ಬೆಂಗಳೂರು: ನಾಳೆ ರಾಜ್ಯಸಭಾ ಚುನಾವಣೆ ನಡೆಯಲಿದೆ. ಅಡ್ಡಮತದಾನ ನಡೆಯುವ ಆತಂಕವೂ ಕಾಂಗ್ರೆಸ್ ಪಕ್ಷಕ್ಕೆ ಇದೆ. ಯಾಕಂದ್ರೆ ಕಡೆ ಗಳಿಗೆಯಲ್ಲಿ ಜೆಡಿಎಸ್ ಕಡೆಯಿಂದ ಐದನೇ ಅಭ್ಯರ್ಥಿಯೂ ಸ್ಪರ್ಧೆಗೆ ನಿಂತಿದ್ದಾರೆ. ಹೀಗಾಗಿ ಸಹಜವಾಗಿಯೇ ಮೂರು ಪಕ್ಷಗಳು ಸ್ವತಂತ್ರ ಶಾಸಕರ ಮೊರೆ ಹೋಗಿದ್ದಾರೆ. ಇದರ ಬೆನ್ನಲ್ಲೇ ಶಾಸಕ ಗಾಲಿ ಜನಾರ್ದನ ರೆಡ್ಡಿ ಅವರು ಸಿಎಂ ಸಿದ್ದರಾಮಯ್ಯ ಹಾಗೂ ಡಿಸಿಎಂ ಡಿಕೆ ಶಿವಕುಮಾರ್ ಅವರನ್ನು ಭೇಟಿಯಾಗಿದ್ದಾರೆ. ಈ ಭೇಟಿಯ ಬಳಿಕ ರಾಜಕೀಯ ಪಡಸಾಲೆಯಲ್ಲಿ ಚರ್ಚೆಯೂ ಶುರುವಾಗಿದೆ.
ಭೇಟಿ ಮಾಎಇದ ಬಳಿಕ ಮಾತನಾಡಿದ ಗಾಲಿ ಜನಾರ್ದನ ರೆಡ್ಡಿ ಅವರು, ಐತಿಹಾಸಿಕ ಆನೆಗುಂದಿ ಉತ್ಸವವನ್ನು ಅದ್ದೂರಿಯಾಗಿ ಆಚರಣೆ ಮಾಡಲು ಜಿಲ್ಲಾಡಳಿತ ನಿರ್ಧಾರ ಮಾಡಿದೆ. ಮಾರ್ಚ್ ತಿಂಗಳಲ್ಲಿ ಈ ವೈಭವ ನಡೆಯಲಿದೆ. ಹೀಗಾಗಿ ಈ ವೈಭವಕ್ಕೆ ಸಿಎಂ ಸಿದ್ದರಾಮಯ್ಯ ಹಾಗೂ ಡಿಸಿಎಂ ಡಿಕೆ ಶಿವಕುಮಾರ್ ಅವರನ್ನು ಆಹ್ವಾನಿಸಲು ಬಂದಿದ್ದೇ ಎಂದಿದ್ದಾರೆ.

ಇದೇ ವೇಳೆ ರಾಜ್ಯಸಭಾ ಚಿನಾವಣೆಯ ವಿಚಾರ ಚರ್ಚೆಗೆ ಬಂತ ಎಂಬ ಪ್ರಶ್ನೆಗೆ ಉತ್ತರ ನೀಡಿರುವ ಶಾಸಕ ಜನಾರ್ದನ ರೆಡ್ಡಿ, ರಾಜ್ಯಸಭಾ ಚುನಾವಣೆಗೆ ಎಲ್ಲರೂ ಮನವಿ ಮಾಡಿದ್ದಾರೆ. ಸಿಎಂ ಹಾಗೂ ಡಿಸಿಎಂ ಆದಿಯಾಗಿ ಎಲ್ಲಾ ಪಕ್ಷದವರು ಮನವಿ ಮಾಡಿದ್ದಾರೆ. ನಾನಿನ್ನೂ ತೀರ್ಮಾನ ಮಾಡಿಲ್ಲ ಎಂದಿದ್ದಾರೆ. ಐದು ಜನರು ರಾಜ್ಯಸಭೆಗೆ ಸ್ಪರ್ಧೆ ಹೊಡ್ಡಿರುವ ಕಾರಣ ಈ ಬಾರಿಯ ರಾಜ್ಯಸಭಾ ಚುನಾವಣೆಯೂ ಎಲ್ಲರ ಕುತೂಹಲಕ್ಕೆ ಕಾರಣವಾಗಿದೆ. ಸ್ವತಂತ್ರವಾಗಿ ಗೆದ್ದ ಶಾಸಕರಿಗೂ ಬೆಂಬಲ ನೀಡಲೂ ಮೂರು ಪಕ್ಷಗಳು ತೀರ್ಮಾನ ನಡೆಸಿವೆ.
ಸಾರ್ವಜನಿಕ ಕುಂದುಕೊರತೆ ವಿಭಾಗ : ನಿಮ್ಮ ಧ್ವನಿ - ನಮ್ಮ ವೇದಿಕೆ
ನಿಮ್ಮ ಊರಿನ ಸಮಸ್ಯೆಗಳು ಇನ್ನು ಮುಂದೆ ಕೇವಲ ಚರ್ಚೆಯಾಗಬಾರದು, ಅವುಗಳಿಗೆ ಪರಿಹಾರ ಸಿಗಬೇಕು.
ವರದಿ ಮಾಡುವುದು ಹೇಗೆ?
- ನಿಮ್ಮ ಸುತ್ತಮುತ್ತಲಿನ ರಸ್ತೆ, ನೀರು, ವಿದ್ಯುತ್ ಸಮಸ್ಯೆಗಳ ಫೋಟೋ, ವಿಡಿಯೋ ಅಥವಾ ಮಾಹಿತಿ ನಮಗೆ ಕಳುಹಿಸಿ.
ನಾವು ಏನು ಮಾಡುತ್ತೇವೆ?
- ನೀವು ಕಳುಹಿಸಿದ ವರದಿಗಳನ್ನು suddione.com ನಲ್ಲಿ ಪ್ರಕಟಿಸುತ್ತೇವೆ.
- ಸಂಬಂಧಪಟ್ಟ ಇಲಾಖೆಯ ಅಧಿಕಾರಿಗಳ ಗಮನಕ್ಕೆ ತಂದು ಪರಿಹಾರಕ್ಕಾಗಿ ಒತ್ತಾಯಿಸುತ್ತೇವೆ.
- ನಿಮ್ಮೂರಿನ ಅಭಿವೃದ್ಧಿಗೆ ನಿಮ್ಮೊಂದಿಗೆ ಧ್ವನಿಗೂಡಿಸುತ್ತೇವೆ.

















