Kannada news ಚಿತ್ರದುರ್ಗ ದಾವಣಗೆರೆ ಬೆಂಗಳೂರು ರಾಜಕೀಯ ಚುನಾವಣೆ ಮಳೆ ಕ್ರಿಕೆಟ್ ಭಾರತ ಚಿನ್ನ ಬೆಳ್ಳಿ ಹವಾಮಾನ ಕ್ರಿಕೆಟ್  ಕನ್ನಡ ನ್ಯೂಸ್

ಇನ್ಮುಂದೆ ಉಪೇಂದ್ರ ಅವರನ್ನ ಬುದ್ದಿವಂತ ಅನ್ನಬಾರದಂತೆ..!

---Advertisement---

ಲೋಕಸಭಾ ಚುನಾವಣೆಯಲ್ಲಿ ಈ ಬಾರಿ ಪವನ್ ಕಲ್ಯಾಣ್ ಕೂಡ ಗೆಲುವು ಕಂಡಿದ್ದಾರೆ. ಸತತವಾಗಿ ಚುನಾವಣೆಯಲ್ಲಿ ಸ್ಪರ್ಧೆ ಮಾಡುತ್ತಿದ್ದರು, ಸೋಲನ್ನೇ ಕಂಡಿದ್ದ ಪವನ್ ಕಲ್ಯಾಣ್ ಮೊದಲ ಬಾರಿಗೆ ಜನರ ಮನಸ್ಸನ್ನು ಗೆದ್ದಿದ್ದಾರೆ. ಈ ಬೆನ್ನಲ್ಲೇ ಉಪೇಂದ್ರ ಕುರಿತಾಗಿ ಟ್ರೋಲ್ ಒಂದು ಹರಿದಾಡುತ್ತಿದೆ. ಅದುವೆ ಪವನ್ ಕಲ್ಯಾಣ್ ಗೆಲ್ಲಿಸುವುದಕ್ಕೆ 12 ವರ್ಷ ಬೇಕಾಯ್ತು, ಇನ್ನು ಉಪೇಂದ್ರ ಅವರನ್ನು ಗೆಲ್ಲಿಸುವುದುಕ್ಕೆ ಇನ್ನೆಷ್ಟು ವರ್ಷ ತೆಗೆದುಕೊಳ್ಳುತ್ತಾರೋ ಎಂಬ ಪೋಸ್ಟ್ ಸಿಕ್ಕಾಪಟ್ಟೆ ವೈರಲ್ ಆಗುತ್ತಿದೆ. ಇದೇ ಪೋಸ್ಟ್ ಅನ್ನು ನಟ ಉಪೇಂದ್ರ ಅವರು ರೀಪೋಸ್ಟ್ ಮಾಡಿ, ನನ್ನನ್ನು ಇನ್ಮುಂದೆ ಬುದ್ದಿವಂತ ಎಂದು ಕರೆಯಬೇಡಿ ಎಂದಿದ್ದಾರೆ.

ಟ್ವೀಟ್ ಮಾಡಿರುವ ಉಪೇಂದ್ರ ಅವರು, ‘ವಾಹ್ ಮೈ ಡಿಯರ್ ಪ್ರಜಾಪ್ರಭುಗಳೇ ವಾಹ್… ಉಪೇಂದ್ರ ಸೋಲು ಗೆಲವು ಬಗ್ಗೆ ತುಂಬಾ ಚಿಂತೆ ಮಾಡ್ತಿದೀರ ! ಎಂತಾ ನಿಸ್ವಾರ್ಥ ! ಎಂತಾ ತ್ಯಾಗ ಮನೋಭಾವ ! ನಿಮ್ಮೆಲ್ಲರ ಪಾದಕ್ಕೆ ಅಡ್ ಬಿದ್ದೆ. ಡೋಂಟ್ ವರೀ… ನಾನ್ ಗೆಲ್ಬೇಕು ಅಂತ ಅನ್ನಿಸಿದಾಗ ಯಾವುದಾದರೂ ರಾಜಕೀಯ ಪಕ್ಷ ಸೇರಿ ನೀವ್ ಹೇಳ್ದಾಗೆಲ್ಲಾ ಮಾಡ್ತೀನಿ..ಗೆದ್ದೇ ಗೆಲ್ತೀನಿ..

ನೀವ್ ಗೆಲ್ಲೋದ್ ಯಾವಾಗ ಅಂತ ನೀವ್ ಯೋಚನೆ ಮಾಡ್ರಪ್ಪೋ. ನೆಕ್ಸ್ಟ್ ಎಲೆಕ್ಷನ್ ನಲ್ಲಿ ನನಗ್ ಕೆಲ್ಸಾ ಕೊಡ್ತೀರ ಅಂದ್ರೆ ನಿಲ್ತೀನಿ ಆಗ್ಲೂ ನೀವ್ ಎಮೋಸನಲ್ ಪ್ರಚಾರ ಮಾಡ್ರೀ, ಸಭೆ ಸಮಾರಂಭ ಎಲ್ಲಾ ಮಾಡ್ರೀ, ಕಷ್ಟ ಪಡ್ರೀ, ಆಮೇಲ್ ಐದು ವರ್ಸ ನೀವೇನ್ ಬೇಕಾದ್ರೂ ಮಾಡ್ಕಳಿ ನಾವ್ ಕೇಳಕ್ ಬರಲ್ಲ ಅಂದ್ರೆ, ಉಫ್.. ಏನ್ ಬರೀಬೇಕೋ ಗೊತ್ತಾಗ್ತಿಲಿರಪ್ಪೋ ಈ ದಡ್ ನನ್ ಮಗಂಗೇ ಯಾವೋನಾದ್ರ ಇನ್ ಮೇಲೆ ಬುದ್ದಿವಂತಾ ಅಂದ್ರೇ ಅಷ್ಟೇ… ಸೆಂದಾಗಿರಕ್ಕಿಲ್ಲಾ..! ಎಂದು ಟ್ವೀಟ್ ಮಾಡಿದ್ದಾರೆ.

ಸಾರ್ವಜನಿಕ ಕುಂದುಕೊರತೆ ವಿಭಾಗ : ನಿಮ್ಮ ಧ್ವನಿ - ನಮ್ಮ ವೇದಿಕೆ

ನಿಮ್ಮ ಊರಿನ ಸಮಸ್ಯೆಗಳು ಇನ್ನು ಮುಂದೆ ಕೇವಲ ಚರ್ಚೆಯಾಗಬಾರದು, ಅವುಗಳಿಗೆ ಪರಿಹಾರ ಸಿಗಬೇಕು.

ವರದಿ ಮಾಡುವುದು ಹೇಗೆ?

  • ನಿಮ್ಮ ಸುತ್ತಮುತ್ತಲಿನ ರಸ್ತೆ, ನೀರು, ವಿದ್ಯುತ್ ಸಮಸ್ಯೆಗಳ ಫೋಟೋ, ವಿಡಿಯೋ ಅಥವಾ ಮಾಹಿತಿ ನಮಗೆ ಕಳುಹಿಸಿ.
ವಾಟ್ಸಪ್ ಮಾಡಿ: 90369 74702

ನಾವು ಏನು ಮಾಡುತ್ತೇವೆ?

  • ನೀವು ಕಳುಹಿಸಿದ ವರದಿಗಳನ್ನು suddione.com ನಲ್ಲಿ ಪ್ರಕಟಿಸುತ್ತೇವೆ.
  • ಸಂಬಂಧಪಟ್ಟ ಇಲಾಖೆಯ ಅಧಿಕಾರಿಗಳ ಗಮನಕ್ಕೆ ತಂದು ಪರಿಹಾರಕ್ಕಾಗಿ ಒತ್ತಾಯಿಸುತ್ತೇವೆ.
  • ನಿಮ್ಮೂರಿನ ಅಭಿವೃದ್ಧಿಗೆ ನಿಮ್ಮೊಂದಿಗೆ ಧ್ವನಿಗೂಡಿಸುತ್ತೇವೆ.

suddionenews

ಕನ್ನಡ ಸುದ್ದಿಗಳ ವಿಶ್ವಾಸಾರ್ಹ ಮೂಲ — suddione.com ನಲ್ಲಿ ಓದಿ ರಾಷ್ಟ್ರೀಯ, ಅಂತರರಾಷ್ಟ್ರೀಯ, ರಾಜಕೀಯ, ಕ್ರೀಡೆ, ಮನರಂಜನೆ, ವಾಣಿಜ್ಯ, ಶಿಕ್ಷಣ ಮತ್ತು ತಂತ್ರಜ್ಞಾನಕ್ಕೆ ಸಂಬಂಧಿಸಿದ ಪ್ರತಿಯೊಂದು ಪ್ರಮುಖ ಅಪ್‌ಡೇಟ್. ನೀವು ಯಾವಾಗಲೂ ಅಪ್‌ಡೇಟ್ ಆಗಿರಲು ನಾವು ವೇಗವಾದ, ನಿಖರವಾದ ಮತ್ತು ನಿಷ್ಪಕ್ಷಪಾತವಾದ ಸುದ್ದಿಗಳನ್ನು ಸರಳ ಹಾಗೂ ಸ್ಪಷ್ಟ ಭಾಷೆಯಲ್ಲಿ ನೀಡುತ್ತೇವೆ. ಸಂಪಾದಕರು: ನಾಗೇಂದ್ರ ರೆಡ್ಡಿ ಪಿ.ಎಲ್

Join WhatsApp

Join Now

Join Telegram

Join Now

Leave a Comment