.

Share This Article
Leave a Comment

Leave a Reply

Your email address will not be published. Required fields are marked *