ಇಂಡಿಯನ್ ಇಂಟರ್ ನ್ಯಾಷನಲ್ ಸ್ಕೂಲ್, ಚಿತ್ರದುರ್ಗ
2026-27ನೇ ಸಾಲಿನ ದಾಖಲಾತಿಗಳು ಪ್ರಾರಂಭ! (ಪ್ಲೇ ಗ್ರೂಪ್ನಿಂದ 12ನೇ ತರಗತಿವರೆಗೆ)
2026-27ನೇ ಸಾಲಿನ ದಾಖಲಾತಿಗಳು ಪ್ರಾರಂಭ! (ಪ್ಲೇ ಗ್ರೂಪ್ನಿಂದ 12ನೇ ತರಗತಿವರೆಗೆ)
ವರದಿ ಮತ್ತು ಫೋಟೋ ಕೃಪೆ ಕೆ.ಎಂ.ಮುತ್ತುಸ್ವಾಮಿ ಕಣ್ಣನ್
ಮೊ : 78998 64552
ಸುದ್ದಿಒನ್, ಚಿತ್ರದುರ್ಗ,(ಜು.13) : ಪ್ಲಾಸ್ಟಿಕ್ ಮುಕ್ತ ನಗರ ನಿರ್ಮಾಣಕ್ಕಾಗಿ ಜಿಲ್ಲಾಡಳಿತ ಹಾಗೂ ನಗರಸಭೆ ವತಿಯಿಂದ ಜು.1 ರಿಂದ 28 ರವರೆಗೆ ನಗರದಲ್ಲಿ ಪ್ಲಾಸ್ಟಿಕ್ ಮುಕ್ತ ಅಭಿಯಾನ ಹಮ್ಮಿಕೊಳ್ಳಲಾಗಿದೆ.
ಸಂತ ಜೋಸೆಫ್ ಕಾನ್ವೆಂಟ್ ಹಾಗೂ ಬಾಲಕಿಯರ ಸರ್ಕಾರಿ ಪದವಿಪೂರ್ವ ಕಾಲೇಜಿನಲ್ಲಿ ಆಯೋಜಿಸಲಾಗಿದ್ದ ಅಭಿಯಾನ ಉದ್ದೇಶಿಸಿ ಮಾತನಾಡಿದ ಪರಿಸರ ತಜ್ಞ ಎಚ್.ಎಸ್.ಕೆ.ಸ್ವಾಮಿ ಪ್ಲಾಸ್ಟಿಕ್ ಬಳಸಿ ಎಲ್ಲೆಂದರಲ್ಲಿ ಎಸೆಯುವುದರಿಂದ ಪರಿಸರ ಹಾಳಾಗುತ್ತದೆ.
ಎಷ್ಟು ವರ್ಷಗಳಾದರೂ ಪ್ಲಾಸ್ಟಿಕ್ ಮಣ್ಣಿನಲ್ಲಿ ಕೊಳೆಯುವುದಿಲ್ಲ. ಹಾಗಾಗಿ ಪ್ಲಾಸ್ಟಿಕ್ಗೆ ಪರ್ಯಾಯವಾಗಿ ಪರಿಸರ ಸ್ನೇಹಿ ಸಾಮಾಗ್ರಿಗಳನ್ನು ಬಳಸುವುದನ್ನು ಮಕ್ಕಳು ಚಿಕ್ಕಂದಿನಿಂದಲೇ ರೂಢಿಸಿಕೊಳ್ಳಬೇಕು. ವಿದೇಶಗಳಲ್ಲಿ ಮಕ್ಕಳು ಚಾಕೊಲೇಟ್ ತಿಂದು ಕವರನ್ನು ರಸ್ತೆಗೆ ಎಸೆಯುವುದಿಲ್ಲ. ಜೇಬಿನಲ್ಲಿಟ್ಟುಕೊಂಡು ಡಸ್ಟ್ಬಿನ್ಗೆ ಹಾಕುತ್ತಾರೆ. ನಮ್ಮಲ್ಲಿಯೂ ಅಂತಹ ಜಾಗೃತಿ ಬೆಳೆಸಿಕೊಳ್ಳಬೇಕು ಎಂದು ವಿದ್ಯಾರ್ಥಿನಿಯರಲ್ಲಿ ಮನವಿ ಮಾಡಿದರು.
ಪ್ರತಿಯೊಬ್ಬರು ಬಳಸಿದ ಪ್ಲಾಸ್ಟಿಕ್ನ್ನು ಬೀದಿಯಲ್ಲಿ ಎಸೆಯುವುದರಿಂದ ಓಜೋನ್ ಪದರ ಹಾಳಾಗಿದೆ. ಹಸಿ ಕಸ, ಒಣ ಕಸವನ್ನು ಮನೆಯಲ್ಲಿಯೇ ಬೇರ್ಪಡಿಸಿ ಪ್ರತಿನಿತ್ಯ ಬೆಳಿಗ್ಗೆ ಮನೆ ಬಾಗಿಲಿಗೆ ಬರುವ ನಗರಸಭೆಯ ಕಸದ ವಾಹನಕ್ಕೆ ಹಾಕಿ ಪರಿಸರವನ್ನು ಸ್ವಚ್ಚವಾಗಿಟ್ಟುಕೊಳ್ಳಬಹುದು ಎಂದು ಹೇಳಿದರು.
ನಗರಸಭೆ ಹೆಲ್ತ್ ಇನ್ಸ್ಪೆಕ್ಟರ್ಗಳಾದ ಸರಳ, ಭಾರತಿ, ಪರಿಸರ ಇಂಜಿನಿಯರ್ ಜಾಫರ್, ಆರೋಗ್ಯ ಶಾಖೆಯ ಸಹಾಯಕಿ ತಬ್ಸಂಭಾನು, ಪೌರ ಕಾರ್ಮಿಕರು ಅಭಿಯಾನದಲ್ಲಿದ್ದರು.

ನಿಮ್ಮ ಊರಿನ ಅದ್ಧೂರಿ ಜಾತ್ರೆ, ವಿಶೇಷ ಆಚರಣೆಗಳು, ಅಥವಾ ನಿಮ್ಮ ಗಮನಕ್ಕೆ ಬಂದ ಸ್ಥಳೀಯ ಸಮಸ್ಯೆಗಳೇ? ಚಿತ್ರದುರ್ಗ ಹಾಗೂ ಸುತ್ತಮುತ್ತಲಿನ ಯಾವುದೇ ಸುದ್ದಿಯಾದರೂ ನಮಗೆ ತಿಳಿಸಿ. ನಿಮ್ಮ ಧ್ವನಿಯಾಗಿ ನಾವು ನಾಡಿಗೆ ತಲುಪಿಸುತ್ತೇವೆ. ಛಾಯಾಚಿತ್ರ ಮತ್ತು ವಿವರಗಳೊಂದಿಗೆ ನಮಗೆ ಇಮೇಲ್ ಮಾಡಿ.
✉️ suddionenews@gmail.com🛡️ ನಿಮ್ಮ ಮಾಹಿತಿಯನ್ನು ಗೌಪ್ಯವಾಗಿಡಲಾಗುವುದು.






ಕನ್ನಡ ಸುದ್ದಿಗಳ ವಿಶ್ವಾಸಾರ್ಹ ಮೂಲ — suddione.com ನಲ್ಲಿ ಓದಿ ರಾಷ್ಟ್ರೀಯ, ಅಂತರರಾಷ್ಟ್ರೀಯ, ರಾಜಕೀಯ, ಕ್ರೀಡೆ, ಮನರಂಜನೆ, ವಾಣಿಜ್ಯ, ಶಿಕ್ಷಣ ಮತ್ತು ತಂತ್ರಜ್ಞಾನಕ್ಕೆ ಸಂಬಂಧಿಸಿದ ಪ್ರತಿಯೊಂದು ಪ್ರಮುಖ ಅಪ್ಡೇಟ್. ನೀವು ಯಾವಾಗಲೂ ಅಪ್ಡೇಟ್ ಆಗಿರಲು ನಾವು ವೇಗವಾದ, ನಿಖರವಾದ ಮತ್ತು ನಿಷ್ಪಕ್ಷಪಾತವಾದ ಸುದ್ದಿಗಳನ್ನು ಸರಳ ಹಾಗೂ ಸ್ಪಷ್ಟ ಭಾಷೆಯಲ್ಲಿ ನೀಡುತ್ತೇವೆ. ಸಂಪಾದಕರು: ನಾಗೇಂದ್ರ ರೆಡ್ಡಿ ಪಿ.ಎಲ್