ನಮ್ಮ‌ಗಮನಕ್ಕೆ ಬಾರದೆ ಗೌರಿಶಂಕರ್ ಸೇರ್ಪಡೆ : ಸಚಿವ ಕೆ ಎನ್ ರಾಜಣ್ಣ ಅಸಮಾಧಾನ

ಹಾಸನ: ಇಂದು ಜೆಡಿಎಸ್ ಮಾಜಿ ಶಾಸಕ ಗೌರಿಶಂಕರ್ ಹಾಗೂ ಮಂಜುನಾಥ್ ಕಾಂಗ್ರೆಸ್ ಪಕ್ಷ ಸೇರ್ಪಡೆಯಾಗಿದ್ದಾರೆ. ಸಿಎಂ ಸಿದ್ದರಾಮಯ್ಯ ಹಾಗೂ ಡಿಸಿಎಂ ಡಿಕೆ ಶಿವಕುಮಾರ್ ಅವರೇ ಬರಮಾಡಿಕೊಂಡಿದ್ದಾರೆ. ಈ ವಿಚಾರಕ್ಕೆ ಸಚಿವ ಕೆ ಎನ್ ರಾಜಣ್ಣ ಅಸಮಾಧಾನ ಹೊರ ಹಾಕಿದ್ದಾರೆ.

ಇಂದು ಹಾಸನಾಂಬೆಯ ಬಾಗಿಲನ್ನು ಮುಚ್ಚಲಾಗಿದೆ. ಮುಂದಿನ ವರ್ಷಕ್ಕಷ್ಟೇ ದರ್ಶನದ ಭಾಗ್ಯ ಸಿಗುವುದು. ಕೊನೆಯ ಪೂಜೆಯಲ್ಲಿ ಭಾಗಿಯಾಗಿದ್ದ ಸಚಿವ ಕೆ ಎನ್ ರಾಜಣ್ಣ, ಗೌರಿಶಂಕರ್ ಸೇರ್ಪಡೆ ಬಗ್ಗೆ ಮಾತನಾಡಿದ್ದಾರೆ. ನಮ್ಮ ಗಮನಕ್ಕೆ ಬಾರದೆ ಗೌರಿ ಶಂಕರ್ ಅವರನ್ನು ಪಕ್ಷಕ್ಕೆ ಸೇರ್ಪಡೆ ಮಾಡಿಕೊಂಡಿರುವುದು ಅಸಮಾಧಾನವಿದೆ. ಜಿಲ್ಲೆಯ ಯಾವ ನಾಯಕರನ್ನು ಸಂಪರ್ಕಿಸದೆ ಪಕ್ಷಕ್ಕೆ ಸೇರಿಸಿಕೊಂಡಿದ್ದಾರೆ. ಇದಕ್ಕೆ ಅಸಮಾಧಾನವಿದೆ ಎಂದಿದ್ದಾರೆ.

 

ತುಮಕೂರಿನ ಜಿಲ್ಲಾ ಅಧ್ಯಕ್ಷರಿಗೂ ಮಾಹಿತಿ ಇಲ್ಲ. ನನಗಾಗಲೀ, ಜಿ ಪರಮೇಶ್ವರ್ ಗಾಗಲೀ ಯಾವುದೇ ಮಾಹಿತಿ ಇಲ್ಲ. ಜಿಲ್ಲೆಯಲ್ಲಿ ಏನೇ ಆದರೂ ನನಗೂ, ಜಿ ಪರಮೇಶ್ವರ್ ಗೂ ನಿಭಾಯಿಸುವ ಶಕ್ತಿ ಜನ ನೀಡಿದ್ದಾರೆ. ಎಂಥಹ ಸಂಧರ್ಭವೇ ಬಂದರೂ ನಿಭಾಯಿಸುತ್ತೇವೆ. ನಾವೇನು ಅಶಕ್ತರಲ್ಲ. ಕಾಂಗ್ರೆಸ್ ಸಮುದ್ರವಿದ್ದಂತೆ. ಸಮುದ್ರದಲ್ಲಿ ಗಂಗಾ ಮಾತೆಯಂತೆ ಪವಿತ್ರಜಲವೂ ಬರುತ್ತದೆ, ಚರಂಡಿಯ ನೀರು ಬರುತ್ತದೆ. ಸಮುದ್ರದಲ್ಲಿ ಅಮೃತವೂ ಇರುತ್ತದೆ, ವಿಷವೂ ಬರುತ್ತದೆ. ಅಮೃತ ಸಿಗುವವರಿಗೆ ಅಮೃತ, ವಿಷ ಸಿಗುವವರಿಗೆ ವಿಷ ಸಿಗುತ್ತದೆ ಎಂದಿದ್ದಾರೆ.

ತುಮಕೂರು ಗ್ರಾಮಾಂತರದಲ್ಲಿ ಜೆಡಿಎಸ್ ಮತ್ತು ಬಿಜೆಪಿ ನಡುವೆ ನೇರಾ ನೇರ ಫೈಟ್ ಇತ್ತು. ಲೋಕಸಭೆಯಲ್ಲಿ ಬಿಜೆಪಿ ಜೊತೆಗೆ ಜೆಡಿಎಸ್ ಮೈತ್ರಿ ಮಾಡಿಕೊಂಡ ಕಾರಣ ಜೆಡಿಎಸ್ ಮಾಜಿ ಶಾಸಕ ಕಾಂಗ್ರೆಸ್ ಸೇರಿದ್ದಾರೆ. ಇನ್ಮುಂದೆ ತುಮಕೂರು ಗ್ರಾಮಾಂತರದಲ್ಲಿ ಕಾಂಗ್ರೆಸ್ ವರ್ಸಸ್ ಬಿಜೆಪಿ ಫೈಟ್ ನಡೆಯಬಹುದು.

suddionenews

Recent Posts

ಮೈಕ್ರೋ ಫೈನಾನ್ಸ್ ಸುಗ್ರಿವಾಜ್ಞೆಗೆ ಅಂಕಿತ ಹಾಕದ ರಾಜ್ಯಪಾಲರು : ಸರ್ಕಾರಕ್ಕೆ ಹಿನ್ನಡೆ

ಬೆಂಗಳೂರು: ರಾಜ್ಯಾದ್ಯಂತ ಮೈಕ್ರೋ ಫೈನಾನ್ಸ್ ಕಂಪನಿಗಳ ಕಿರುಕುಳ ಹೆಚ್ಚಾಗಿದೆ. ಇದರಿಂದ ಅದೆಷ್ಟೋ ಜನ ತಮ್ಮ ಪ್ರಾಣವನ್ನೇ ಕಳೆದುಕೊಂಡಿದ್ದಾರೆ. ಸಾಲ ಕೊಟ್ಟ…

1 hour ago

ಚಿತ್ರದುರ್ಗ APMC | ಶೇಂಗಾ, ಕಡಲೆ ಸೇರಿದಂತೆ ಇತರೆ ಉತ್ಪನ್ನಗಳ ಫೆಬ್ರವರಿ 07 ರ ಮಾರುಕಟ್ಟೆ ಧಾರಣೆ ವಿವಿರ ಇಲ್ಲಿದೆ…!

  ಸುದ್ದಿಒನ್, ಚಿತ್ರದುರ್ಗ, ಫೆಬ್ರವರಿ. 07 : ಇಂದಿನ ಕೃಷಿ ಉತ್ಪನ್ನ ಮಾರುಕಟ್ಟೆಯಲ್ಲಿ ಶೇಂಗಾ, ಕಡಲೆ, ಮೆಕ್ಕೆಜೋಳ ಸೇರಿದಂತೆ ಇತರೆ…

2 hours ago

ಚಿತ್ರದುರ್ಗದ ಅಳಿಯ ಡಾಲಿ ಮೇಲೆ ದರ್ಶನ್ ಫ್ಯಾನ್ಸ್ ಗರಂ : ಫುಲ್ ಟ್ರೋಲ್..!

ಬೆಂಗಳೂರು: ನಟ ಡಾಲಿ ಧನಂಜಯ್ ಮದುವೆ ಸಂಭ್ರಮದಲ್ಲಿದ್ದಾರೆ. ಚಿತ್ರದುರ್ಗದ ಅಳಿಯ ಬೇರೆ ಆಗ್ತಾ ಇದ್ದಾರೆ. ಧನ್ಯತಾ ಮೂಲತಃ ಚಿತ್ರದುರ್ಗದವರು. ಆದರೆ…

4 hours ago

ಮೂಡಾ ಅಪ್ಡೇಟ್: ಸಿಎಂ ಸಿದ್ದರಾಮಯ್ಯರಿಗೆ ರಿಲೀಫ್ ನೀಡಿದ ಹೈಕೋರ್ಟ್

ಬೆಂಗಳೂರು: ಇಂದು ಹೈಕೋರ್ಟ್ ಮೂಡಾ ಹಗರಣಕ್ಕೆ ಸಂಬಂಧಿಸಿದಂತೆ ವಿಚಾರಣೆ ನಡೆಸಿದ್ದು ಸಿಎಂ ಸಿದ್ದರಾಮಯ್ಯ ಅವರಿಗೆ ಬಿಗ್ ರಿಲೀಫ್ ನೀಡಿದೆ. ಈ…

5 hours ago

ಈ ರಾಶಿಯವರಿಗೆ ಒಳ್ಳೆಯ ಉದ್ಯೋಗ ಅವಕಾಶಗಳು ಒದಗಿ ಬರಲಿವೆ

ಈ ರಾಶಿಯವರಿಗೆ ಒಳ್ಳೆಯ ಉದ್ಯೋಗ ಅವಕಾಶಗಳು ಒದಗಿ ಬರಲಿವೆ, ಈ ರಾಶಿಯವರಿಗೆ ಉತ್ತಮ ಸಂಗಾತಿ ಸಿಗುವರು, ಶುಕ್ರವಾರದ ರಾಶಿ ಭವಿಷ್ಯ…

11 hours ago

ಫೆಬ್ರವರಿ 10ಕ್ಕೆ ಕರ್ನಾಟಕದಲ್ಲಿ ಕುಂಭಮೇಳ : ಹೇಗಿದೆ ತಯಾರಿ..?

  144 ವರ್ಷಗಳಿಗೊಮ್ಮೆ ಬರುವ ಮಹಾಕುಂಭಮೇಳದಲ್ಲಿ ಪುಣ್ಯ ಸ್ನಾನ ಮಾಡಿದರೆ ಕರ್ಮ ಕಳೆಯುತ್ತದೆ ಎಂದು ನಂಬಲಾಗಿದೆ. ಹೀಗಾಗಿ ಕೋಟ್ಯಾಂತರ ಮಂದಿ…

20 hours ago