Kannada news ಚಿತ್ರದುರ್ಗ ದಾವಣಗೆರೆ ಬೆಂಗಳೂರು ರಾಜಕೀಯ ಚುನಾವಣೆ ಮಳೆ ಕ್ರಿಕೆಟ್ ಭಾರತ ಚಿನ್ನ ಬೆಳ್ಳಿ ಹವಾಮಾನ ಕ್ರಿಕೆಟ್  ಕನ್ನಡ ನ್ಯೂಸ್

ಅಕ್ಟೋಬರ್ 28 ರವರೆಗೆ ಉಚಿತ ರೇಬಿಸ್ ನಿರೋಧಕ ಲಸಿಕಾ ಅಭಿಯಾನ : ಡಾ.ಎಸ್.ಎನ್.ಹರೀಶ್

---Advertisement---

 

ವರದಿ ಮತ್ತು ಫೋಟೋ ಕೃಪೆ
ಕೆ.ಎಂ.ಮುತ್ತುಸ್ವಾಮಿ ಕಣ್ಣನ್,
ಮೊ : 78998 64552

ಸುದ್ದಿಒನ್, ಚಿತ್ರದುರ್ಗ, ಅಕ್ಟೋಬರ್. 03 : ವಿಶ್ವ ರೇಬಿಸ್ ದಿನಾಚರಣೆ ಅಂಗವಾಗಿ ಚಿತ್ರದುರ್ಗ ಪಶುವೈದ್ಯಕೀಯ ಪಾಲಿಕ್ಲಿನಿಕ್ ವತಿಯಿಂದ ಸೆ.28 ರಿಂದ ಅಕ್ಟೋಬರ್ 28 ರವರೆಗೆ ಒಂದು ತಿಂಗಳ ಕಾಲ ಉಚಿತ ರೇಬಿಸ್ ನಿರೋಧಕ ಲಸಿಕಾ ಅಭಿಯಾನ ಹಮ್ಮಿಕೊಳ್ಳಲಾಗಿದೆ.

ಸಾರ್ವಜನಿಕರು ತಮ್ಮ ಸಾಕು ಪ್ರಾಣಿಗಳಾದ ನಾಯಿ, ಬೆಕ್ಕುಗಳಿಗೆ ಪಶುವೈದ್ಯಕೀಯ ಪಾಲಿಕ್ಲಿನಿಕ್‍ನಲ್ಲಿ ಬೆಳಿಗ್ಗೆ 9 ರಿಂದ ಮಧ್ಯಾಹ್ನ 1 ರವರೆಗೆ. 2 ರಿಂದ ಸಂಜೆ ನಾಲ್ಕು ಗಂಟೆಯವರೆಗೆ ಲಸಿಕೆ ಹಾಕಿಸಿಕೊಳ್ಳಬಹುದಾಗಿದೆ. ಜಿಲ್ಲೆಯ ಎಲ್ಲಾ ಪಶು ಆಸ್ಪತ್ರೆಗಳಲ್ಲಿ ರೇಬಿಸ್ ನಿರೋಧಕ ಲಸಿಕಾ ಅಭಿಯಾನವಿದ್ದು, ಸಾರ್ವಜನಿಕರು ಇದರ ಪ್ರಯೋಜನ ಪಡೆದುಕೊಳ್ಳುವಂತೆ ಪಾಲಿ ಕ್ಲಿನಿಕ್ ಉಪ ನಿರ್ದೇಶಕ ಡಾ.ಎಸ್.ಎನ್.ಹರೀಶ್ ಮನವಿ ಮಾಡಿದ್ದಾರೆ.

ಮಾರಾಟ ಕೇಂದ್ರಗಳಿಗೆ ಪರವಾನಗಿ :
ಕುಕ್ಕುಟ ಮತ್ತು ಪಶು ಆಹಾರ ಉತ್ಪಾದನೆ ಮತ್ತು ಮಾರಾಟ ಕೇಂದ್ರಗಳಿಗೆ ಪರವಾನಗಿ (ಲೈಸನ್ಸ್) ಪಡೆದುಕೊಳ್ಳಬಹುದಾಗಿದೆ ಎಂದು ಪಶು ವೈದ್ಯಕೀಯ ಪಾಲಿಕ್ಲಿನಿಕ್ ಪರವಾನಗಿ ಪ್ರಾಧಿಕಾರ ಮತ್ತು ಉಪನಿರ್ದೇಶಕ ಡಾ.ಎನ್,ಎಸ್.ಹರೀಶ್ ತಿಳಿಸಿದ್ದಾರೆ.

suddionenews

ಕನ್ನಡ ಸುದ್ದಿಗಳ ವಿಶ್ವಾಸಾರ್ಹ ಮೂಲ — suddione.com ನಲ್ಲಿ ಓದಿ ರಾಷ್ಟ್ರೀಯ, ಅಂತರರಾಷ್ಟ್ರೀಯ, ರಾಜಕೀಯ, ಕ್ರೀಡೆ, ಮನರಂಜನೆ, ವಾಣಿಜ್ಯ, ಶಿಕ್ಷಣ ಮತ್ತು ತಂತ್ರಜ್ಞಾನಕ್ಕೆ ಸಂಬಂಧಿಸಿದ ಪ್ರತಿಯೊಂದು ಪ್ರಮುಖ ಅಪ್‌ಡೇಟ್. ನೀವು ಯಾವಾಗಲೂ ಅಪ್‌ಡೇಟ್ ಆಗಿರಲು ನಾವು ವೇಗವಾದ, ನಿಖರವಾದ ಮತ್ತು ನಿಷ್ಪಕ್ಷಪಾತವಾದ ಸುದ್ದಿಗಳನ್ನು ಸರಳ ಹಾಗೂ ಸ್ಪಷ್ಟ ಭಾಷೆಯಲ್ಲಿ ನೀಡುತ್ತೇವೆ. ಸಂಪಾದಕರು: ನಾಗೇಂದ್ರ ರೆಡ್ಡಿ ಪಿ.ಎಲ್

Join WhatsApp

Join Now

Join Telegram

Join Now

Leave a Comment