Notice: Undefined index: options in /home/nagendra/public_html/content/plugins/elementor-pro/modules/theme-builder/widgets/site-logo.php on line 124

ಜೈಲಲ್ಲಿರುವ ದರ್ಶನ್ ನೆನೆದು ಭಾವುಕರಾದ ಚಿತ್ರದುರ್ಗದ ಗಗನಾ..!

Facebook
Twitter
Telegram
WhatsApp

ಗಗನಾ ಬಾರಿ ಈಗ ಕರ್ನಾಟಕದಾದ್ಯಂತ ಮನೆ ಮಾತಾದ ಹೆಸರು. ಮಹಾನಟಿ ಎಂಬ ರಿಯಾಲಿಟಿ ಶೋ ಮೂಲಕ ಎಲ್ಲರಿಗೂ ಪರಿಚಿತರಾದರು. ಹೊಸದಾಗಿ ಶುರುವಾದ ಈ ಶೋಗೆ ಚಿತ್ರದುರ್ಗದಲ್ಲಿ ಆಡಿಷನ್ ನೀಡಿ, ಬೆಂಗಳೂರಿಗೆ ಬಂದು, ತನ್ನ ಮುಗ್ಧತೆಯಿಂದಾನೇ ಎಲ್ಲರನ್ನು ಸೆಳೆದವರು. ನಟನೆಯಲ್ಲಿ ಸೈ ಎನಿಸಿಕೊಂಡಿದ್ದ ಗಗನಾ ಬಾರಿಗೆ ಡ್ಯಾನ್ಸ್ ಅಷ್ಟಕ್ಕೆ ಅಷ್ಟೇ. ಕುಣಿದು ಕುಣಿದು ಬಾರೇ ಅನ್ನೋ ಸ್ಟೆಪ್ ಮಾತ್ರ ಸದಾ ಕಾಲ ಮಾಡುತ್ತಿದ್ದದ್ದು. ಇದೀಗ ದರ್ಶನ್ ಬಗ್ಗೆ ನೆನೆದು ಬೇಸರ ಹೊರ ಹಾಕಿದ್ದಾರೆ.

ಈ ಬಾರಿಯ ಡಿಕೆಡಿ ಕಾರ್ಯಕ್ರಮದಲ್ಲಿ ಡ್ಯಾನ್ಸ್ ಬಾರದೆ ಇದ್ದವರಿಂದಾನೂ ಡ್ಯಾನ್ಸ್ ಮಾಡಿಸುವ ಸಾಹಸಕ್ಕೆ ಜೀ ಕನ್ನಡ ವಾಹಿನಿ ಕೈ ಹಾಕಿದೆ. ಹೀಗಾಗಿ ಮಾತಿನಲ್ಲಿಯೇ ಎಲ್ಲರನ್ನು ಮೋಡಿ ಮಾಡಿದ್ದ, ತರುಣ್ ಸುಧೀರ್ ಅವರಿಂದ ಅಡ್ವಾನ್ಸ್ ಪಡೆದಿದ್ದ ಗಗನಾ, ಈಗ ಡ್ಯಾನ್ಸ್ ನಲ್ಲೂ ಇಂಪ್ರೂವ್ ಆಗಿ ಬಿಟ್ಟಿದ್ದಾರೆ. ಡ್ಯಾನ್ಸ್ ನಲ್ಲೂ ಎಲ್ಲರಿಂದ ಹೊಗಳಿಕೆಯ ಮಾತುಗಳನ್ನು ಕೇಳಿದ್ದಾರೆ.

ನಿನ್ನೆಯ ಡಿಕೆಡಿ ಕಾರ್ಯಕ್ರಮದಲ್ಲಿ ಮಾತನಾಡುತ್ತಲೇ ಗಗನಾ ಕಣ್ಣೀರು ಹಾಕಿದರು. ದರ್ಶನ್ ವಿಚಾರ ಬಂದ ಕೂಡಲೇ ಅವರನ್ನು ನಾವೆಲ್ಲಾ ತುಂಬಾ ಮಿಸ್ ಮಾಡಿಕೊಳ್ಳುತ್ತೇವೆ. ನಾನು ಅವರ ಸಿನಿಮಾಗಳನ್ನು ನೋಡಿ ಇಷ್ಟ ಪಟ್ಟೆ. ವಿ ಆಲ್ ಲವ್ ಯೂ ಅಂಡ್ ಮಿಸ್ ಯೂ ಸರ್ ಎಂದಿದ್ದಾರೆ.

ಚಿತ್ರದುರ್ಗದ ರೇಣುಕಾಸ್ವಾಮಿ ಕೊಲೆಯ ಆರೋಪದಲ್ಲಿ ಬಳ್ಳಾರಿ ಜೈಲಿನಲ್ಲಿರುವ ನಟ ದರ್ಶನ್, ಜಾಮೀನಿಗೆ ಅರ್ಜಿ ಹಾಕಿದ್ದಾರೆ. ಇಂದು ಜಾಮೀನು ಅರ್ಜಿ ವಿಚಾರಣೆ ನಡೆಯಲಿದೆ. ಮುಂದಿನ ದಿನಗಳಲ್ಲಿ ದರ್ಶನ್ ಗೆ ಹೊರಗೆ ಬರ್ತಾರಾ..? ಶಿಕ್ಷೆಯಾಗುತ್ತಾ ಎಂಬುದನ್ನು ಕಾದು ನೋಡಬೇಕಿದೆ.

Facebook
Twitter
Telegram
WhatsApp
suddionenews

suddionenews

Leave a Comment

Top Stories

ನನ್ನ ಬಳಿ ಇರುವ ದಾಖಲೆ ಕೊಟ್ಟರೆ ಇನ್ನು 6-7 ಸಚಿವರು ರಾಜೀನಾಮೆ ಕೊಡಬೇಕಾಗುತ್ತದೆ : ಕುಮಾರಸ್ವಾಮಿ ಶಾಕಿಂಗ್ ಹೇಳಿಕೆ

  ಬೆಂಗಳೂರು: ಗಂಗೇನಹಳ್ಳಿ ಡಿನೋಟಿಫಿಕೇಷನ್ ಪ್ರಕರಣಕ್ಕೆ ಸಂಬಂಧಿಸಿದಂತೆ ಲೋಕಾಯುಕ್ತ ಪೊಲೀಸರು ಕುಮಾರಸ್ವಾಮಿ ಅವರನ್ನು ವಿಚಾರಣೆಗೆ ಕರೆದಿದ್ದರು. ವಿಚಾರಣೆಗೆ ಹಾಜರಾಗಿ ಬಂದ ಮರುದಿನವೇ ಸುದ್ದಿಗೋಷ್ಟಿ ನಡೆಸಿರುವ ಕುಮಾರಸ್ವಾಮಿ ಅವರು, ಕಾಂಗ್ರೆಸ್ ಮೇಲೆ ಕಿಡಿಕಾರಿದ್ದಾರೆ. ವಿಚಾರಣೆ ಮಾಡುವುದಕ್ಕೆ

ನಿರ್ಮಲಾ ಸೀತರಾಮನ್ ವಿರುದ್ಧ FIR ದಾಖಲಿಸಲು ಬೆಂಗಳೂರು ಕೋರ್ಟ್ ಆದೇಶ : ಕಾರಣವೇನು ಗೊತ್ತಾ..?

  ಬೆಂಗಳೂರು: ಕೇಂದ್ರ ಹಣಕಾಸು ಸಚಿವೆ ನಿರ್ಮಲಾ ಸೀತರಾಮನ್ ವಿರುದ್ಧ ಎಫ್ಐಆರ್ ದಾಖಲಿಸಲು ಬೆಂಗಳೂರಿನ ಜನಪ್ರತಿನಿಧಗಳ ನ್ಯಾಯಾಲಯ ಆದೇಶ ಹೊರಡಿಸಿದೆ. ನ್ಯಾಯಾಲಯಕ್ಕೆ ನಿರ್ಮಲಾ ಸೀತರಾಮನ್ ವಿರುದ್ಧ ದೂರು ಸಲ್ಲಿಕೆಯಾದ ಹಿನ್ನೆಲೆ ಎಫ್ಐಆರ್ ದಾಖಲಿಸಲು ಸೂಚನೆ

ಮೈಸೂರು ದಸರಾ 2024 ವೇಳಾಪಟ್ಟಿ ಬಿಡುಗಡೆ : ಏನೆಲ್ಲಾ ಕಾರ್ಯಕ್ರಮ ನಡೆಯಲಿದೆ..?

  ಮೈಸೂರು: ವಿಶ್ವ ವಿಖ್ಯಾತ ದಸರಾ ಮಹೋತ್ಸವಕ್ಕೆ ದಿನಗಣನೆ ಶುರುವಾಗಿದೆ. ಅಂಬಾರಿ ಮೇಲೆ ನಾಡ ಅಧಿದೇವತೆಯನ್ನು ಕಣ್ತುಂಬಿಕೊಳ್ಳಲು ಎಲ್ಲರೂ ಕುತೂಹಲದಿಂದ ಕಾಯುತ್ತಿದ್ದಾರೆ. ಅದ್ದೂರಿ ಆಚರಣೆಗಾಗಿ ಸರ್ಕಾರ ಹಾಗೂ ಜಿಲ್ಲಾಡಳಿತ ಬರದ ಸಿದ್ಧತೆ ಮಾಡಿಕೊಂಡಿದೆ. ದಸರಾ

error: Content is protected !!