Kannada news ಚಿತ್ರದುರ್ಗ ದಾವಣಗೆರೆ ಬೆಂಗಳೂರು ರಾಜಕೀಯ ಚುನಾವಣೆ ಮಳೆ ಕ್ರಿಕೆಟ್ ಭಾರತ ಚಿನ್ನ ಬೆಳ್ಳಿ ಹವಾಮಾನ ಕ್ರಿಕೆಟ್  ಕನ್ನಡ ನ್ಯೂಸ್

🔴 ಅಡ್ಮಿಷನ್ ಓಪನ್

ಇಂಡಿಯನ್ ಇಂಟರ್ ನ್ಯಾಷನಲ್ ಸ್ಕೂಲ್, ಚಿತ್ರದುರ್ಗ

2026-27ನೇ ಸಾಲಿನ ದಾಖಲಾತಿಗಳು ಪ್ರಾರಂಭ! (ಪ್ಲೇ ಗ್ರೂಪ್‌ನಿಂದ 12ನೇ ತರಗತಿವರೆಗೆ)

ಸಂಪೂರ್ಣ ಮಾಹಿತಿ & ದಾಖಲಾತಿಗಾಗಿ ಕ್ಲಿಕ್ ಮಾಡಿ ➔
---Advertisement---

ಚಿತ್ರದುರ್ಗದಲ್ಲಿ ಗಣೇಶ ಚತುರ್ಥಿ : ಗಮನ ಸೆಳೆದ ವೈವಿಧ್ಯಮಯ ಮೂರ್ತಿಗಳು

---Advertisement---

 

 

ವರದಿ ಮತ್ತು ಫೋಟೋ ಕೃಪೆ ಕೆ.ಎಂ.ಮುತ್ತುಸ್ವಾಮಿ ಕಣ್ಣನ್
ಮೊ : 78998 64552

ಸುದ್ದಿಒನ್, ಚಿತ್ರದುರ್ಗ, ಸೆಪ್ಟೆಂಬರ್. 09 : ವಿಘ್ನಗಳ ನಿವಾರಕ ವಿನಾಯಕ ಚತುರ್ಥಿ ಪ್ರಯುಕ್ತ ನಗರದ ವಿವಿಧೆಡೆ ಬಗೆ ಬಗೆಯ ಗಣೇಶ ಮೂರ್ತಿಯನ್ನು ಪ್ರತಿಷ್ಠಾಪಿಸಿ ಶ್ರದ್ದಾಭಕ್ತಿಯಿಂದ ಪೂಜೆ ಸಲ್ಲಿಸಲಾಗುತ್ತಿದೆ.

ಬಸವೇಶ್ವರ ನಗರದ ಪೊಲೀಸ್ ಕ್ವಾರ್ಟರ್ಸ್ ನಲ್ಲಿ ವಸತಿಗೃಹಗಳ ಅಧಿಕಾರಿಗಳು ಮತ್ತು ಸಿಬ್ಬಂದಿ ವರ್ಗದವರು ಪ್ರತಿ ವರ್ಷದಂತೆ ಈ ವರ್ಷವೂ ಕೂಡಾ ಗಣೇಶ ಮೂರ್ತಿಯನ್ನು ಪ್ರತಿಷ್ಠಾಪಿಸಲಾಗಿದ್ದು, ಇಲ್ಲಿನ ಎಲ್ಲಾ ವಸತಿಗೃಹಗಳ ನಿವಾಸಿಗಳು ಒಂದೇ ಕುಟುಂಬದವರಂತೆ ಒಂದುಗೂಡಿ ಪ್ರತಿವರ್ಷವೂ ಗಣೇಶ ಚತುರ್ಥಿ ಹಬ್ಬವನ್ನು ಅತ್ಯಂತ ಸಡಗರ ಸಂಭ್ರಮದಿಂದ ಆಚರಿಸಲಾಗುತ್ತದೆ. ವಿಶೇಷವಾಗಿ ಈ ಹಬ್ಬದ ಸಂದರ್ಭದಲ್ಲಿ ಮಕ್ಕಳು ಅತ್ಯಂತ ಸಡಗರ ಸಂಭ್ರಮದಿಂದ ಈ ಹಬ್ಬವನ್ನು ಆಚರಿಸುವುದು ಇಲ್ಲಿನ ವಿಶೇಷ.


ಜೋಗಿಮಟ್ಟಿ ರಸ್ತೆಯಲ್ಲಿರುವ ಫ್ರೆಂಡ್ಸ್ ಗಣಪತಿ ಒಂದು ಕೈಯಲ್ಲಿ ಚಕ್ರ ಹಾಗೂ ಮತ್ತೊಂದು ಕೈಯಲ್ಲಿ ಶಂಖು ಹಿಡಿದು ಭಕ್ತರ ಗಮನ ಸೆಳೆಯುತ್ತಿದೆ. ಕರುವಿನಕಟ್ಟೆ ವೃತ್ತದಲ್ಲಿ ಮಹಾರಾಜ್ ಗಣಪ ಭಕ್ತರನ್ನು ಆಕರ್ಷಿಸುತ್ತಿದೆ. ಹೊಳಲ್ಕೆರೆ ರಸ್ತೆಯಲ್ಲಿ ಸ್ನೇಹ ಜೀವಿ ಬಳಗದಿಂದ ಪ್ರತಿಷ್ಠಾಪನೆಗೊಂಡಿರುವ ಗಣಪತಿ ಕೈಯಲ್ಲಿ ಕತ್ತಿ ಹಿಡಿದು ರಾರಾಜಿಸುತ್ತಿದೆ. ಮತ್ತೊಂದು ಗಣಪ ತಲೆಗೆ ಪೇಟ ಸುತ್ತಿಕೊಂಡು ವಿರಾಜಮಾನವಾಗಿರುವುದು ಮತ್ತೊಂದು ವಿಶೇಷ.


ನಗರದೆಲ್ಲೆಡೆ ಅಲ್ಲಲ್ಲಿ ಪ್ರತಿಷ್ಟಾಪಿಸಲಾಗಿರುವ ಗಣೇಶ ಮೂರ್ತಿಗೆ ದಿನವೂ ಒಂದೊಂದು ಬಗೆಯ ಪ್ರಸಾದದ ನೈವೇದ್ಯವಿರಿಸಿ ಪೂಜಿಸಲಾಗುತ್ತಿದೆ.

ವಿಶ್ವಹಿಂದೂ ಪರಿಷತ್, ಭಜರಂಗದಳದ ವತಿಯಿಂದ ಪ್ರತಿಷ್ಠಾಪಿಸಲಾಗಿರುವ ಗರುಡಾವಳಿ ಗಣಪನನ್ನು ಕಣ್ತುಂಬಿಕೊಳ್ಳಲು ದಿನವೂ ಬೆಳಗಿನಿಂದ ಸಂಜೆಯತನಕ ಸಾವಿರಾರು ಭಕ್ತರು ಧಾವಿಸುತ್ತಿದ್ದಾರೆ. ಅಲ್ಲಲ್ಲಿ ಭಜನೆ, ಸುಗಮ ಸಂಗೀತ, ಜಾನಪದ ನೃತ್ಯಗಳು ಮೇಳೈಸುತ್ತಿವೆ.

ನಿಮ್ಮೂರಿನ ಸುದ್ದಿ, ಈಗ 'ಸುದ್ದಿ ಒನ್' ನಲ್ಲಿ!

ನಿಮ್ಮ ಊರಿನ ಅದ್ಧೂರಿ ಜಾತ್ರೆ, ವಿಶೇಷ ಆಚರಣೆಗಳು, ಅಥವಾ ನಿಮ್ಮ ಗಮನಕ್ಕೆ ಬಂದ ಸ್ಥಳೀಯ ಸಮಸ್ಯೆಗಳೇ? ಚಿತ್ರದುರ್ಗ ಹಾಗೂ ಸುತ್ತಮುತ್ತಲಿನ ಯಾವುದೇ ಸುದ್ದಿಯಾದರೂ ನಮಗೆ ತಿಳಿಸಿ. ನಿಮ್ಮ ಧ್ವನಿಯಾಗಿ ನಾವು ನಾಡಿಗೆ ತಲುಪಿಸುತ್ತೇವೆ. ಛಾಯಾಚಿತ್ರ ಮತ್ತು ವಿವರಗಳೊಂದಿಗೆ ನಮಗೆ ಇಮೇಲ್ ಮಾಡಿ.

✉️ suddionenews@gmail.com

🛡️ ನಿಮ್ಮ ಮಾಹಿತಿಯನ್ನು ಗೌಪ್ಯವಾಗಿಡಲಾಗುವುದು.

suddionenews

ಕನ್ನಡ ಸುದ್ದಿಗಳ ವಿಶ್ವಾಸಾರ್ಹ ಮೂಲ — suddione.com ನಲ್ಲಿ ಓದಿ ರಾಷ್ಟ್ರೀಯ, ಅಂತರರಾಷ್ಟ್ರೀಯ, ರಾಜಕೀಯ, ಕ್ರೀಡೆ, ಮನರಂಜನೆ, ವಾಣಿಜ್ಯ, ಶಿಕ್ಷಣ ಮತ್ತು ತಂತ್ರಜ್ಞಾನಕ್ಕೆ ಸಂಬಂಧಿಸಿದ ಪ್ರತಿಯೊಂದು ಪ್ರಮುಖ ಅಪ್‌ಡೇಟ್. ನೀವು ಯಾವಾಗಲೂ ಅಪ್‌ಡೇಟ್ ಆಗಿರಲು ನಾವು ವೇಗವಾದ, ನಿಖರವಾದ ಮತ್ತು ನಿಷ್ಪಕ್ಷಪಾತವಾದ ಸುದ್ದಿಗಳನ್ನು ಸರಳ ಹಾಗೂ ಸ್ಪಷ್ಟ ಭಾಷೆಯಲ್ಲಿ ನೀಡುತ್ತೇವೆ. ಸಂಪಾದಕರು: ನಾಗೇಂದ್ರ ರೆಡ್ಡಿ ಪಿ.ಎಲ್

Join WhatsApp

Join Now

Join Telegram

Join Now

Leave a Comment

🏫 ಅಡ್ಮಿಷನ್ ಓಪನ್
🔒

ಇಂಡಿಯನ್ ಇಂಟರ್ ನ್ಯಾಷನಲ್ ಸ್ಕೂಲ್

ಸ್ವಾಗತ...