Kannada news ಚಿತ್ರದುರ್ಗ ದಾವಣಗೆರೆ ಬೆಂಗಳೂರು ರಾಜಕೀಯ ಚುನಾವಣೆ ಮಳೆ ಕ್ರಿಕೆಟ್ ಭಾರತ ಚಿನ್ನ ಬೆಳ್ಳಿ ಹವಾಮಾನ ಕ್ರಿಕೆಟ್  ಕನ್ನಡ ನ್ಯೂಸ್

ಗಣೇಶ ಮೂರ್ತಿ ವಿಸರ್ಜನೆ : ಚಿತ್ರದುರ್ಗ ನಗರದಲ್ಲಿ ಎಲ್ಲೆಲ್ಲಿ ತೊಟ್ಟಿಗಳ ವ್ಯವಸ್ಥೆ ಮಾಡಲಾಗಿದೆ ?

---Advertisement---

ಚಿತ್ರದುರ್. ಸೆ.04: ಗಣೇಶ ಮೂರ್ತಿ ವಿಸರ್ಜನೆಗೆ ನಗರದ ಒನಕೆ ಓಬವ್ವ ಕ್ರೀಡಾಂಗಣ ಬಳಿ, ಐಯುಡಿಪಿ ಬಡಾವಣೆ ರಾಜ್ ಕುಮಾರ್ ಪಾರ್ಕ್ ಹತ್ತಿರ, ಕೋಟೆ ರಸ್ತೆಯ ಏಕನಾಥೇಶ್ವರಿ ಪಾದ ಗುಡಿ ಮುಂಭಾಗ, ಜೆ.ಸಿ.ಆರ್. ಬಡಾವಣೆಯ ಗಣೇಶ ದೇವಸ್ಥಾನದ ಹತ್ತಿರ, ಸಿಹಿ ನೀರು ಹೊಂಡ ಆವರಣ, ಪತಂಜಲಿ ಆಸ್ಪತ್ರೆಯ ಪಕ್ಕ, ಕೆಳಗೋಟೆಯ ಚನ್ನಕೇಶವ ದೇವಸ್ಥಾನದ ಹತ್ತಿರ, ತುರುವನೂರು ರಸ್ತೆಯ ತಿಪ್ಪೇರುದ್ರಸ್ವಾಮಿ ದೇವಸ್ಥಾನ ಮುಂಭಾಗ, ಗೋಪಾಲಪುರ ನೀರಿನ ಟ್ಯಾಂಕ್ ಹತ್ತಿರ, ಗುಮಸ್ತರ ಕಾಲೋನಿ ರೈತ ಭವನದ ಹತ್ತಿರ, ಜೋಗಿಮಟ್ಟಿ ರಸ್ತೆಯ ತಿಪ್ಪಿನಘಟ್ಟಮ್ಮ ದೇವಸ್ಥಾನದ ಹತ್ತಿರದ ಪಾರ್ಕ್ ಹಾಗೂ ಚಂದ್ರವಳ್ಳಿ ಕೆರೆ ಹತ್ತಿರ ತಾತ್ಕಾಲಿಕ ನೀರಿನ ತೊಟ್ಟಿಗಳನ್ನು ವ್ಯವಸ್ಥೆ ಮಾಡಲಾಗಿದೆ ಎಂದು ನಗರಸಭೆ ಪೌರಾಯುಕ್ತೆ ಎಂ.ರೇಣುಕಾ ತಿಳಿಸಿದ್ದಾರೆ.

 

ಪ್ರಯುಕ್ತ ಪ್ಲಾಸ್ಟರ್ ಆಪ್ ಪ್ಯಾರಿಸ್ ಮತ್ತು ಭಾರಲೋಹ ಮಿಶ್ರಿತ ರಾಸಾಯನಿಕಯುಕ್ತ ಬಣ್ಣದಿಂದ ಅಲಂಕೃತಗೊಂಡಂತಹ ಯಾವುದೇ ಗಣೇಶ ಮೂರ್ತಿಗಳನ್ನು ಪ್ರತಿಷ್ಠಾಪಿಸಬಾರದು. ಮಣ್ಣಿನಿಂದ ನಿರ್ಮಸಿದ ನೈಸರ್ಗಿಕ ಬಣ್ಣ ಬಳಸಿದ ಗಣೇಶ ಮೂರ್ತಿಗಳನ್ನು ಮಾತ್ರ ಪ್ರತಿಷ್ಠಾಪಿಸಿ, ಮೂರ್ತಿಗಳನ್ನು ಪೂಜಿಸಿದ ನಂತರ ಹೊಂಡ, ಕೆರೆ ಭಾವಿಗಳಲ್ಲಿ ವಿಸರ್ಜಿಸಬಾರದು. ಇದರಿಂದ ಜಲ ಮಾಲಿನ್ಯ ಹಾಗೂ ಪರಿಸರ ಮಾಲಿನ್ಯ ಉಂಟಾಗಿ ಜೀವ ರಾಶಿಗಳ ಆರೋಗ್ಯದ ಮೇಲೆ ವ್ಯತಿರಿಕ್ತ ಪರಿಣಾಮ ಉಂಟಾಗುವ ಸಾಧ್ಯತೆ ಇದೆ. ಪರಿಸರಕ್ಕೆ ಧಕ್ಕೆಯಾಗದಂತೆ ಗಣೇಶ ಹಬ್ಬದ ನಂತರ ನಗರ ಸಭೆಯ ತಾತ್ಕಾಲಿಕ ನೀರಿನ ತೊಟ್ಟಿಗಳನ್ನು ಸದ್ಬಳಕೆ ಮಾಡಿಕೊಂಡು ಮೂರ್ತಿ ವಿಸರ್ಜಿಸುವಂತೆ ಪೌರಾಯುಕ್ತೆ ಎಂ.ರೇಣುಕಾ ನಾಗರೀಕರಲ್ಲಿ ಮನವಿ ಮಾಡಿದ್ದಾರೆ.

suddionenews

ಕನ್ನಡ ಸುದ್ದಿಗಳ ವಿಶ್ವಾಸಾರ್ಹ ಮೂಲ — suddione.com ನಲ್ಲಿ ಓದಿ ರಾಷ್ಟ್ರೀಯ, ಅಂತರರಾಷ್ಟ್ರೀಯ, ರಾಜಕೀಯ, ಕ್ರೀಡೆ, ಮನರಂಜನೆ, ವಾಣಿಜ್ಯ, ಶಿಕ್ಷಣ ಮತ್ತು ತಂತ್ರಜ್ಞಾನಕ್ಕೆ ಸಂಬಂಧಿಸಿದ ಪ್ರತಿಯೊಂದು ಪ್ರಮುಖ ಅಪ್‌ಡೇಟ್. ನೀವು ಯಾವಾಗಲೂ ಅಪ್‌ಡೇಟ್ ಆಗಿರಲು ನಾವು ವೇಗವಾದ, ನಿಖರವಾದ ಮತ್ತು ನಿಷ್ಪಕ್ಷಪಾತವಾದ ಸುದ್ದಿಗಳನ್ನು ಸರಳ ಹಾಗೂ ಸ್ಪಷ್ಟ ಭಾಷೆಯಲ್ಲಿ ನೀಡುತ್ತೇವೆ. ಸಂಪಾದಕರು: ನಾಗೇಂದ್ರ ರೆಡ್ಡಿ ಪಿ.ಎಲ್

Join WhatsApp

Join Now

Join Telegram

Join Now

Leave a Comment

🏫 ಅಡ್ಮಿಷನ್ ಓಪನ್
🔒

ಇಂಡಿಯನ್ ಇಂಟರ್ ನ್ಯಾಷನಲ್ ಸ್ಕೂಲ್

ಸ್ವಾಗತ...