Notice: Undefined index: options in /home/nagendra/public_html/content/plugins/elementor-pro/modules/theme-builder/widgets/site-logo.php on line 124

ಚಳ್ಳಕೆರೆಯಲ್ಲಿ ಗ್ಯಾಸ್ ಸಿಲಿಂಡರ್ ಸ್ಫೋಟ : ತಪ್ಪಿದ ಬಾರಿ ಅನಾಹುತ…!

Facebook
Twitter
Telegram
WhatsApp

ವರದಿ ಮತ್ತು ಫೋಟೋ ಕೃಪೆ
ಸುರೇಶ್ ಬೆಳಗೆರೆ
ಮೊ : 9739875729

ಚಳ್ಳಕೆರೆ : (ಫೆ.27) :  ಮನೆಯಲ್ಲಿದ್ದ ಗ್ಯಾಸ್ ಸಿಲಿಂಡರ್ ಸ್ಫೋಟಗೊಂಡು ಮೂರು ಮನೆಗಳು ಹಾಗೂ ಮನೆಲಿದ್ದ ಅಂಗಡಿ ಸುಟ್ಟಿರುವ ಘಟನೆ ನಡೆದಿದೆ.

ವಾಸದ ಮನೆಗೆ ಗ್ಯಾಸ್ ಸಿಲಿಂಡರ್ ಸ್ಫೋಟಗೊಂಡು ಬೆಂಕಿಯಿಂದ ಮನೇಯಲ್ಲಿದ್ದ ದವಸ ಧಾನ್ಯಗಳು, ಬಟ್ಟೆ ಬರೆಗಳು ಹಾಗೂ ಅಂಗಡಿಯ ವಸ್ತುಗಳು ಸುಟ್ಟಿದ್ದು ಸುಮಾರು 3 ಲಕ್ಷ ರೂಪಾಯಿ ನಷ್ಟವಾಗಿದೆ ಎಂದು ಅಂದಾಜಿಸಲಾಗಿದೆ.

ಚಳ್ಳಕೆರೆ ತಾಲೂಕಿನ ಯಲಗಟ್ಟೆ ಗೊಲ್ಲರಹಟ್ಟಿ ಗ್ರಾಮದಲ್ಲಿ ಇಂದು(ಮಂಗಳವಾರ) ಬೆಳಿಗ್ಗೆ 11 ಗಂಟೆ ಸುಮಾರಿಗೆ ಈ ಘಟನೆ ನಡೆದಿದೆ.

ಯಲಗಟ್ಟೆ ಗೊಲ್ಲರಹಟ್ಟಿಯ ಚಂದ್ರಣ್ಣ ಹಾಗೂ ಈರಣ್ಣ ಎಂಬುವರ ಮನೆಗಳಿಗೆ ಹಾನಿಯಾಗಿದೆ  . ಸಿಲಿಂಡರ್ ಸ್ಫೋಟಕ್ಕೆ ಇಡೀ ಗ್ರಾಮವೇ ಬೆಚ್ಚಿಬಿದ್ದಿದೆ. ಮನೆಯಲ್ಲಿ ಇದ್ದ ದವಸ ಧಾನ್ಯ ಬಟ್ಟೆ ಇತರೆ ವಸ್ತುಗಳು ಸುಟ್ಟು ಕರಕಲಾಗಿವೆ.

ಬೆಂಕಿ ಕಾಣಿಸಿಕೊಡ ತಕ್ಷಣವೇ ಅಗ್ನಿಶಾಮಕ ಠಾಣೆಗೆ ದೂರವಾಣಿ ಕರೆ ಮಾಡಿದ್ದು ಅಗ್ನಿಶಾಮಕ ದಳದವರು ಗ್ರಾಮಕ್ಕೆ ಬರುವ ಸಮಯಕ್ಕೆ ಮನೆಯ ಮೇಲ್ಚಾವಣಿ ಸುಟ್ಟಿದ್ದು, ಮನೆಯಲ್ಲಿ ಇದ್ದಂತಹ ವಸ್ತುಗಳೆಲ್ಲ ಸುಟ್ಟಿವೆ.  ಈ ಅಗ್ನಿ ಅನಾಹುತದಲ್ಲಿ ಅದೃಷ್ಟವಶಾತ್ ಯಾವುದೇ ಪ್ರಾಣ ಹಾನಿ ಸಂಭವಿಸಿಲ್ಲ.

ಘಟನಾ ವಿಷಯ ತಿಳಿಯುತ್ತಿದ್ದಂತೆ ಪರಶುರಾಮಪುರ ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ಜಿಟಿ ಶಶಿಧರ್ ಸ್ಥಳಕ್ಕೆ ಭೇಟಿ ನೀಡಿ, ಅಗ್ನಿ ಅನಾಹುತದಲ್ಲಿ ಮನೆ ಕಳೆದುಕೊಂಡವರಿಗೆ ವೈಯಕ್ತಿಕವಾಗಿ ಹಣದ ಸಹಾಯ ಮಾಡಿದ್ದಾರೆ. ಹಾಗೂ ಸ್ಟುಡಿಯೋ ಮಾಲೀಕ ಭಾನು ಸಹ ವೈಯಕ್ತಿಕ ಧನ ಸಹಾಯ ಮಾಡಿದ್ದಾರೆ.

ಈ ಸಂದರ್ಭದಲ್ಲಿ ಸಂದರ್ಭದಲ್ಲಿ ಅಗ್ನಿಶಾಮಕ ಠಾಣಾ ಸಿಬ್ಬಂದಿ, ಪರಶುರಾಮಪುರ ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ಜಿಟಿ ಶಶಿಧರ್ ಭಾನು, ವೀರೇಶ್, ಕಾಂಗ್ರೆಸ್ ಮುಖಂಡ ವೀರೇಶ್ ವೆಂಕಟೇಶ್, ಸಿರಿಯಣ್ಣ, ವೀರಣ್ಣ, ಸೇರಿದಂತೆ ಗ್ರಾಮಸ್ಥರು, ಮುಖಂಡರು ಇದ್ದರು.

Facebook
Twitter
Telegram
WhatsApp
suddionenews

suddionenews

Leave a Comment

Top Stories

ಚಿತ್ರದುರ್ಗ| ನಿರಾಶ್ರಿತರ ಬಾಳಲ್ಲಿ  ಬೆಳಕಾಗಿರುವ ಜಿಲ್ಲಾಸ್ಪತ್ರೆಯ ನೇತ್ರತಜ್ಞ ಡಾ.ಪ್ರದೀಪ್

  ಸುದ್ದಿಒನ್, ಚಿತ್ರದುರ್ಗ, ಅಕ್ಟೋಬರ್. 22 : ಹಲವು ವರ್ಷಗಳಿಂದ ಸ್ವಯಂಪ್ರೇರಿತವಾಗಿ ತಾಲ್ಲೂಕಿನ ಗೊನೂರುನಲ್ಲಿರುವ ನಿರಾಶ್ರಿತರ  ಪರಿಹಾರ ಕೇಂದ್ರಕ್ಕೆ ಕಾಲಕಾಲಕ್ಕೆ  ಜಿಲ್ಲಾಸ್ಪತ್ರೆಯ ನೇತ್ರತಜ್ಞ ಡಾ ಪ್ರದೀಪ್ ಬಿ .ಜಿ, ನೇತ್ರಾಧಿಕಾರಿ  ಕೆ. ಸಿ.ರಾಮು ಹಾಗೂ

ಬಾರೀ ಮಳೆ: ನಾಳೆ ಮತ್ತೆ ಬೆಂಗಳೂರು ಶಾಲೆಗಳಿಗೆ ರಜೆ

  ಬೆಂಗಳೂರು: ಮಳೆರಾಯ ಅದ್ಯಾಕೋ ಏನೋ ಬಿಡುವನ್ನೇ ಕೊಡದಂತೆ ಸುರಿಯುತ್ತಿದ್ದಾನೆ. ಅತ್ತ ಬೆಳೆಯನ್ನ ಕೊಯ್ಲು ಮಾಡುವ ಸಮಯ ಅದು ಆಗ್ತಿಲ್ಲ. ಇತ್ತ ಗಿಡಗಳಿಗೆ ಔಷಧಿ ಹೊಡೆಯುವ ಸಮಯ. ಅದಕ್ಕೂ ಸಮಯ ಸಾಕಾಗುತ್ತಿಲ್ಲ. ಆದರೆ ಮಳೆರಾಯ

ಸಿಪಿ ಯೋಗೀಶ್ವರ್ ಗೆ ಕಾಂಗ್ರೆಸ್ ನಿಂದ ಆಫರ್ ಬಂದಿದ್ಯಾ..? ಸ್ವತಃ ಸಿಪಿವೈ ಹೇಳಿದ್ದೇನು..?

ರಾಮನಗರ: ಚನ್ನಪಟ್ಟಣ ಕ್ಷೇತ್ರ ಸದ್ಯ ಹೈವೋಲ್ಟೇಜ್ ಕ್ಷೇತ್ರವಾಗಿದೆ. ಎರಡು ಪಕ್ಷಗಳಿಂದ ಯಾರು ನಿಲ್ತಾರೆ ಎಂಬ ಕುತೂಹಲ ಎಲ್ಲರಲ್ಲೂ ಇದೆ. ಸದ್ಯ ಕಾಂಗ್ರೆಸ್ ನಿಂದ ಸಿಪಿ ಯೋಗೀಶ್ವರ್ ಗೆ ಆಫರ್ ಹೋಗಿದೆ ಎನ್ನಲಾಗಿದೆ. ಝ ಎಲ್ಲಾ

error: Content is protected !!