ಸುದ್ದಿಒನ್, ಚಿತ್ರದುರ್ಗ, ನವೆಂಬರ್. 25 : ಕರ್ನಾಟಕ ರಾಜ್ಯ ರೈತೋದಯ ಹಸಿರು ಸೇನೆವತಿಯಿಂದ ಚಿತ್ರದುರ್ಗದಲ್ಲಿ ಡಿ.07 ರಂದು ನಡೆಯಲಿರುವ 1008 ರೈತ ಕುಟುಂಬಕ್ಕೆ ಉಚಿತ ಸಾಮೂಹಿಕ ವಿವಾಹ ಸಮಾವೇಶಕ್ಕೆ ಈಗಾಗಲೇ ಭರದ ಸಿದ್ದತೆ ನಡೆಯುತ್ತಿದೆ.
ಈ ಕಾರ್ಯಕ್ರಮಕ್ಕೆ ಸುಮಾರು 12 ಕೋಟಿ ರೂಪಾಯಿ ವೆಚ್ಚವಾಗಲಿದೆ. ಈಗಾಗಲೇ ಹಲವಾರು ದಾನಿಗಳು ಹಲವಾರು ವಸ್ತುಗಳನ್ನು ನೀಡಲು ಮುಂದೆ ಬಂದಿದ್ದಾರೆ. ಇಂದು(ನವೆಂಬರ್. 25 ರಂದು) ಚಿತ್ರದುರ್ಗದಲ್ಲಿ ಕಾಂಗ್ರೆಸ್ ಮುಖಂಡ ಹಾಗೂ 2021 ರಲ್ಲಿ ಸ್ಥಳೀಯ ಸಂಸ್ಥೆಗಳಿಂದ ವಿಧಾನಪರಿಷತ್ತಿಗೆ ಚುನಾವಣೆಗೆ ಸ್ಪರ್ಧಿಸಿದ್ದ
ಬಿ. ಸೋಮಶೇಖರ್ ಅವರು 50 ಚೀಲ ಅಕ್ಕಿ ಮತ್ತು ಎಣ್ಣೆಯನ್ನು ದೇಣಿಗೆಯಾಗಿ ನೀಡಿದ್ದಾರೆ ಎಂದು ಕರ್ನಾಟಕ ರಾಜ್ಯ ರೈತೋದಯ ಹಸಿರು ಸೇನೆವತಿಯ ಪದಾಧಿಕಾರಿಗಳು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
ಸಾರ್ವಜನಿಕ ಕುಂದುಕೊರತೆ ವಿಭಾಗ : ನಿಮ್ಮ ಧ್ವನಿ - ನಮ್ಮ ವೇದಿಕೆ
ನಿಮ್ಮ ಊರಿನ ಸಮಸ್ಯೆಗಳು ಇನ್ನು ಮುಂದೆ ಕೇವಲ ಚರ್ಚೆಯಾಗಬಾರದು, ಅವುಗಳಿಗೆ ಪರಿಹಾರ ಸಿಗಬೇಕು.
ವರದಿ ಮಾಡುವುದು ಹೇಗೆ?
- ನಿಮ್ಮ ಸುತ್ತಮುತ್ತಲಿನ ರಸ್ತೆ, ನೀರು, ವಿದ್ಯುತ್ ಸಮಸ್ಯೆಗಳ ಫೋಟೋ, ವಿಡಿಯೋ ಅಥವಾ ಮಾಹಿತಿ ನಮಗೆ ಕಳುಹಿಸಿ.
ನಾವು ಏನು ಮಾಡುತ್ತೇವೆ?
- ನೀವು ಕಳುಹಿಸಿದ ವರದಿಗಳನ್ನು suddione.com ನಲ್ಲಿ ಪ್ರಕಟಿಸುತ್ತೇವೆ.
- ಸಂಬಂಧಪಟ್ಟ ಇಲಾಖೆಯ ಅಧಿಕಾರಿಗಳ ಗಮನಕ್ಕೆ ತಂದು ಪರಿಹಾರಕ್ಕಾಗಿ ಒತ್ತಾಯಿಸುತ್ತೇವೆ.
- ನಿಮ್ಮೂರಿನ ಅಭಿವೃದ್ಧಿಗೆ ನಿಮ್ಮೊಂದಿಗೆ ಧ್ವನಿಗೂಡಿಸುತ್ತೇವೆ.









