ದಯಾಮರಣಕ್ಕೆ ಸರ್ಕಾರದಿಂದ ಅಸ್ತು : ಅನುಮತಿ ಪ್ರಕ್ರಿಯೆ ಹೀಗೆ..!

ಬೆಂಗಳೂರು: ಮಾರಣಾಂತಿಕ ಕಾಯಿಲೆಯಿಂದ ಬಳಲುತ್ತಾ ಇದ್ದು, ಚೇತರಿಕೆಯೇ ಕಾಣದೆ ಜೀವನಪೂರ್ತಿ ಸಂಕಷ್ಟ ಅನುಭವಿಸುವ ಸ್ಥಿತಿಯಲ್ಲಿರುವವರಿಗೆ, ಘನತೆಯಿಂದ ಸಾಯುವ ಹಕ್ಕನ್ನು ನೀಡಿ ಕರ್ನಾಟಕ ಆರೋಗ್ಯ ಇಲಾಖೆ ಆದೇಶವನ್ನು ಹೊರಡಿಸಿದೆ. ಅಂದ್ತೆ ದಯಾಮರಣಕ್ಕೆ ಸರ್ಕಾರ ಅಸ್ತು ಎಂದಿದೆ. ಮಾರಕ ರೋಗದಿಂದ ಬಳಲುತ್ತಿರುವವರಿಗೆ ಸಾಯುವ ಹಕ್ಕನ್ನು ನೀಡುವ ಮೂಲಕ ಕರ್ನಾಟಕ ಆರೋಗ್ಯ ಇಲಾಖೆಯೂ ಸುಪ್ರೀಂ ಕೋರ್ಟ್ ನ ನಿರ್ದೇಶನವನ್ನು ಜಾರಿ ಮಾಡಿದಂತಾಗಿದೆ.

ದಯಾಮರಣಕ್ಕೆ ಸಂಬಂಧಿಸಿದಂತೆ ಸುಪ್ರೀಂ ಕೋರ್ಟ್ ಏನು ಹೇಳಿತ್ತು, ತಾವೂ ನರ್ಸ್ ಆಗಿ ಕೆಲಸ ಮಾಡುತ್ತಿದ್ದಂತ ಆಸ್ಪತ್ರೆಯಲ್ಲಿಯೇ ಸರಿಸುಮಾರು 42 ವರ್ಷಗಳ ಕಾಲ ಜೀವಚ್ಛವದಂತೆ ಬದುಕಿದ ಅರುಣಾ ಶಾನಭಾಗ್ ಅವರ ದಯಾಮರಣ ಅರ್ಜಿಯ ಕುರಿತ ತೀರ್ಪಿನ ವೇಳೆ ಸುಪ್ರೀಂ ಕೋರ್ಟ್ ಸರ್ಕಾರಕ್ಕೆ ಮಹತ್ವದ ನಿರ್ದೇಶನ ನೀಡಿತ್ತು. ದಯಾಮರಣ ನೀಡುವ ವಿಚಾರವಾಗಿ ಮಾರ್ಗದರ್ಶಕ ಸೂತ್ರಗಳನ್ನು ರೂಪಿಸುವಂತೆ ಸರ್ಕಾರಕ್ಕೆ ನಿರ್ದೇಶನ ನೀಡಿತ್ತು. ಇದೀಗ ಅದನ್ನು ಆರೋಗ್ಯ ಇಲಾಖೆ ಪಾಲಿಸಿದೆ.

ದಯಾಮರಣಕ್ಕೆ ಅವಕಾಶ ನೀಡುವುದನ್ನು ನಿರ್ಧರಿಸುವುದನ್ನು ಇಬ್ಬರು ವೈದ್ಯರನ್ನೊಳಗೊಂಡ ಎರಡು ಮಂಡಳಿಗಳ ಸ್ಥಾಪನೆ ಮಾಡುವ ಬಗ್ಗೆಯೂ ಆದೇಶದಲ್ಲಿ ಉಲ್ಲೇಖಿಸಲಾಗಿದೆ. ಗಂಭೀರವಾದ ಮತ್ತು ಮಾರಣಾಂತಿಕ ಕಾಯಿಲೆಯಿಂದ ಬಳಲುತ್ತಿರುವವರ ಕುಟುಂಬಸ್ಥರ ಮನವಿ ಮೇರೆಗೆ ವೈದ್ಯರ ತಂಡ ಕಾರ್ಯ ನಿರ್ವಹಿಸಬೇಕು. ಇದಕ್ಕಾಗಿ ಎರಡು ಪ್ರೈಮರಿ ಹಾಗೂ ಸೆಕೆಂಡರಿ ಎಂಬ ಎರಡು ವೈದ್ಯರ ಬೋರ್ಡ್ ಗಳನ್ನ ಸ್ಥಾಪಿಸಲಾಗುತ್ತಿದೆ. ಪ್ರೈಮರಿ ಬೋರ್ಡ್ ನಲ್ಲಿ ಮೂವರು ವೈದ್ಯರು ಇರುತ್ತಾರೆ. ಸೆಕೆಂಡರಿ ಬೋರ್ಡ್‌ನಲ್ಲಿ ಕೂಡ ಮೂವರು ವೈದ್ಯರು ಇರಲಿದ್ದಾರೆ. ಈ ಪೈಕಿ ಒಬ್ಬ ಸರ್ಕಾರಿ ವೈದ್ಯರು ಇರಲಿದ್ದಾರೆ. ರೋಗಿಯ ಕುಟುಂಬದವರು ಮಾಡಿದ ವರದಿಯನ್ನು ಮೊದಲು ಪ್ರೈಮರಿ ಬೋರ್ಡ್ ಪರಿಶೀಲನೆ ನಡೆಸುತ್ತಾರೆ.

suddionenews

Recent Posts

ಮೊಳಕಾಲ್ಮರು : ವಕೀಲರ ಸಂಘಕ್ಕೆ ನೂತನ ಅಧ್ಯಕ್ಷ – ಉಪಾಧ್ಯಕ್ಷರ ಆಯ್ಕೆ

  ವರದಿ ಮತ್ತು ಫೋಟೋ ಕೃಪೆ ಕೆ.ಎಂ. ಮುತ್ತುಸ್ವಾಮಿ ಕಣ್ಣನ್, ಮೊ : 78998 64552 ಸುದ್ದಿಒನ್, ಚಿತ್ರದುರ್ಗ, ಫೆಬ್ರವರಿ.…

8 hours ago

ವಿವಿಧ ಬೇಡಿಕೆಗಳನ್ನು ಈಡೇರಿಸುವಂತೆ ಕರ್ನಾಟಕ ದಲಿತ ಸಂಘರ್ಷ ಸಮಿತಿ ಪ್ರತಿಭಟನೆ

  ವರದಿ ಮತ್ತು ಫೋಟೋ ಕೃಪೆ ಕೆ.ಎಂ. ಮುತ್ತುಸ್ವಾಮಿ ಕಣ್ಣನ್, ಮೊ : 78998 64552 ಸುದ್ದಿಒನ್, ಚಿತ್ರದುರ್ಗ, ಫೆಬ್ರವರಿ.…

8 hours ago

ಕೌದಿ ವಸ್ತ್ರ ಧರಿಸಿ ಭಕ್ತಾಧಿಗಳಿಗೆ ದರ್ಶನಾರ್ಶೀವಾದ ನೀಡಿದ ಶಿವಲಿಂಗಾನಂದ ಶ್ರೀಗಳು

ವರದಿ ಮತ್ತು ಫೋಟೋ ಕೃಪೆ ಸುರೇಶ್ ಪಟ್ಟಣ್, ಮೊ : 98862 95817 ಸುದ್ದಿಒನ್, ಚಿತ್ರದುರ್ಗ ಫೆ 27 :…

8 hours ago

ಡಿ.ಕೆ.ಶಿವಕುಮಾರ್ ಮತೀಯ ಶಕ್ತಿಗಳೊಡನೆ ಕೈಜೋಡಿಸುವುದಿಲ್ಲ : ವಿ.ಎಸ್.ಉಗ್ರಪ್ಪ

  ವರದಿ ಮತ್ತು ಫೋಟೋ ಕೃಪೆ ಕೆ.ಎಂ. ಮುತ್ತುಸ್ವಾಮಿ ಕಣ್ಣನ್, ಮೊ : 78998 64552 ಸುದ್ದಿಒನ್, ಚಿತ್ರದುರ್ಗ, ಫೆಬ್ರವರಿ.…

8 hours ago

ಉಚಿತ ಯೋಗ, ಧ್ಯಾನ ಮತ್ತು ಪ್ರಾಣಾಯಾಮ ತರಬೇತಿ ಶಿಬಿರ

  ಸುದ್ದಿಒನ್, ಚಿತ್ರದುರ್ಗ, ಫೆಬ್ರವರಿ. 27 : ಪತಂಜಲಿ ಯೋಗ ಸಮಿತಿ, ಭಾರತ ಸ್ವಾಭಿಮಾನ ಟ್ರಸ್ಟ್ ಮಹಿಳಾ ಪತಂಜಲಿ ಯೋಗ…

9 hours ago

ಚಿತ್ರದುರ್ಗ ಜಿಲ್ಲಾ ಕನ್ನಡ ಸಾಹಿತ್ಯ ಸಮ್ಮೇಳನದ ಅಧ್ಯಕ್ಷರಾಗಿ ಪ್ರೊ.ಜಿ.ಪರಮೇಶ್ವರಪ್ಪ ಆಯ್ಕೆ

    ಸುದ್ದಿಒನ್, ಚಿತ್ರದುರ್ಗ, ಫೆಬ್ರವರಿ. 27 : ಹೊಳಲ್ಕೆರೆಯಲ್ಲಿ ಜರುಗಲಿರುವ ಜಿಲ್ಲಾ ಕನ್ನಡ ಸಾಹಿತ್ಯ ಸಮ್ಮೇಳನದ ಅಧ್ಯಕ್ಷರಾಗಿ ಪ್ರೊ.ಜಿ.ಪರಮೇಶ್ವರಪ್ಪನವರನ್ನು…

9 hours ago