Warning: Undefined array key "options" in /home/nagendra/public_html/content/plugins/elementor-pro/modules/theme-builder/widgets/site-logo.php on line 124

ಮಗನಿಗೆ ಟಿಕೆಟ್ ನೀಡಲು ಸಿದ್ದು, ಡಿಕೆಶಿಗೆ ಹೇಳಿದ್ದೇನೆ, ಬಿಜೆಪಿಯವರು ಇಬ್ಬರಿಗೂ ಟಿಕೆಟ್ ಕೊಡುವುದಾಗಿ ಹೇಳಿದ್ದಾರೆ : ಜಿಟಿಡಿ ಒಲವು ಯಾರ ಕಡೆ..?

Facebook
Twitter
Telegram
WhatsApp

ಮೈಸೂರು: ಸದ್ಯ ಜಿ ಟಿ ದೇವೇಗೌಡ ಜಿಡಿಎಸ್ ನಿಂದ ಅಂತರ ಕಾಯ್ದುಕೊಂಡಿದ್ದಾರೆ. ಕಾಂಗ್ರೆಸ್ ಸೇರುತ್ತಾರೆ ಎಂಬ ಗುಸುಗುಸು ಇದೆ. ಆ ಬಗ್ಗೆ ಅವರೇ ಮಾತನಾಡಿದ್ದು, ನನ್ನ ಮಗನಿಗೆ ಟಿಕೆಟ್ ಕೊಡುವ ವಿಚಾರದಲ್ಲಿ ನಿರ್ಧಾರ ತಿಳಿಸಲಿ. ನಂತರದಲ್ಲಿ ಕಾಂಗ್ರೆಸ್ ಸೇರುವ ಬಗ್ಗೆ ನಾನು ತೀರ್ಮಾನ ಮಾಡುತ್ತೇನೆ. ಟಿಕೆಟ್ ಬಗ್ಗೆ ಡಿಕೆಶಿ ಮತ್ತು ಸಿದ್ದರಾಮಯ್ಯ ಅವರಿಗೆ ಸ್ಪಷ್ಟವಾಗಿ ಹೇಳಿರುವೆ.

ನನ್ನ ಪುತ್ರನಿಗೆ ಟಿಕೆಟ್ ನೀಡಬೇಕು. ಅದರಲ್ಲಿ ಹುಣಸೂರು ಮೊದಲ ಆದ್ಯತೆ, ಕೆ ಆರ್ ನಗರ ಎರಡನೇಯದು, ಚಾಮರಾಜ ಕ್ಷೇತ್ರ ಮೂರನೇ ಆಯ್ಕೆಯಾಗಿದೆ. ಈ ಮೂರು ಕ್ಷೇತ್ರಗಳ ಪೈಕಿ ಯಾವುದರಲ್ಲಾದರೂ ಟಿಕೆಟ್ ನೀಡಲಿ.‌

ನಾನು ಮಾತ್ರ ಚಾಮುಂಡೇಶ್ವರಿ ವಿಧಾನಸಭಾ ಕ್ಷೇತ್ರದಿಂದ ಸ್ಪರ್ಧೆ ಮಾಡ್ತೇನೆ. ಈ ಮಧ್ಯೆ ನಮ್ಮ ಜೊತೆಗೆ ಇರಿ ಎಂದು ಬಿಜೆಪಿ ನಾಯಕರು ಸಹ ಕೇಳಿದ್ದಾರೆ‌. ನನಗೆ ಮತ್ತು ನನ್ನ ಮಗನಿಗೆ ಇಬ್ಬರಿಗೂ ಟಿಕೆಟ್ ನೀಡುವುದಾಗಿ ಬಿಜೆಪಿ ನಾಯಕರು ಹೇಳಿದ್ದಾರೆ. ಸದ್ಯಕ್ಕೆ ನಾನು ಇನ್ನು ಯಾವುದೇ ನಿರ್ಧಾರ ಕೈಗೊಂಡಿಲ್ಲ. ಆರು ತಿಂಗಳ ಬಳಿಕ ನಿರ್ಧರಿಸುತ್ತೇನೆ ಎಂದಿದ್ದಾರೆ.

ಇನ್ನು ನನ್ನ ಜೊತೆ ಯಾವ ಜೆಡಿಎಸ್ ನಾಯಕರು ಸಂಪರ್ಕದಲ್ಲಿಲ್ಲ. ಹೆಚ್ಡಿಕೆ ಸಿಎಂ ಸ್ಥಾನದಿಂದ ಕೆಳಗಿಳಿದಾಗಿನಿಂದಲೂ ಸಂಪರ್ಕದಲ್ಲಿಲ್ಲ. ಜೆಡಿಎಸ್ ನ ಯಾವ ಸಭೆ, ಸಮಾರಂಭಕ್ಕೂ ನನ್ನನ್ನು ಕರೆಯುತ್ತಿಲ್ಲ ಎಂದಿದ್ದಾರೆ.

Facebook
Twitter
Telegram
WhatsApp
suddionenews

suddionenews

Leave a Comment

Top Stories

Vastu Tips : ಮನೆಯಲ್ಲಿ ಗಡಿಯಾರವನ್ನು ಯಾವ ದಿಕ್ಕಿಗೆ ಇಟ್ಟರೆ ಒಳ್ಳೆಯದು ಗೊತ್ತಾ ?

ಸುದ್ದಿಒನ್ : ವಾಸ್ತು ಎಂದರೆ ಮನೆಗೆ ಮಾತ್ರವಲ್ಲದೇ ಮನೆಯಲ್ಲಿ ಇರುವ  ವಸ್ತುಗಳಿಗೂ ಕೂಡ ಅನ್ವಯಿಸುತ್ತದೆ.  ವಸ್ತುಗಳನ್ನು ಇರಿಸುವ ದಿಕ್ಕನ್ನು ಅವಲಂಬಿಸಿ, ಮನೆಗೆ ನಷ್ಟ ಮತ್ತು ಲಾಭವನ್ನು ಅಂದಾಜಿಸುತ್ತಾರೆ. ವಾಸ್ತು ಪ್ರಕಾರ, ಅನೇಕ ರೀತಿಯ ವಸ್ತುಗಳನ್ನು

ದಿನಕ್ಕೆ 2 ಬಾರಿ ಈ ಪಾನೀಯವನ್ನು ಕುಡಿದರೆ ಕೊಬ್ಬು ಬೆಣ್ಣೆಯಂತೆ ಕರಗುತ್ತದೆ…!

ಸುದ್ದಿಒನ್ : ಇತ್ತೀಚಿನ ದಿನಗಳಲ್ಲಿ ಪ್ರತಿಯೊಬ್ಬರೂ ಅಧಿಕ ದೇಹದ ತೂಕದ ಬಗ್ಗೆ ಚಿಂತಿಸುತ್ತಿದ್ದಾರೆ. ತೂಕವು ನಿಯಂತ್ರಣದಲ್ಲಿದ್ದರೂ, ಜನರು ಸಾಮಾನ್ಯವಾಗಿ ಬೊಜ್ಜಿನ ಬಗ್ಗೆ ಚಿಂತಿಸುತ್ತಾರೆ. ಅಧಿಕ ತೂಕ ಅಥವಾ ಸ್ಥೂಲಕಾಯತೆಯು ಅಸಹ್ಯವಾಗಿ ಕಾಣುವುದಲ್ಲದೆ, ನಡೆಯಲು ಕಷ್ಟವಾಗುತ್ತದೆ.

ಈ ರಾಶಿಯವರಿಗೆ ಗುಡ್ ಲಕ್ ಗಳ ಸುರಿಮಳೆ….

ಈ ರಾಶಿಯವರಿಗೆ ಗುಡ್ ಲಕ್ ಗಳ ಸುರಿಮಳೆ….   ಬುಧವಾರ ರಾಶಿ ಭವಿಷ್ಯ -ಮೇ-8,2024 ಸೂರ್ಯೋದಯ: 05:50, ಸೂರ್ಯಾಸ್ತ : 06:34 ಶಾಲಿವಾಹನ ಶಕೆ1945, ಶ್ರೀ ಕ್ರೋಧಿ ನಾಮ ಸಂವತ್ಸರ , ಸಂವತ್2079, ಚೈತ್ರಮಾಸ,

error: Content is protected !!