Kannada news ಚಿತ್ರದುರ್ಗ ದಾವಣಗೆರೆ ಬೆಂಗಳೂರು ರಾಜಕೀಯ ಚುನಾವಣೆ ಮಳೆ ಕ್ರಿಕೆಟ್ ಭಾರತ ಚಿನ್ನ ಬೆಳ್ಳಿ ಹವಾಮಾನ ಕ್ರಿಕೆಟ್  ಕನ್ನಡ ನ್ಯೂಸ್

ಜಿ.ಎಸ್.ಜಯಲಕ್ಷ್ಮೀ ನಿಧನ

---Advertisement---

ಸುದ್ದಿಒನ್, ಚಿತ್ರದುರ್ಗ, (ಜು.23): ತುರುವನೂರು ರಸ್ತೆ ಆರ್‌ಟಿಒ ಕಚೇರಿ ಹಿಂಭಾಗದ ಬಿ.ಎಲ್.ಗೌಡ ಲೇಔಟ್ ಬಡಾವಣೆ ನಿವಾಸಿ ಜಿ.ಎಸ್.ಜಯಲಕ್ಷ್ಮೀ (65) ಸೋಮವಾರ ಮುಂಜಾನೆ ನಿಧನರಾದರು.

ಪತಿ ಕುರುಬ ಸಂಘದ ತಾಲೂಕಾಧ್ಯಕ್ಷ, ಕೃಷಿ ಇಲಾಖೆ ನಿವೃತ್ತ ಅಧಿಕಾರಿ ಬಿ.ಜಗನ್ನಾಥ್, ಓರ್ವ ಪುತ್ರಿ, ಇಬ್ಬರು ಪುತ್ರರು ಸೇರಿದಂತೆ ಅಪಾರ ಕುಟುಂಬದವರನ್ನು ಅಗಲಿದ್ದಾರೆ. ಹಿರಿಯೂರು ತಾಲೂಕು ಹುಲಿತೊಟ್ಲು ಗ್ರಾಮದಲ್ಲಿ ಸೋಮವಾರ ಮಧ್ಯಾಹ್ನ ಅಂತ್ಯಕ್ರಿಯೆ ನೆರವೇರಿತು.

ಚಿತ್ರದುರ್ಗ ಎಪಿಎಂಸಿ ಆವರಣದಲ್ಲಿ ಪ್ರಥಮ ಬಾರಿಗೆ ದಲ್ಲಾಳಿ ಮಂಡಿ ತೆರೆದ ಖ್ಯಾತಿ ಹೊಂದಿದ್ದ ದಿ.ಗಿರಿಯಪ್ಪನವರ ಪುತ್ರಿ ಜಯಲಕ್ಷ್ಮೀ, ಅನೇಕ ಸಾಮಾಜಿಕ ಸೇವಾ ಕಾರ್ಯಗಳಲ್ಲಿ ತೊಡಗಿಸಿಕೊಂಡಿದ್ದರು.

ಅಂತಿಮ ದರ್ಶನ: ನಗರದ ಬಿ.ಎಲ್.ಗೌಡ ಲೇಔಟ್ ಬಡಾವಣೆಯಲ್ಲಿನ ನಿವಾಸದಲ್ಲಿ ಬೆಳಗ್ಗೆ 11 ಗಂಟೆಯವರೆಗೆ ಅಂತಿಮ ದರ್ಶನಕ್ಕೆ ವ್ಯವಸ್ಥೆ ಮಾಡಲಾಗಿತ್ತು. ಕುರುಬ ಸಂಘದ ಜಿಲ್ಲಾಧ್ಯಕ್ಷ ಎಸ್.ಶ್ರೀರಾಮ್, ನಗರಸಭೆ ಮಾಜಿ ಅಧ್ಯಕ್ಷ ಎಚ್.ಮಂಜಪ್ಪ, ಡಿಸಿಸಿ ಬ್ಯಾಂಕ್ ನಿರ್ದೇಶಕ ನಿಶಾನಿ ಜಯಣ್ಣ, ನಗರಾಭಿವೃದ್ಧಿ ಪ್ರಾಧಿಕಾರದ ಮಾಜಿ ಅಧ್ಯಕ್ಷ ಬಿ.ಟಿ.ಜಗದೀಶ್, ಜಿಲ್ಲಾ ವಕೀಲ ಸಂಘದ ಪ್ರಧಾನ ಕಾರ್ಯದರ್ಶಿ ಆರ್.ಗಂಗಾಧರ್, ಸರ್ಕಾರಿ ನೌಕರ ಸಂಘದ ನಿರ್ದೇಶಕರಾದ ಕಲ್ಲೇಶ್ ಡಿ.ಮೌರ್ಯ, ಶಿಕ್ಷಕ ಕೆಂಚಪ್ಪ ಹಾಗೂ ರೋಟರಿ, ಇನ್ನರ್‌ವ್ಹೀಲ್ ಕ್ಲಬ್ ಸೇರಿ ವಿವಿಧ ಸಂಘಟನೆಗಳ ಪದಾಧಿಕಾರಿಗಳು, ನೂರಾರು ಗಣ್ಯರು ಭೇಟಿ ನೀಡಿ ಅಂತಿಮ ದರ್ಶನ ಪಡೆದರು.

suddionenews

ಕನ್ನಡ ಸುದ್ದಿಗಳ ವಿಶ್ವಾಸಾರ್ಹ ಮೂಲ — suddione.com ನಲ್ಲಿ ಓದಿ ರಾಷ್ಟ್ರೀಯ, ಅಂತರರಾಷ್ಟ್ರೀಯ, ರಾಜಕೀಯ, ಕ್ರೀಡೆ, ಮನರಂಜನೆ, ವಾಣಿಜ್ಯ, ಶಿಕ್ಷಣ ಮತ್ತು ತಂತ್ರಜ್ಞಾನಕ್ಕೆ ಸಂಬಂಧಿಸಿದ ಪ್ರತಿಯೊಂದು ಪ್ರಮುಖ ಅಪ್‌ಡೇಟ್. ನೀವು ಯಾವಾಗಲೂ ಅಪ್‌ಡೇಟ್ ಆಗಿರಲು ನಾವು ವೇಗವಾದ, ನಿಖರವಾದ ಮತ್ತು ನಿಷ್ಪಕ್ಷಪಾತವಾದ ಸುದ್ದಿಗಳನ್ನು ಸರಳ ಹಾಗೂ ಸ್ಪಷ್ಟ ಭಾಷೆಯಲ್ಲಿ ನೀಡುತ್ತೇವೆ. ಸಂಪಾದಕರು: ನಾಗೇಂದ್ರ ರೆಡ್ಡಿ ಪಿ.ಎಲ್

Join WhatsApp

Join Now

Join Telegram

Join Now

Leave a Comment

🏫 ಅಡ್ಮಿಷನ್ ಓಪನ್
🔒

ಇಂಡಿಯನ್ ಇಂಟರ್ ನ್ಯಾಷನಲ್ ಸ್ಕೂಲ್

ಸ್ವಾಗತ...