Warning: Undefined array key "options" in /home/nagendra/public_html/content/plugins/elementor-pro/modules/theme-builder/widgets/site-logo.php on line 124

ರೈತರಿಗೆ ಬರ ಪರಿಹಾರ ಹಣ ಸೇರಿದಂತೆ ವಿವಿಧ ಬೇಡಿಕೆ ಈಡೇರಿಸಿ : ಸೋಮಗುದ್ದು ರಂಗಸ್ವಾಮಿ

Facebook
Twitter
Telegram
WhatsApp

 

ವರದಿ ಮತ್ತು ಫೋಟೋ ಕೃಪೆ ಕೆ.ಎಂ.ಮುತ್ತುಸ್ವಾಮಿ ಕಣ್ಣನ್
ಮೊ : 78998 64552

ಸುದ್ದಿಒನ್, ಸುದ್ದಿಒನ್ ನ್ಯೂಸ್‌, suddione, suddione news, chitradurga, ಚಿತ್ರದುರ್ಗ,ಬೆಂಗಳೂರು, bengaluru,

ಸುದ್ದಿಒನ್, ಚಿತ್ರದುರ್ಗ, ಜೂ.10 : ಎನ್.ಡಿ.ಆರ್.ಎಫ್. ನಿಯಮದ ಪ್ರಕಾರ ನೀರಾವರಿ, ತೋಟಗಾರಿಕೆ ಬೆಳೆಗಳಿಗೆ ಮೂರು ಹಂತದಲ್ಲಿ ಬರ ಪರಿಹಾರ ಹಣ ಕೊಡಬೇಕು. ಇದುವರೆವಿಗೂ ರೈತರ ಬ್ಯಾಂಕ್ ಖಾತೆಗಳಿಗೆ ಜಮಾ ಆಗಿಲ್ಲ. ಇದೆ ಪರಿಸ್ಥಿತಿ ಮುಂದುವರೆದರೆ ಹೋರಾಟ ನಡೆಸಬೇಕಾಗುತ್ತದೆಂದು ಅಖಂಡ ಕರ್ನಾಟಕ ರೈತ ಸಂಘದ ರಾಜ್ಯಾಧ್ಯಕ್ಷ ಸೋಮಗುದ್ದು ರಂಗಸ್ವಾಮಿ ಎಚ್ಚರಿಸಿದರು.

ಪ್ರವಾಸಿ ಮಂದಿರದಲ್ಲಿ ಸೋಮವಾರ ರೈತರೊಂದಿಗೆ ಸಭೆ ನಡೆಸಿ ಮಾತನಾಡಿದ ಸೋಮಗುದ್ದು ರಂಗಸ್ವಾಮಿ ಕಳೆದ ವರ್ಷ ಮಳೆಯಿಲ್ಲದೆ ಎದುರಾದ ಭೀಕರ ಬರಗಾಲಕ್ಕೆ ತುತ್ತಾಗಿರುವ ರೈತರು ಸಂಕಷ್ಠದಲ್ಲಿದ್ದಾರೆ. ಸರ್ಕಾರ ಇತ್ತ ಗಮನ ಹರಿಸಿ ಉಚಿತವಾಗಿ ಬೀಜ, ಗೊಬ್ಬರ ಮತ್ತು ಕೃಷಿ ಪರಿಕರಗಳನ್ನು ನೀಡಬೇಕು. ರೈತರಿಗೆ ಸಕಾಲಕ್ಕೆ ಸಾಲ ನೀಡದೆ ಬ್ಯಾಂಕಿನವರು ಸತಾಯಿಸುತ್ತಿದ್ದು, ಶೋಷಣೆ ನಿಲ್ಲಬೇಕು. ಎಲ್ಲಾ ಬ್ಯಾಂಕ್‍ನ ಹಾಗೂ ಸಂಘ ಸಂಸ್ಥೆಗಳಲ್ಲಿನ ಸಾಲ ಮನ್ನಾ ಮಾಡಬೇಕು ಎಂದು ಒತ್ತಾಯಿಸಿದರು.

ಜಿಲ್ಲೆಯಲ್ಲಿನ ಎಲ್ಲಾ ಕೆರೆಗಳಿಗೆ ನೀರು ತುಂಬಿಸಬೇಕು. ಕೆ.ಎಸ್.ಆರ್.ಟಿ.ಸಿ. ಬಸ್ ದರ ಹೆಚ್ಚಿಸಲು ತೀರ್ಮಾನಿಸಿರುವುದು ಪ್ರಯಾಣಿಕರಿಗೆ ಮತ್ತಷ್ಟು ಹೊರೆಯಾಗಲಿದೆ. ರೈತರು ಜಮೀನುಗಳಿಗೆ ಓಡಾಡಲು ದಾರಿ ಸಮಸ್ಯೆಯಿದೆ. ಸರ್ಕಾರ ಮಧ್ಯ ಪ್ರವೇಶಿಸಿ ಸಮಸ್ಯೆಯನ್ನು ಇತ್ಯರ್ಥಪಡಿಸಿ ರೈತರ ನೆರವಿಗೆ ಮುಂದಾಗಬೇಕು. ಇಲ್ಲವಾದಲ್ಲಿ  ರೈತ ಸಂಘಟನೆ ಜೊತೆ ಸೇರಿ ಉಗ್ರ ಹೋರಾಟದ ದಾರಿ ಹಿಡಿಯಬೇಕಾಗುತ್ತದೆಂದು ಸೋಮಗುದ್ದು ರಂಗಸ್ವಾಮಿ ತೀರ್ಮಾನಿಸಿದರು.

ಅಖಂಡ ಕರ್ನಾಟಕ ರೈತ ಸಂಘದ ಜಿಲ್ಲಾಧ್ಯಕ್ಷ ಎಲ್.ಬಸವರಾಜಪ್ಪ ಅಳಗವಾಡಿ, ಗೌರವಾಧ್ಯಕ್ಷ ಜಿ.ಮೇಘರಾಜ್ ಹಳಿಯೂರು, ಕುರುಬರಹಳ್ಳಿ ಶಿವಣ್ಣ, ಜಿಲ್ಲಾ ಪ್ರಧಾನ ಕಾರ್ಯದರ್ಶಿ ಎಂ.ಸಿದ್ದಪ್ಪ ಹಳಿಯೂರು, ಸಂಘಟನಾ ಕಾರ್ಯದರ್ಶಿ ಜಿ.ಪರಮೇಶ್ವರಪ್ಪ, ಖಾದರ್‍ಭಾಷ, ನವೀನ್‍ಕುಮಾರ್, ಹೆಚ್.ನಿರಂಜನಮೂರ್ತಿ, ಬೊಮ್ಮಯ್ಯ, ಎ.ಎಸ್.ಗುರುಸಿದ್ದಪ್ಪ, ಏಕಾಂತಪ್ಪ, ಚಳ್ಳಕೆರೆ ತಾಲ್ಲೂಕು ರೈತ ಸಂಘದ ಅಧ್ಯಕ್ಷ ಚಿಕ್ಕಣ್ಣ ಇನ್ನು ಅನೇಕರು ಸಭೆಯಲ್ಲಿ ಹಾಜರಿದ್ದರು.

Facebook
Twitter
Telegram
WhatsApp
suddionenews

suddionenews

Leave a Comment

Top Stories

ತರುಣ್ ಸುಧೀರ್ & ಸೋನಲ್ ಮದುವೆ ಆಗ್ತಾ ಇರೋದು ಸತ್ಯ : ಮಾಲತಿ ಸುಧೀರ್ ಸ್ಪಷ್ಟನೆ

ಕಳೆದ ಕೆಲವು ದಿನಗಳಿಂದ ಗಾಂಧಿನಗರದ ಮೂಲೆ‌ ಮೂಲೆಯಲ್ಲೂ ತರುಣ್ ಸುಧೀರ್ ಅವರ ಮದುವೆಯದ್ದು ಸದ್ದು. ತರುಣ್ ಹಾಗೂ ನಟಿ ಸೋನಲ್ ಮದುವೆಯಾಗ್ತಾ ಇದ್ದಾರಂತೆ ಎಂಬ ಗುಸುಗುಸು. ಮಹಾನಟಿ ವೇದಿಕೆಯಲ್ಲೂ ಈ ಟಾಪಿಕ್ ಬಂದಾಗ ತರುಣ್

ಸಿಎಂ ಪತ್ನಿ ಹೆಸರಿಗೆ 14 ಮೂಡಾ ಸೈಟ್ ಗಳು : ಸಿದ್ದರಾಮಯ್ಯ ಹೇಳಿದ್ದೇನು..?

  ಬೆಂಗಳೂರು: ಸಿಎಂ ಸಿದ್ದರಾಮಯ್ಯ ಧರ್ಮಪತ್ನಿ ಪಾರ್ವತಿ ಅವರ ಹೆಸರಿನಲ್ಲಿ 14 ಮೂಡಾ ಸೈಟುಗಳನ್ನು ಮಾಡಲಾಗಿದೆ ಎಂಬುದು ಬಾರೀ ಚರ್ಚೆಗೆ ಗ್ರಾಸವಾಗಿದೆ. ಆರ್ಟಿಐ ಕಾರ್ಯಕರ್ತ ಇದರಲ್ಲಿ ಅಕ್ರಮ ಮಂಜೂರಾತಿ ನಡೆದಿದೆ ಎಂದಿದ್ದಾರೆ. ಜೊತೆಗೆ ಸಿಎಂ

ಉತ್ತರಪ್ರದೇಶದಲ್ಲಿ ಹೃದಯವಿದ್ರಾವಕ ಘಟನೆ : ಕಾಲ್ತುಳಿತಕ್ಕೆ 80 ಕ್ಕೂ ಹೆಚ್ಚು ಮಂದಿ ಸಾವು…!

ಸುದ್ದಿಒನ್, ಜುಲೈ. 02 : ನವದೆಹಲಿ: ಮಂಗಳವಾರ ಉತ್ತರ ಪ್ರದೇಶದ ಹತ್ರಾಸ್‌ನಲ್ಲಿ ಧಾರ್ಮಿಕ ಕಾರ್ಯಕ್ರಮವೊಂದರಲ್ಲಿ ಕಾಲ್ತುಳಿತ ಸಂಭವಿಸಿ ಮಹಿಳೆಯರು ಮತ್ತು ಮಕ್ಕಳು ಸೇರಿದಂತೆ ಕನಿಷ್ಠ 87 ಜನರು ಸಾವನ್ನಪ್ಪಿದ್ದಾರೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ. ಭೋಲೆ ಬಾಬಾರವರ ಸತ್ಸಂಗ

error: Content is protected !!