Warning: Undefined array key "options" in /home/nagendra/public_html/content/plugins/elementor-pro/modules/theme-builder/widgets/site-logo.php on line 124

ಜಾಮೀನು ಸಿಕ್ಕ ಕೂಡಲೇ ಫುಲ್ ಜೋಶ್ : ಅಡಿಕೆ ತೋಟ, ಕ್ರಷರ್ ನಿಂದ ಬಂದ ಹಣವೆಂದ ವಿರೂಪಾಕ್ಷಪ್ಪ..!

Facebook
Twitter
Telegram
WhatsApp

ದಾವಣಗೆರೆ: ಮಾಡಾಳು ಪ್ರಶಾಂತ್ ಲಂಚ ಪ್ರಕರಣದಲ್ಲಿ ಜೈಲು ಸೇರಿದ್ದು, ಶಾಸಕ ಮಾಡಾಳು ವಿರೂಪಾಕ್ಷಪ್ಪ ಎಸ್ಕೇಪ್ ಆಗಿದ್ದರು. ಹೈಕೋರ್ಟ್ ನಿಂದ ಮಧ್ಯಂತರ ಜಾಮೀನು ಸಿಕ್ಕ ಬೆನ್ನಲ್ಲೇ ಎಲ್ಲರ ಮುಂದೆ ಕಾಣಿಸಿಕೊಂಡಿದ್ದಾರೆ. ಅದರಲ್ಲೂ ಹಾರ ಹಾಕಿಕೊಮಡು, ವಾದ್ಯಗಳೊಂದಿಗೆ ಅದ್ದೂರಿಯಾಗಿ ಎಂಟ್ರಿ ಕೊಟ್ಟಿದ್ದಾರೆ.

ಮಹದೇವಮ್ಮ ದೇವಿ ದರ್ಶನ ಪಡೆದು, ಈಶ್ವರನ ದೇವಸ್ಥಾನಕ್ಕೆ ಹೋಗಿ ವಿಶೇಷ ಪೂಜೆ ಸಲ್ಲಿಸಿದ್ದಾರೆ. ಬಳಿಕ ಮಾತನಾಡಿದ ವಿರೂಪಾಕ್ಷಪ್ಪ, ಈ ರೀತಿಯ ಆರೋಪ ಬಂದಿದ್ದರಿಂದ ನಾನು ಎಲ್ಲಿಯೂ ಕಾಣಿಸಿಕೊಂಡಿರಲಿಲ್ಲ. ಹಾಗಂತ ಎಲ್ಲಿಯೂ ಓಡಿ ಹೋಗಿರಲಿಲ್ಲ‌. ಊರಿನಲ್ಲಿಯೇ ಇದ್ದೆ. ಅಡಿಕೆ ತೋಟ, ಕ್ರಷರ್ ನಿಂದ ಬಂದ ಹಣವನ್ನು ಮನೆಯಲ್ಲಿಟ್ಟಿದ್ದೆವು. ಅದು ಲೋಕಾಯುಕ್ತ ಅಧಿಕಾರಿಗಳ ಕೈಗೆ ಸಿಕ್ಕಿದೆ ಎಂದು ಸಮರ್ಥನೆ ನೀಡಿದ್ದಾರೆ.

ಆ ಹಣಕ್ಕೆ ನಮ್ಮ ಬಳಿ ದಾಖಲೆಯಿದೆ. KSDL ಅಧ್ಯಕ್ಷನಾಗಿ ನಾನು ನಿಯಮಬಾಹಿರವಾಗಿ ನಾನು ನಡೆದುಕೊಂಡಿಲ್ಲ. ಪಕ್ಷ ತಾಯಿಯಿದ್ದಂತೆ, ಪಕ್ಷಕ್ಕೆ ಎಂದೂ ದ್ರೋಹ ಮಾಡಿಲ್ಲ. ಮುಖ್ಯಮಂತ್ರಿ ಬಸವರಾಜ್ ಬೊಮ್ಮಾಯಿ ಅವರು ನಿಷ್ಪಕ್ಷಪಾತವಾಗಿ ತನಿಖೆ ನಡೆಸುವುದಾಗಿ ತಿಳಿಸಿದ್ದಾರೆ. 48 ಗಂಟೆಯೊಳಗೆ ತನಿಖಾಧಿಕಾರಿಗಳ ಮುಂದೆ ಹಾಜರಾಗುತ್ತೇನೆ ಎಂದು ತಿಳಿಸಿದ್ದಾರೆ.

Facebook
Twitter
Telegram
WhatsApp
suddionenews

suddionenews

Leave a Comment

Top Stories

ಬೇಸಿಗೆಯಲ್ಲಿ ಕಣ್ಣುಗಳ ಆರೋಗ್ಯಕ್ಕೆ ಹೀಗೆ ಮಾಡಿ…

ಸುದ್ದಿಒನ್ : ಕಣ್ಣಿನ ಉರಿಯು ಬೇಸಿಗೆಯಲ್ಲಿ ಯಾರನ್ನಾದರೂ ಬಾಧಿಸುವ ಸಾಮಾನ್ಯ ಸಮಸ್ಯೆಯಾಗಿದೆ. ಸೂರ್ಯನ ಬಿಸಿಲು, ಧೂಳು ಮತ್ತು ವಾಯು ಮಾಲಿನ್ಯವು ಕಣ್ಣುಗಳ ಉರಿ, ಕಿರಿಕಿರಿ ಮತ್ತು ಕೆಂಪಗಾಗುವುದು ಆಗುತ್ತದೆ. ಇಂತಹ ಪರಿಸ್ಥಿತಿಯಲ್ಲಿ ಕಣ್ಣಿನ ಕಿರಿಕಿರಿಯನ್ನು

ಈ ರಾಶಿಯವರು ತುಂಬಾ ಪ್ರಯತ್ನಶಾಲಿ ಆದರೆ ಅದೃಷ್ಟ ಕೈ ಕೊಡುತ್ತಿದೆ

ಈ ರಾಶಿಯವರು ತುಂಬಾ ಪ್ರಯತ್ನಶಾಲಿ ಆದರೆ ಅದೃಷ್ಟ ಕೈ ಕೊಡುತ್ತಿದೆ, ಈ ರಾಶಿಯ ಪ್ರೀತಿಸಿ ಮದುವೆ ಆದವರ ಗೋಳಾಟ ಕೇಳಲಾಗದು, ಮಂಗಳವಾರ ರಾಶಿ ಭವಿಷ್ಯ -ಏಪ್ರಿಲ್-23,2024 ಹನುಮಾನ ಜಯಂತಿ ಸೂರ್ಯೋದಯ: 05:58, ಸೂರ್ಯಾಸ್ತ :

ಬಿಜೆಪಿ ಪಕ್ಷದಿಂದ ಉಚ್ಛಾಟನೆಗೊಂಡ ಈಶ್ವರಪ್ಪ..!

ಬೆಂಗಳೂರು: ಲೋಕಸಭಾ ಚುನಾವಣೆಯಲ್ಲಿ ಶಿವಮೊಗ್ಗ ಕ್ಷೇತ್ರದಿಂದ ಪಕ್ಷೇತರ ಅಭ್ಯರ್ಥಿಯಾಗಿ ಸ್ಪರ್ಧಿಸಿರುವ ಕೆ ಎಸ್ ಈಶ್ವರಪ್ಪ ಅವರನ್ನು ಬಿಜೆಪಿ ಪಕ್ಷದಿಂದ ಉಚ್ಛಾಟನೆ ಮಾಡಿದೆ. ತನ್ನ ಮಗನಿಗೆ ಸಿಗಲಿಲ್ಲ ಎಂಬ ಕಾರಣಕ್ಕೆ ಈಶ್ವರಪ್ಪ ಪಕ್ಷೇತರ ಅಭ್ಯರ್ಥಿಯಾಗಿ ನಾಮಪತ್ರ

error: Content is protected !!