ವಿಜಯನಗರ: ತುಂಗಾಭದ್ರಾ ಜಲಾಶಯದ 19ನೇ ಗೇಟಿನ ಚೈನ್ ಕಟ್ ಆಗಿತ್ತು. ಇದರಿಂದ 60 ಟಿಎಂಸಿ ನೀರು ಹೊರಗೆ ಹೋಗಿತ್ತು. ಈ ಘಟನೆಯ ಬಳಿಕ ಡಿಸಿಎಂ ಡಿಕೆ ಶಿವಕುಮಾರ್ ಅವರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ಗೇಟ್ ಲಿಂಕ್ ಚೈನ್ ಕಟ್ ಆಗಿರುವ ಜಾಗಕ್ಕೆ ಭೇಟಿ ನೀಡಿ, ಅಧಿಕಾರಿಗಳಿಗೆ ಮಾಹಿತಿ ನೀಡಿದ್ದಾರೆ. ದುರಸ್ತಿ ಕಾರ್ಯ ಮಾಡುವುದಕ್ಕೆ ಹಿಡಿಯುವ ಸಮಯದ ಬಗ್ಗೆಯೂ ಮಾಹಿತಿ ತಿಳಿದುಕೊಂಡರು.
ಡಿಸಿಎಂ ಡಿಕೆ ಶಿವಕುಮಾರ್ ಅವರಿಗೆ ಡ್ಯಾಂನ ನೀಲನಕ್ಷೆ ತೋರಿಸಿದ ಅಧಿಕಾರಿಗಳು ಇಂಚಿಂಚು ಮಾಹಿತಿಯನ್ನು ನೀಡಿದರು. ಡ್ಯಾಂ ಪರಿಶೀಲನೆ ಬಳಿಕ ಮಾತನಾಡಿದ ಡಿಸಿಎಂ ಡಿಕೆ ಶಿವಕುಮಾರ್, ಇಲ್ಲಿನ ನೀರು ಕರ್ನಾಟಕ, ಆಂಧ್ರ, ತೆಲಂಗಾಣ ಜನತೆಯ ಜೀವನಾಡಿ ಇದು. 13 ಲಕ್ಷ ರೈತರಿಗೆ ನೀರು ಒದಗಿಸುವ ಜಲಾಶಯವಿದು. ಈ ರೀತಿಯ ಪರಿಸ್ಥಿತಿ ಕಂಡು ಬೇಸರವಾಗಿದೆ. ಇಂತಹ ಡ್ಯಾಂಗೆ ಗೇಟ್ ಚೈನ್ ಕಟ್ ಆಗಿದ್ದು ಆಶ್ಚತ್ಯಕರ ಸಂಗತಿ. ನಿನ್ನೆ ಮಧ್ಯರಾತ್ರಿ 10 ಗೇಟ್ ಗಳು ಕಾರ್ಯ ನಿರ್ವಹಿಸುತ್ತಿದ್ದವು. ಆದರೆ 19ನೇ ನಂಬರಿನ ಗೇಟ್ ಕಿಚ್ಚಿ ಹೋಗಿದೆ.
ಇದರಿಂದ ಡ್ಯಾಂಗೆ ಡ್ಯಾಮೇಜ್ ಆಗುವ ಸಾಧ್ಯತೆ ಇತ್ತು. ಆದರೆ ನಮ್ಮ ಅಧಿಕಾರುಗಳು ತಕ್ಷಣ ಕಾರ್ಯಪ್ರವೃತ್ತರಾಗಿದ್ದಾರೆ. ಎಲ್ಲಾ ಗೇಟ್ ಗಳನ್ನು ತೆಗೆದು ನೀರು ಬಿಟ್ಟಿದ್ದಾರೆ. ಈಗ ಗೇಟ್ ಕೊಚ್ಚಿ ಹೋಗಿರುವುದಕ್ಕೆ ನಾರಾಯಣ ಹಾಗೂ ಹಿಂದೂಸ್ತಾನಿ ಸ್ಟೀಲ್ ಕಂಪನಿಯನ್ನು ಸಂಪರ್ಕ ಮಾಡಿದ್ದೇವೆ. ಗೇಟ್ ಮಾದರಿಯನ್ನು ತಯಾರಿಸಲು ಹೇಳಿದ್ದೇವೆ. ಮುರಿದು ಹೋಗಿರುವ ಗೇಟನ್ನು ಶೀಘ್ರವೇ ಸರಿ ಪಡಿಸುವ ಕೆಲಸವಾಗುತ್ತದೆ ಎಂದಿದ್ದಾರೆ.
ಸಾರ್ವಜನಿಕ ಕುಂದುಕೊರತೆ ವಿಭಾಗ : ನಿಮ್ಮ ಧ್ವನಿ - ನಮ್ಮ ವೇದಿಕೆ
ನಿಮ್ಮ ಊರಿನ ಸಮಸ್ಯೆಗಳು ಇನ್ನು ಮುಂದೆ ಕೇವಲ ಚರ್ಚೆಯಾಗಬಾರದು, ಅವುಗಳಿಗೆ ಪರಿಹಾರ ಸಿಗಬೇಕು.
ವರದಿ ಮಾಡುವುದು ಹೇಗೆ?
- ನಿಮ್ಮ ಸುತ್ತಮುತ್ತಲಿನ ರಸ್ತೆ, ನೀರು, ವಿದ್ಯುತ್ ಸಮಸ್ಯೆಗಳ ಫೋಟೋ, ವಿಡಿಯೋ ಅಥವಾ ಮಾಹಿತಿ ನಮಗೆ ಕಳುಹಿಸಿ.
ನಾವು ಏನು ಮಾಡುತ್ತೇವೆ?
- ನೀವು ಕಳುಹಿಸಿದ ವರದಿಗಳನ್ನು suddione.com ನಲ್ಲಿ ಪ್ರಕಟಿಸುತ್ತೇವೆ.
- ಸಂಬಂಧಪಟ್ಟ ಇಲಾಖೆಯ ಅಧಿಕಾರಿಗಳ ಗಮನಕ್ಕೆ ತಂದು ಪರಿಹಾರಕ್ಕಾಗಿ ಒತ್ತಾಯಿಸುತ್ತೇವೆ.
- ನಿಮ್ಮೂರಿನ ಅಭಿವೃದ್ಧಿಗೆ ನಿಮ್ಮೊಂದಿಗೆ ಧ್ವನಿಗೂಡಿಸುತ್ತೇವೆ.











