Warning: Undefined array key "options" in /home/nagendra/public_html/content/plugins/elementor-pro/modules/theme-builder/widgets/site-logo.php on line 124

ಫೆಬ್ರವರಿ 06 ರಿಂದ ಹೊರಕೇರಿದೇವರಪುರ ಶ್ರೀ ಲಕ್ಷ್ಮೀನರಸಿಂಹಸ್ವಾಮಿ ಮಹೋತ್ಸವ

Facebook
Twitter
Telegram
WhatsApp

ಚಿತ್ರದುರ್ಗ(ಜ.27) :  ಜಿಲ್ಲೆಯ ಹೊಳಲ್ಕೆರೆ ತಾಲ್ಲೂಕು ಹೊರಕೇರಿದೇವರಪುರದಲ್ಲಿ ಫೆ. 06 ರಿಂದ 08 ರವರೆಗೆ ಹಿಂದೂ ಧಾರ್ಮಿಕ ಸಂಸ್ಥೆಗಳು ಮತ್ತು ಧರ್ಮದಾಯ ದತ್ತಿ ಇಲಾಖೆ ವ್ಯಾಪ್ತಿಯಲ್ಲಿ ಬರುವ ಶ್ರೀ ಲಕ್ಷ್ಮೀನರಸಿಂಹಸ್ವಾಮಿ ದೇವಾಲಯದಲ್ಲಿ ಗುಂಡಿನಸೇವಾ ಮತ್ತು ಅನ್ನದಕೋಟೆ ಮಹೋತ್ಸವ ಆಚರಣೆ ನಿಮಿತ್ಯ ಹಲವು ಧಾರ್ಮಿಕ ಕಾರ್ಯಕ್ರಮಗಳು ಜರುಗಲಿವೆ.

ಫೆಬ್ರವರಿ. 06 ರಿಂದ 07 ರವರೆಗೆ ಶ್ರೀ ಸ್ವಾಮಿಯ ಮೂಲ ನೆಲೆಯಾದ ಕೃಷ್ಣಾಚಲ ಮತ್ತು ದೇವಸ್ಥಾನದ ಮುಂದಿನ ವೈಕುಂಠ ಮಂಟಪದಲ್ಲಿ ಪಂಚರಾತ್ರಾಗಮ ಪ್ರಕಾರ ಲೋಕಕಲ್ಯಾಣಾರ್ಥವಾಗಿ ಗುಂಡಿನ ಸೇವೆ ಮತ್ತು ಅನ್ನದಕೋಟೆ ಸೇರಿದಂತೆ ವಿವಿಧ ಧಾರ್ಮಿಕ ವಿಧಿ ವಿಧಾನಗಳು ನೆರವೇರಲಿದೆ.

ಈ ಕಾರ್ಯಕ್ರಮಗಳಲ್ಲಿ ಜಿಲ್ಲೆಯ ವಿವಿಧ ಗಣ್ಯಾತಿಗಣ್ಯರು, ಉನ್ನತ ಅಧಿಕಾರಿಗಳು ಪಾಲ್ಗೊಳ್ಳುವರು.

ಫೆ. 06 ರಂದು ಬೆಳಿಗ್ಗೆ ದೇವಾಲಯದಲ್ಲಿ ಮಹಾಭಿಷೇಕ, ಮ. 3 ಗಂಟೆಗೆ ಸ್ವಾಮಿಯ ಕೃಷ್ಣಾಚಲ (ಕರೇಕಲ್ಲು) ಬೆಟ್ಟಕ್ಕೆ ತೆರಳುವುದು, ಸಂಜೆ 04 ಗಂಟೆಯಿಂದ ಆಹ್ವಾನಿತ ದೇವರುಗಳನ್ನು ಗ್ರಾಮದೇವತೆಗಳಾದ ದೊಡ್ಡ ಕರಿಯಮ್ಮದೇವಿ ಮತ್ತು ಸಣ್ಣ ಕರಿಯಮ್ಮ ದೇವಿಯವರಿಂದ ವೈಕುಂಠ ಮಂಟಪಕ್ಕೆ ಆಹ್ವಾನಿಸುವ ಕಾರ್ಯಕ್ರಮ ಜರುಗಲಿದೆ.

ಅದೇ ರೀತಿ ಫೆ. 07 ರಂದು ಬೆಳಿಗ್ಗೆ 8 ರಿಂದ ಸ್ವಾಮಿಯ ದಿವ್ಯಸನ್ನಿಧಿ ಮತ್ತು ಎಲ್ಲ ದೇವರುಗಳ ಸಮ್ಮುಖದಲ್ಲಿ ಮಹಾ ಮಂಗಳಾರತಿ, ಹೋಮ ನೆರವೇರಲಿದ್ದು, ಶ್ರೀಸ್ವಾಮಿಯ ಹೂವಿನ ಹಾರವನ್ನು ಬಳಿಕ ಹರಾಜು ಮಾಡಲಾಗುತ್ತದೆ.  ಬೆಳಿಗ್ಗೆ 10.30 ರಿಂದ 11 ಗಂಟೆಗೆ ವೈಕುಂಠ ಮಂಟಪದಲ್ಲಿ ಅನ್ನದಕೋಟೆ ಕಾರ್ಯಕ್ರಮದ ಮಹಾ ಮಂಗಳಾರತಿ ಮತ್ತು ಆಹ್ವಾನಿತ ದೇವರುಗಳಿಗೆ ನೈವೇದ್ಯ ಮತ್ತು ಮಹಾಮಂಗಳಾರತಿ ಪ್ರಸಾದ ವಿನಿಯೋಗ ಜರುಗುವುದು.

ಫೆ. 08 ರಂದು ಸಂಜೆ 4 ಗಂಟೆಗೆ ಅನ್ನದ ಕೋಟೆಯು ನಡೆದ ಮಂಟಪದಲ್ಲಿ ಶ್ರೀ ಲಕ್ಷ್ಮೀ ನರಸಿಂಹಸ್ವಾಮಿ ಮತ್ತು ಗ್ರಾಮದೇವತೆ ಕರಿಯಮ್ಮ ದೇವರುಗಳಿಗೆ ಗ್ರಾಮಸ್ಥರು ಹಾಗೂ ಸಾರ್ವಜನಿಕರಿಂದ ಮಹಾಪೂಜೆ ಹಾಗೂ ಪಟ್ಟದ ದಾಸಯ್ಯ ಮತ್ತಿತರರಿಗೆ ಗೌರವ ಸಮರ್ಪಣೆ ಜರುಗಲಿದೆ.

ಫೆ. 06 ರಂದು ಸಂಜೆ 4 ಗಂಟೆಯಿಂದ ರಾತ್ರಿ 10 ರವರೆಗೆ ಎಲ್ಲ ಭಕ್ತಾದಿಗಳಿಗೆ ಊಟದ ವ್ಯವಸ್ಥೆ ಕಲ್ಪಿಸಲಾಗಿದ್ದು, ಫೆ. 07 ರಂದು ಬೆಳಿಗ್ಗೆ 7 ಗಂಟೆಗೆ ಲಘು ಉಪಹಾರ, ಮಧ್ಯಾಹ್ನ 01 ರ ನಂತರ ನಿರಂತರ ಊಟದ ವ್ಯವಸ್ಥೆ ಇರುತ್ತದೆ.  ಭಕ್ತಾದಿಗಳು ಹೆಚ್ಚಿನ ಸಂಖ್ಯೆಯಲ್ಲಿ ಭಾಗವಹಿಸಿ ದೇವರ ಕೃಪೆಗೆ ಪಾತ್ರರಾಗಬೇಕು ಎಂದು ಪ್ರಕಟಣೆ ತಿಳಿಸಿದೆ.

Facebook
Twitter
Telegram
WhatsApp
suddionenews

suddionenews

Leave a Comment

Top Stories

ಅಣ್ಣಾವ್ರಿಗೆ ಅಣ್ಣಾವ್ರೇ ಸಾಟಿ, ಹಿರಿಯೂರಲ್ಲಿ ಬಿ.ಎನ್.ಚಂದ್ರಪ್ಪ ಬಣ್ಣನೆ

ಸುದ್ದಿಒನ್, ಚಿತ್ರದುರ್ಗ, ಏ. 24 :  ಮುಖ್ಯಮಂತ್ರಿ ಸ್ಥಾನವನ್ನು ಸುಲಭವಾಗಿ ಅಲಂಕರಿಸುವ ಬಂದಿದ್ದ ಅವಕಾಶವನ್ನು ನಿರಾಕರಿಸಿ, ಕನ್ನಡ ನಾಡು-ನುಡಿಗೆ ಬದುಕು ಮಿಸಲಿಟ್ಟ ಡಾ.ರಾಜಕುಮಾರ್ ಅವರಿಗೆ ಅವರೇ ಸಾಟಿ ಎಂದು ಕಾಂಗ್ರೆಸ್ ಅಭ್ಯರ್ಥಿ ಬಿ.ಎನ್.ಚಂದ್ರಪ್ಪ ಬಣ್ಣಿಸಿದರು.

ಭದ್ರಾ ಮೇಲ್ದಂಡೆ ಯೋಜನೆ ಬಗ್ಗೆ ಸುಳ್ಳು ಹೇಳಿದರೆ ತಾಯಿ ಭದ್ರೆ ಸಹಿಸುವುದಿಲ್ಲ : ಕಮಲ ಪಡೆಗೆ ಕಾಂಗ್ರೆಸ್ ಅಭ್ಯರ್ಥಿ ಬಿ.ಎನ್.ಚಂದ್ರಪ್ಪ ತಿರುಗೇಟು

ಸುದ್ದಿಒನ್, ಚಿತ್ರದುರ್ಗ, ಏ. 24 : ಭದ್ರಾ ಮೇಲ್ದಂಡೆ ಯೋಜನೆ ವಿಷಯದಲ್ಲಿ ನಿರಂತರ ಸುಳ್ಳು ಹೇಳಿಕೊಂಡು ಬರುತ್ತಿರುವ ಬಿಜೆಪಿಯವರಿಗೆ ಭದ್ರಾ ಮೇಲ್ದಂಡೆ ಯೋಜನೆ ಜಾರಿ, ಅದಕ್ಕಾಗಿ ನಡೆದ ಹೋರಾಟದ ಮಾಹಿತಿ ಕೊರತೆ ಇದೆ ಅಥವಾ

ಏಪ್ರಿಲ್ 26 ರಂದು ಲೋಕಸಭೆ ಚುನಾವಣೆ | ಸಾರ್ವತ್ರಿಕ ರಜಾದಿನ ಘೋಷಣೆ

ಚಿತ್ರದುರ್ಗ. ಏ.24: ಎರಡನೇ ಹಂತದ ಲೋಕಸಭೆ ಸಾರ್ವತ್ರಿಕ ಚುನಾವಣೆಗೆ ಏಪ್ರಿಲ್ 26 ರಂದು ಚಿತ್ರದುರ್ಗ ಜಿಲ್ಲೆಯಲ್ಲಿ ಮತದಾನ ಜರುಗಲಿದೆ. ಮತದಾನದ ದಿನವನ್ನು ಸಾರ್ವತ್ರಿಕ ರಜಾದಿನವನ್ನಾಗಿ ಘೋಷಣೆ ಮಾಡಲಾಗಿದೆ. ಅಂದು ಎಲ್ಲಾ ಸರ್ಕಾರಿ ಹಾಗೂ ಖಾಸಗಿ

error: Content is protected !!