ವರದಿ ಮತ್ತು ಫೋಟೋ ಕೃಪೆ
ಸುರೇಶ್ ಪಟ್ಟಣ್,
ಮೊ : 98862 95817

ಸುದ್ದಿಒನ್, ಚಿತ್ರದುರ್ಗ. ಆ. 26 : ನಗರದ ವೀರಶೈವ ಲಿಂಗಾಯತ ಪಂಚಮಸಾಲಿ ಸಮಾಜದ ಕಿತ್ತೂರು ರಾಣಿ ಚನ್ನಮ್ಮ ಜಿಲ್ಲಾ ಮಹಿಳಾ ಘಟಕದವತಿಯಿಂದ ಗೌರಿ ಹಬ್ಬದ ಅಂಗವಾಗಿ ಇಂದು ನಗರದ ಜೆಸಿಆರ್ ಗಣಪತಿ ದೇವಾಲಯದಲ್ಲಿ ಮಹಿಳೆಯರಿಗೆ ಬಾಗಿನ ಅರ್ಪಿಸುವ ಕಾರ್ಯಕ್ರಮವನ್ನು ನಡೆಸಲಾಯಿತು.
ಗೌರಿ ಹಬ್ಬದಲ್ಲಿ ಮಹಿಳೆಯರಿಗೆ ಬಾಗಿನ ನೀಡುವುದು ನಮ್ಮ ಸಂಪ್ರಾದಾಯವಾಗಿದೆ. ಇದನ್ನು ಪಂಚಮಸಾಲಿ ಮಹಿಳಾ ಘಟಕ ಇದನ್ನು ಕಳೆದ ಹಲವಾರು ವರ್ಷದಿಂದ ನಡೆಸಿಕೊಂಡು ಬಂದಿದೆ. ಈ ಬಾರಿ ಜೆಸಿಆರ್ ಗಣಪತಿ ದೇವಾಲಯದಲ್ಲಿ ಮಹಿಳೆಯರಿಗೆ ಅಕ್ಕಿ,ಬೆಲ್ಲ,ಬೇಳೆ, ಹರಿಷಿಣ, ಕುಂಕುಮ, ಬಾಗಿನ ಸಾಮಾನುಗಳನ್ನು ಇಟ್ಟು ಅದನ್ನು ಮುತ್ತೈದೆ ಮಹಿಳೆಯರಿಗೆ ನೀಡುವುದರ ಮೂಲಕ ಗೌರಿ ಹಬ್ಬವನ್ನು ಆಚರಣೆ ಮಾಡಲಾಯಿತು. ಈ ಸಮಯದಲ್ಲಿ ಪಕ್ಕದಲ್ಲಿ ಗೌರಿಯನ್ನು ಪ್ರತಿಷ್ಠಾಪನೆ ಮಾಡುವುದರ ಮೂಲಕ ಆಗಮಿಸಿದ ಎಲ್ಲರಿಗೂ ಸಹಾ ಮಂಗಳರಾತಿಯನ್ನು ಮಾಡಿ ಪ್ರಸಾದವನ್ನು ನೀಡಲಾಯಿತು.
ಈ ಸಂದರ್ಭದಲ್ಲಿ ಪಂಚಮಸಾಲಿ ಮಹಿಳಾಮ ಘಟಕದ ಉಪಾಧ್ಯಕ್ಷರಾದ ಶ್ರೀಮತಿ ಆಶಾ ಕಲ್ಲಪ್ಪ, ಶ್ರೀಮತಿ ಉಷಾ ಮಂಜುನಾಥ್, ಶ್ರೀಮತಿ ಶೈಲ ಕಲ್ಲೇಶ್, ಶ್ರೀಮತಿ ಶಶಿಕಲಾ ಶರಣಯ್ಯ, ಕುಮಾರಿ ಕಲಾವತಿ, ನೀಲಮ್ಮ, ತೇಜಸ್ವಿನಿ ಸೇರಿದಂತೆ ಇತರರು ಭಾಗವಹಿಸಿದ್ದರು. ಈ ಸಮಯದಲ್ಲಿ ಸುಮಾರು 50ಕ್ಕೂ ಹೆಚ್ಚು ಮುತ್ತೈದೆ ಮಹಿಳೆಯರಿಗೆ ಬಾಗಿನವನ್ನು ನೀಡಲಾಯಿತು.
ಸಾರ್ವಜನಿಕ ಕುಂದುಕೊರತೆ ವಿಭಾಗ : ನಿಮ್ಮ ಧ್ವನಿ - ನಮ್ಮ ವೇದಿಕೆ
ನಿಮ್ಮ ಊರಿನ ಸಮಸ್ಯೆಗಳು ಇನ್ನು ಮುಂದೆ ಕೇವಲ ಚರ್ಚೆಯಾಗಬಾರದು, ಅವುಗಳಿಗೆ ಪರಿಹಾರ ಸಿಗಬೇಕು.
ವರದಿ ಮಾಡುವುದು ಹೇಗೆ?
- ನಿಮ್ಮ ಸುತ್ತಮುತ್ತಲಿನ ರಸ್ತೆ, ನೀರು, ವಿದ್ಯುತ್ ಸಮಸ್ಯೆಗಳ ಫೋಟೋ, ವಿಡಿಯೋ ಅಥವಾ ಮಾಹಿತಿ ನಮಗೆ ಕಳುಹಿಸಿ.
ನಾವು ಏನು ಮಾಡುತ್ತೇವೆ?
- ನೀವು ಕಳುಹಿಸಿದ ವರದಿಗಳನ್ನು suddione.com ನಲ್ಲಿ ಪ್ರಕಟಿಸುತ್ತೇವೆ.
- ಸಂಬಂಧಪಟ್ಟ ಇಲಾಖೆಯ ಅಧಿಕಾರಿಗಳ ಗಮನಕ್ಕೆ ತಂದು ಪರಿಹಾರಕ್ಕಾಗಿ ಒತ್ತಾಯಿಸುತ್ತೇವೆ.
- ನಿಮ್ಮೂರಿನ ಅಭಿವೃದ್ಧಿಗೆ ನಿಮ್ಮೊಂದಿಗೆ ಧ್ವನಿಗೂಡಿಸುತ್ತೇವೆ.











