ಕನ್ನಡ ರಾಜ್ಯೋತ್ಸವ ಪ್ರಯುಕ್ತ ಉಚಿತ ಹೃದಯ ತಪಾಸಣೆ
ಸುದ್ದಿಒನ್, ಚಿತ್ರದುರ್ಗ : ನಗರದ ಬಸವೇಶ್ವರ ಆಸ್ಪತ್ರೆಯಲ್ಲಿ ಕನ್ನಡ ರಾಜ್ಯೋತ್ಸವ ಪ್ರಯುಕ್ತ ಇಂಡಿಯಾನ ಎಸ್ ಜೆ ಎಂ ಹಾರ್ಟ್ ಸೆಂಟರ್ ಹಾಗೂ ಬಸವೇಶ್ವರ ವೈದ್ಯಕೀಯ ಆಸ್ಪತ್ರೆ ಮತ್ತು ಜೋಗಿಮಟ್ಟಿ ಗೆಳೆಯರ ಬಳಗ ಇವರ ಸಂಯುಕ್ತಾಶ್ರಯದಲ್ಲಿ ಉಚಿತ ಹೃದಯ ತಪಾಸಣೆ ಮತ್ತು ಕಣ್ಣಿನ ತಪಾಸಣೆ ಶಿಬಿರ ನಡೆಸಲಾಯಿತು.
ಇಂಡಿಯಾನ ಎಸ್. ಜೆ. ಎಂ. ಹಾರ್ಟ್ ಸೆಂಟರ್ ಹೃದಯ ತಜ್ಞರಾದ ಡಾ.ಜಿ.ಮಂಜುನಾಥ್, ಡಾ.ರವೀಂದ್ರ ಜಿಲ್ಲಾ ಶಸ್ತ್ರಚಿಕಿತ್ಸಕ , ಜೋಗಿಮಟ್ಟಿ ಗೆಳೆಯರ ಬಳಗ ಸದಸ್ಯರು ಹಾಗೂ ಇಂಡಿಯಾನಾ ಎಸ್ಎಂ ಹಾರ್ಟ್ ಸೆಂಟರ್ ಮತ್ತು ಬಸವೇಶ್ವರ ಆಸ್ಪತ್ರೆ ಸಿಬ್ಬಂದಿ ವರ್ಗದವರು ಉಪಸ್ಥಿತರಿದ್ದರು.
ಶಿಬಿರವನ್ನು ದೀಪ ಬೆಳಗುವುದರ ಮೂಲಕ ಉಚಿತ ಹೃದಯ ತಪಾಸಣಾ ಶಿಬಿರಕ್ಕೆ ಚಾಲನೆ ನೀಡಿದರು.
ಶಿಬಿರದಲ್ಲಿ ಹೆಚ್ಚು ರೋಗಿಗಳಿಗೆ ಉಚಿತ ಹೃದಯ ತಪಾಸಣೆ ಮಾಡಲಾಯಿತು. ಬಿಪಿ, ಜಿ.ಆರ್. ಬಿ.ಎಸ್. 2ಡಿ ಎಕೋ, ಇಸಿಜಿ ತಪಾಸಣೆ ನಡೆಸಿ ಹಾಗೂ ತಜ್ಞ ವೈದ್ಯರೊಂದಿಗೆ ಸಮಾಲೋಚನೆ ಮಾಡಲಾಯಿತು.
ಸಾರ್ವಜನಿಕ ಕುಂದುಕೊರತೆ ವಿಭಾಗ : ನಿಮ್ಮ ಧ್ವನಿ - ನಮ್ಮ ವೇದಿಕೆ
ನಿಮ್ಮ ಊರಿನ ಸಮಸ್ಯೆಗಳು ಇನ್ನು ಮುಂದೆ ಕೇವಲ ಚರ್ಚೆಯಾಗಬಾರದು, ಅವುಗಳಿಗೆ ಪರಿಹಾರ ಸಿಗಬೇಕು.
ವರದಿ ಮಾಡುವುದು ಹೇಗೆ?
- ನಿಮ್ಮ ಸುತ್ತಮುತ್ತಲಿನ ರಸ್ತೆ, ನೀರು, ವಿದ್ಯುತ್ ಸಮಸ್ಯೆಗಳ ಫೋಟೋ, ವಿಡಿಯೋ ಅಥವಾ ಮಾಹಿತಿ ನಮಗೆ ಕಳುಹಿಸಿ.
ನಾವು ಏನು ಮಾಡುತ್ತೇವೆ?
- ನೀವು ಕಳುಹಿಸಿದ ವರದಿಗಳನ್ನು suddione.com ನಲ್ಲಿ ಪ್ರಕಟಿಸುತ್ತೇವೆ.
- ಸಂಬಂಧಪಟ್ಟ ಇಲಾಖೆಯ ಅಧಿಕಾರಿಗಳ ಗಮನಕ್ಕೆ ತಂದು ಪರಿಹಾರಕ್ಕಾಗಿ ಒತ್ತಾಯಿಸುತ್ತೇವೆ.
- ನಿಮ್ಮೂರಿನ ಅಭಿವೃದ್ಧಿಗೆ ನಿಮ್ಮೊಂದಿಗೆ ಧ್ವನಿಗೂಡಿಸುತ್ತೇವೆ.

















