Kannada news ಚಿತ್ರದುರ್ಗ ದಾವಣಗೆರೆ ಬೆಂಗಳೂರು ರಾಜಕೀಯ ಚುನಾವಣೆ ಮಳೆ ಕ್ರಿಕೆಟ್ ಭಾರತ ಚಿನ್ನ ಬೆಳ್ಳಿ ಹವಾಮಾನ ಕ್ರಿಕೆಟ್  ಕನ್ನಡ ನ್ಯೂಸ್

ಮೇ 4, 5 & 6, ರಂದು ಉಚಿತ ರಾಜ್ಯಮಟ್ಟದ ಮಕ್ಕಳ ಸಾಹಿತ್ಯ ಸಂಸ್ಕೃತಿ ಕಮ್ಮಟ  

---Advertisement---

ವರದಿ ಮತ್ತು ಫೋಟೋ ಕೃಪೆ
ಸುರೇಶ್ ಪಟ್ಟಣ್,
ಮೊ : 98862 95817

ಸುದ್ದಿಒನ್, ಚಿತ್ರದುರ್ಗ, ಏ. 30 : ಕರ್ನಾಟಕ ರಾಜ್ಯ ಮಕ್ಕಳ ಸಾಹಿತ್ಯ ಪರಿಷತ್ (ರಿ.), ತರಳಬಾಳು ಜಗದ್ಗುರು ಶಾಖಾ ಮಠ, ಸಾಣೆಹಳ್ಳಿ ಹಾಗೂ ಚಿತ್ರದುರ್ಗ ಜಿಲ್ಲಾ ಮಕ್ಕಳ ಸಾಹಿತ್ಯ ಪರಿಷತ್ತು ಇವರ ಸಹಯೋಗದಲ್ಲಿ, ರಾಜ್ಯಮಟ್ಟದ ಮಕ್ಕಳ ಸಾಹಿತ್ಯ ಸಂಸ್ಕೃತಿ ಕಮ್ಮಟವು ದಿನಾಂಕ 4.05.2025 ರಿಂದ 6.5.2025 ವರೆಗೆ ಮೂರು ದಿನಗಳು ವಿವಿಧ ವೈವಿಧ್ಯಮಯ ಕಾರ್ಯಕ್ರಮ ಜರುಗುತ್ತವೆ.

ಅನುಭವಿ ತಜ್ಞರು ಕಮ್ಮಟದ ನೇತೃತ್ವವಹಿಸುತ್ತಿದ್ದು ಈ ಕಮ್ಮಟದಲ್ಲಿ, ಕವನ ರಚನೆ ಕಥೆ ಹೇಳುವುದು. ನಾಟಕ
ಚಿತ್ರಕಲೆ ಹಸೆ ಚಿತ್ತಾರ ಸಂಗೀತ ಯಕ್ಷಗಾನ ಮೂಲ ಜಾನಪದ ನೃತ್ಯ ಕಲೆಗಳ ಬಗ್ಗೆ ಉಚಿತ ತರಬೇತಿ ನೀಡಲಾಗುವುದು. ಊಟ ಹಾಗೂ ವಸತಿ ಸೌಲಭ್ಯವನ್ನು ಉಚಿತವಾಗಿ ನೀಡುತ್ತಿದ್ದು, ಊಟಕ್ಕೆ ತಟ್ಟೆ ಲೋಟ, ಮಲಗಲು ಜಮಖಾನವನ್ನು ತರುವುದು ಹಾಗೂ ಪ್ರಯಾಣ ಭತ್ಯೆ ನೀಡುವುದಿಲ್ಲ. ಈ ಕಾರ್ಯಕ್ರಮಕ್ಕೆ ನಮ್ಮ ಚಿತ್ರದುರ್ಗ ಜಿಲ್ಲೆಯ ವತಿಯಿಂದ 25 ವಿದ್ಯಾರ್ಥಿಗಳು ಭಾಗವಹಿಸಲು ಅವಕಾಶವಿರುತ್ತದೆ. ಆಸಕ್ತ ಮಕ್ಕಳು ತಮ್ಮ ಹೆಸರನ್ನು ನೋಂದಾಯಿಸಿಕೊಳ್ಳಲು ಕೋರಲಾಗಿದೆ.

ಆಸಕ್ತ ವಿದ್ಯಾರ್ಥಿಗಳು ನೋಂದಾಯಿಸಿಕೊಳ್ಳಲು ಯೋಗೀಶ್ ಸಹ್ಯಾದ್ರಿ, ಅಧ್ಯಕ್ಷರು, ಜಿಲ್ಲಾ ಮಕ್ಕಳ ಸಾಹಿತ್ಯ ಪರಿಷತ್ತು, ಚಿತ್ರದುರ್ಗ. ಮೊ : 9972240239. ಮಾರುತಿ ನಾಯ್ಕ್, ಪ್ರಧಾನ ಕಾರ್ಯದರ್ಶಿ. ಮ. ಸಾ. ಪ. ಚಿತ್ರದುರ್ಗ ಮೊ : 99863 36164. ವಿಜಯ್ ಕುಮಾರ್ ಬಿ. ಉಪಾಧ್ಯಕ್ಷರು. ಮ. ಸಾ. ಪ, ಚಿತ್ರದುರ್ಗ.* ಮೊ : 96867 24546. ಹಾಲೇಶ್ ಸಿ.ಜಿ, ಸಂಘಟನಾ ಕಾರ್ಯದರ್ಶಿ, ಮ.ಸಾ.ಪ, ಚಿತ್ರದುರ್ಗ ಮೊ  : 77609 32325. ಸಂರ್ಪಕ ಮಾಡಬಹುದಾಗಿದೆ ಮೊದಲು ಕರೆ ಮಾಡಿದವರಿಗೆ ಆದ್ಯತೆ ನೀಡಲಾಗುವುದು.

 

 

suddionenews

ಕನ್ನಡ ಸುದ್ದಿಗಳ ವಿಶ್ವಾಸಾರ್ಹ ಮೂಲ — suddione.com ನಲ್ಲಿ ಓದಿ ರಾಷ್ಟ್ರೀಯ, ಅಂತರರಾಷ್ಟ್ರೀಯ, ರಾಜಕೀಯ, ಕ್ರೀಡೆ, ಮನರಂಜನೆ, ವಾಣಿಜ್ಯ, ಶಿಕ್ಷಣ ಮತ್ತು ತಂತ್ರಜ್ಞಾನಕ್ಕೆ ಸಂಬಂಧಿಸಿದ ಪ್ರತಿಯೊಂದು ಪ್ರಮುಖ ಅಪ್‌ಡೇಟ್. ನೀವು ಯಾವಾಗಲೂ ಅಪ್‌ಡೇಟ್ ಆಗಿರಲು ನಾವು ವೇಗವಾದ, ನಿಖರವಾದ ಮತ್ತು ನಿಷ್ಪಕ್ಷಪಾತವಾದ ಸುದ್ದಿಗಳನ್ನು ಸರಳ ಹಾಗೂ ಸ್ಪಷ್ಟ ಭಾಷೆಯಲ್ಲಿ ನೀಡುತ್ತೇವೆ. ಸಂಪಾದಕರು: ನಾಗೇಂದ್ರ ರೆಡ್ಡಿ ಪಿ.ಎಲ್

Join WhatsApp

Join Now

Join Telegram

Join Now

Leave a Comment

🏫 ಅಡ್ಮಿಷನ್ ಓಪನ್
🔒

ಇಂಡಿಯನ್ ಇಂಟರ್ ನ್ಯಾಷನಲ್ ಸ್ಕೂಲ್

ಸ್ವಾಗತ...