ಚಿತ್ರದುರ್ಗ : ಹೊಳಲ್ಕೆರೆ ತಾಲೂಕಿನ ಟಿ.ನುಲೇನೂರು ಗ್ರಾಮದ ಜಿ.ಸುಭದ್ರಮ್ಮ(93) ಮಂಗಳವಾರ ನಿಧನಹೊಂದಿದರು.
ಮೃತರು ರೈತ ಸಂಘದ ಮುಖಂಡ ಹಾಗೂ ನೀರಾವರಿ ಅನುಷ್ಠಾನ ಹೋರಾಟ ಸಮಿತಿ ಅಧ್ಯಕ್ಷ ಟಿ.ನುಲೇನೂರು ಎಂ.ಶಂಕರಪ್ಪ ಸೇರಿದಂತೆ ಇಬ್ಬರು ಪುತ್ರರು ಹಾಗೂ ಮೂರು ಮಂದಿ ಪುತ್ರಿಯರ ಅಗಲಿದ್ದಾರೆ. ಅಂತ್ಯಕ್ರಿಯೆ ಸಂಜೆ ನೆರವೇರಿತೆಂದು ಕುಟುಂಬ ಮೂಲಗಳು ತಿಳಿಸಿವೆ.






