Warning: Undefined array key "options" in /home/nagendra/public_html/content/plugins/elementor-pro/modules/theme-builder/widgets/site-logo.php on line 124

ಗಣೇಶ ಮೂರ್ತಿ ಎತ್ತರಕ್ಕೂ ರೂಲ್ಸ್ : ವಾಪಾಸ್ ಪಡೆಯುವಂತೆ ಡಿಕೆಶಿ ಆಗ್ರಹ

Facebook
Twitter
Telegram
WhatsApp

ಬೆಂಗಳೂರು: ಗಣೇಶನ ಹಬ್ಬ ಮಾಡೋದಕ್ಕೆ ಸರ್ಕಾರ ಅನುಮತಿಯನ್ನೇನೋ ಕೊಟ್ಟಿದೆ. ಆದ್ರೆ ಒಂದಷ್ಟು ಷರತ್ತುಗಳನ್ನು ವಿಧಿಸಿದೆ. ಅದರಲ್ಲಿ ಇಷ್ಟೇ ಅಡಿ ಗಣೇಶನನ್ನು ಕೂಡಿಸಬೇಕೆಂಬುದು ಒಂದು ಷರತ್ತು ಹಾಕಿದ್ದಾರೆ. ಮನೆಗಳಲ್ಲಿ 2 ಅಡಿ, ಸಾರ್ವಜನಿಕ ಸ್ಥಳದಲ್ಲಿ 4 ಅಡಿ ಗಣೇಶನನ್ನ ಇಡಲು ಸೂಚಿಸಲಾಗಿದೆ. ಇದಕ್ಕೆ ಕಾಂಗ್ರೆಸ್ ನಲ್ಲಿ ವಿರೋಧ ವ್ಯಕ್ತವಾಗಿದೆ.

ಈ ಸಂಬಂಧ ಹರಿಹಾಯ್ದಿರುವ ಕೆಪಿಸಿಸಿ ಅಧ್ಯಕ್ಷ ಡಿ ಕೆ ಶಿವಕುಮಾರ್, ಗಣೇಶನ ಹಬ್ಬಕ್ಕೆ ಕೇವಲ ಮೂರು ದಿನ ಬಾಕಿ ಇರುವಾಗ ರಾಜ್ಯ ಸರ್ಕಾರ ಈ ರೀತಿಯಾಗಿ ಹೇಳಿದೆ. ಅರ್ಥಹೀನ ನಿರ್ಬಂಧ ಹೇರುವ ಮೂಲಕ ಗಣೇಶ ತಯಾರಕರ ಬದುಕಿನ ಜೊತೆ ಚೆಲ್ಲಾಟವಾಡಿದೆ. ತಕ್ಷಣವೇ ಈ ನಿರ್ಬಂಧ ತೆರವು ಮಾಡಬೇಕೆಂದು ಒತ್ತಾಯಿಸಿದ್ದಾರೆ.

ಈಗಾಗ್ಲೇ ತಯಾರಕರು ಲಕ್ಷಾಂತರ ಮೂರ್ತಿಗಳನ್ನ ತಯಾರಿಸಿದ್ದಾರೆ. ತಯಾರಕರು ಕೊನೆ ಕ್ಷಣದಲ್ಲಿ ಇಂಥಹ ನಿರ್ಧಾರ ಕೈಗೊಂಡರೆ ಅವರ ಬದುಕು ಏನಾಗಬೇಡ ಎಂದು ಪ್ರಶ್ನಿಸಿದ್ದಾರೆ.

ಮೊದಲೇ ಇದು ಕೊರೊನಾ ಸಮಯ. ಆದಾಯವಿಲ್ಲ ಏನಿಲ್ಲ. ಅದರಲ್ಲೂ ತಮ್ಮ ಬಳಿಯಿದ್ದ ಹಣವನ್ನೆಲ್ಲಾ ಹಾಕಿ ಮೂರ್ತಿಗಳನ್ನ ತಯಾರು ಮಾಡಿದ್ದಾರೆ. ಎರಡ್ಮೂರು ತಿಂಗಳ ಮೊದಲೇ ಈ ರೀತಿಯಾದ ರೂಲ್ಸ್ ಇರುತ್ತೆ ಅಂತ ಹೇಳಿದಿದ್ರೆ ತಯಾರಕರು ಹಣ ಖರ್ಚು ಮಾಡ್ತಾನೆ ಇರ್ಲಿಲ್ಲ ಎಂದಿದ್ದಾರೆ.

Facebook
Twitter
Telegram
WhatsApp
suddionenews

suddionenews

Leave a Comment

Top Stories

ಅದ್ದೂರಿಯಾಗಿ ಜರುಗಿದ ಬೆಳಗೆರೆ ಶ್ರೀ ಲಕ್ಷ್ಮಿ ರಂಗನಾಥ ಸ್ವಾಮಿ ಬ್ರಹ್ಮರಥೋತ್ಸವ

  ವರದಿ ಮತ್ತು ಫೋಟೋ ಕೃಪೆ ಸುರೇಶ್ ಬೆಳಗೆರೆ ಮೊ : 97398 75729   ಚಳ್ಳಕೆರೆ, ಏಪ್ರಿಲ್. 25 : ತಾಲೂಕಿನ ಬೆಳಗೆರೆ ಹಾಗೂ ನಾರಾಯಣಪುರದ ಮಧ್ಯ ಕೆರೆ  ಏರಿ ಬುಡದಲ್ಲಿ ನೆಲೆಸಿರುವ

ಗುಡುಗು, ಸಿಡಿಲು ಬಡಿತ: ಸಾರ್ವಜನಿಕರಿಗೆ ಪ್ರಮುಖ ಸಲಹೆಗಳು

ಚಿತ್ರದುರ್ಗ. ಏ.25 : ಗುಡುಗು, ಸಿಡಿಲು ಬಡಿತ ಪ್ರತಿಕೂಲ ಪರಿಣಾಮಗಳ ಸಂದರ್ಭದಲ್ಲಿ ಕಂದಾಯ ಇಲಾಖೆ (ವಿಪತ್ತು ನಿರ್ವಹಣೆ)ಯ ಸರ್ಕಾರದ ಪ್ರಧಾನ ಕಾರ್ಯದರ್ಶಿ ಸುತ್ತೋಲೆ ಹೊರಡಿಸಿ ತಿಳಿಸಿದ ನಿಯಮಗಳನ್ನು ಸಾರ್ವಜನಿಕರು ಚಾಚು ತಪ್ಪದೆ ಪಾಲನೆ ಮಾಡಬೇಕು

ಕಾಯಕ ಸಮುದಾಯ ಬಿ.ಎನ್.ಚಂದ್ರಪ್ಪ, ಪ್ರಭಾ ಮಲ್ಲಿಕಾರ್ಜನ್ ರವರನ್ನು ಬೆಂಬಲಿಸಲಿ : ಎನ್.ಡಿ.ಕುಮಾರ್ ಮನವಿ

ವರದಿ ಮತ್ತು ಫೋಟೋ ಕೃಪೆ ಸುರೇಶ್ ಪಟ್ಟಣ್, ಮೊ : 98862 95817 ಸುದ್ದಿಒನ್, ಚಿತ್ರದುರ್ಗ ಏ.25 : ಚಿತ್ರದುರ್ಗ ಕ್ಷೇತ್ರದಲ್ಲಿ ಕಾಂಗ್ರೆಸ್ ಅಭ್ಯರ್ಥಿಗಳಾದ ಬಿ.ಎನ್.ಚಂದ್ರಪ್ಪ, ಮತ್ತು ದಾವಣಗೆರೆ ಕ್ಷೇತ್ರದಲ್ಲಿ ಪ್ರಭಾ ಮಲ್ಲಿಕಾರ್ಜನ್ ಅವರನ್ನು

error: Content is protected !!