Kannada news ಚಿತ್ರದುರ್ಗ ದಾವಣಗೆರೆ ಬೆಂಗಳೂರು ರಾಜಕೀಯ ಚುನಾವಣೆ ಮಳೆ ಕ್ರಿಕೆಟ್ ಭಾರತ ಚಿನ್ನ ಬೆಳ್ಳಿ ಹವಾಮಾನ ಕ್ರಿಕೆಟ್  ಕನ್ನಡ ನ್ಯೂಸ್

ನಾಡಿನೆಲ್ಲೆಡೆ ಗಣೇಶ ಚತುರ್ಥಿ ಸಂಭ್ರಮ : ಮಂತ್ರಾಲಯದಲ್ಲಿ ಮಣ್ಣಿನ ಗಣಪತಿ ವಿತರಣೆ

---Advertisement---

 

ಮಂತ್ರಾಲಯ: ನಾಡಿನೆಲ್ಲೆಡೆ ಇಂದು ಗಣೇಶ ಹಬ್ಬದ ಸಂಭ್ರಮ ಮನೆ ಮಾಡಿದೆ. ಒಂದಷ್ಟು ಬೆಳಗ್ಗಿನ ಮುಹೂರ್ತದಲ್ಲಿಯೇ ಗಣಪತಿ ಮೂರ್ತಿಯನ್ನ ಕೂರಿಸಿ ಪೂಜೆ ಸಲ್ಲಿಸಿದ್ದಾರೆ. ಇನ್ನು‌ ಕೆಲವರು ಸಂಜೆಯ ಮುಹೂರ್ತದಲ್ಲಿ ಪೂಜೆ ನೆರವೇರಿಸಲಿದ್ದಾರೆ. ಎಲ್ಲಾ ಊರುಗಳಲ್ಲೂ ಇಂದಿನಿಂದ ಮೂರು ಅಥವಾ ಐದು ದಿನ ಗಣೇಶನದ್ದೇ ದರ್ಬಾರು. ಈ ಸಂಭ್ರಮ ಮಂತ್ರಾಲಯದಲ್ಲಿಯೂ ಮನೆ ಮಾಡಿದೆ.

ಮಂತ್ರಾಲಯದ ಓಲ್ಡ್ ಟೌಬ್ ಆಂಜನೇಯ ದೇವಸ್ಥಾನದಲ್ಲಿ ನೂರಾರು ಮಣ್ಣಿನ ಗಣಪತಿಗಳನ್ನ ಪೂಜೆ ಮಾಡಿ, ಭಕ್ತರಿಗೆ ನೀಡುತ್ತಿದ್ದಾರೆ. ರಾಯರ ಮಠದ ಪೀಠಾಧಿಪತಿಗಳಾದ ಸುಬುದೇಂದ್ರ ಶ್ರೀಗಳು ಗಣಪತಿ ಮೂರ್ತಿಗಳಿಗೆ ಪೂಜೆ ಸಲ್ಲಿಸಿ, ಬಳಿಕ ಭಕ್ತರಿಗೆ ನೀಡುತ್ತಿದ್ದಾರೆ. ಮಠದಲ್ಲಿ ಮೊದಲೇ ಹೆಸರು ನೋಂದಾಯಿಸಿದ ಭಕ್ತರು ಈ ಮೂರ್ತಿಗಳನ್ನು ತೆಗೆದುಕೊಂಡು ಹೋಗಿ ತಮ್ಮ ತಮ್ಮ ಮನೆಯಲ್ಲಿ ಪೂಜೆ ಮಾಡಿ, ಆ ನಂತರ ನೀರಿನಲ್ಲಿ ಬಿಡುತ್ತಾರೆ. ಅದರಲ್ಲೂ ಸುಬುದೇಂದ್ರ ಶ್ರೀಗಳಿಂದ ಬಂದ ಗಣಪತಿಯಾಗಿರುವ ಕಾರಣಕ್ಕೆ ಇನ್ನಷ್ಟು ಸಂತಸ ಭಕ್ತರಲ್ಲಿದೆ.

ಮಣ್ಣಿನ ಗಣಪತಿಯನ್ನೇ ಪೂಜೆ ಮಾಡಿ ಎಂದು ಎಲ್ಲರು ಸಲಹೆಯನ್ನ ನೀಡುತ್ತಾರೆ. ಯಾಕಂದ್ರೆ ನೀರಿಗೆ ಬಿಟ್ಟಾಗ ಕೆರೆಯ ನೀರು ಹಾಳಾಗಬಾರದು, ಪರಿಸರಕ್ಕೆ ಯಾವುದೇ ರೀತಿಯ ಹಾನಿಯಾಗಬಾರದು ಎಂಬುದಕ್ಕೆ ಸಾಕಷ್ಟು ಜಾಗೃತಿ ಮೂಡಿಸುತ್ತಾರೆ. ಆದರೂ ಸಾಕಷ್ಟು ಜನ ಬಣ್ಣದ ಗಣಪತಿಯನ್ನೇ ಪೂಜೆ ಮಾಡುತ್ತಾರೆ. ಪರಿಸರದ ರಕ್ಷಣೆಯನ್ನು ಗೌರವಿಸಿದ ಸುಬುದೇಂದ್ರ ಶ್ರೀಗಳು ಬರುವ ಭಕ್ತಗಣಕ್ಕೆ ಮಣ್ಣಿನ ಗಣೇಶನನ್ನು ನೀಡಿದರು. ಅವರಿಂದ ಮಣ್ಣಿನ ಗಣಪತಿಯನ್ನು ತೆಗೆದುಕೊಂಡು ಹೋಗಿ ಭಕ್ತಿಯಿಂದ ಪೂಜೆ ಮಾಡಿದ್ದಾರೆ. ನಾಡಿನೆಲ್ಲೆಡೆ ಸಾಕಷ್ಟು ಜನ ಮನೆಯಲ್ಲಿಯೂ ಗಣೇಶನನ್ನು ಇಟ್ಟು ಪೂಜೆ ಮಾಡುತ್ತಿದ್ದಾರೆ.

ಸಾರ್ವಜನಿಕ ಕುಂದುಕೊರತೆ ವಿಭಾಗ : ನಿಮ್ಮ ಧ್ವನಿ - ನಮ್ಮ ವೇದಿಕೆ

ನಿಮ್ಮ ಊರಿನ ಸಮಸ್ಯೆಗಳು ಇನ್ನು ಮುಂದೆ ಕೇವಲ ಚರ್ಚೆಯಾಗಬಾರದು, ಅವುಗಳಿಗೆ ಪರಿಹಾರ ಸಿಗಬೇಕು.

ವರದಿ ಮಾಡುವುದು ಹೇಗೆ?

  • ನಿಮ್ಮ ಸುತ್ತಮುತ್ತಲಿನ ರಸ್ತೆ, ನೀರು, ವಿದ್ಯುತ್ ಸಮಸ್ಯೆಗಳ ಫೋಟೋ, ವಿಡಿಯೋ ಅಥವಾ ಮಾಹಿತಿ ನಮಗೆ ಕಳುಹಿಸಿ.
ವಾಟ್ಸಪ್ ಮಾಡಿ: 90369 74702

ನಾವು ಏನು ಮಾಡುತ್ತೇವೆ?

  • ನೀವು ಕಳುಹಿಸಿದ ವರದಿಗಳನ್ನು suddione.com ನಲ್ಲಿ ಪ್ರಕಟಿಸುತ್ತೇವೆ.
  • ಸಂಬಂಧಪಟ್ಟ ಇಲಾಖೆಯ ಅಧಿಕಾರಿಗಳ ಗಮನಕ್ಕೆ ತಂದು ಪರಿಹಾರಕ್ಕಾಗಿ ಒತ್ತಾಯಿಸುತ್ತೇವೆ.
  • ನಿಮ್ಮೂರಿನ ಅಭಿವೃದ್ಧಿಗೆ ನಿಮ್ಮೊಂದಿಗೆ ಧ್ವನಿಗೂಡಿಸುತ್ತೇವೆ.

suddionenews

ಕನ್ನಡ ಸುದ್ದಿಗಳ ವಿಶ್ವಾಸಾರ್ಹ ಮೂಲ — suddione.com ನಲ್ಲಿ ಓದಿ ರಾಷ್ಟ್ರೀಯ, ಅಂತರರಾಷ್ಟ್ರೀಯ, ರಾಜಕೀಯ, ಕ್ರೀಡೆ, ಮನರಂಜನೆ, ವಾಣಿಜ್ಯ, ಶಿಕ್ಷಣ ಮತ್ತು ತಂತ್ರಜ್ಞಾನಕ್ಕೆ ಸಂಬಂಧಿಸಿದ ಪ್ರತಿಯೊಂದು ಪ್ರಮುಖ ಅಪ್‌ಡೇಟ್. ನೀವು ಯಾವಾಗಲೂ ಅಪ್‌ಡೇಟ್ ಆಗಿರಲು ನಾವು ವೇಗವಾದ, ನಿಖರವಾದ ಮತ್ತು ನಿಷ್ಪಕ್ಷಪಾತವಾದ ಸುದ್ದಿಗಳನ್ನು ಸರಳ ಹಾಗೂ ಸ್ಪಷ್ಟ ಭಾಷೆಯಲ್ಲಿ ನೀಡುತ್ತೇವೆ. ಸಂಪಾದಕರು: ನಾಗೇಂದ್ರ ರೆಡ್ಡಿ ಪಿ.ಎಲ್

Join WhatsApp

Join Now

Join Telegram

Join Now

Leave a Comment