Notice: Undefined index: options in /home/nagendra/public_html/content/plugins/elementor-pro/modules/theme-builder/widgets/site-logo.php on line 124

ಹೆಡ್ ಕೋಚ್ ಆಗಲು ಗೌತಮ್ ಗಂಭೀರ್ ಹಾಕಿದ್ದಾರೆ ಹಲವು ಷರತ್ತು..!

Facebook
Twitter
Telegram
WhatsApp

 

ಮುಖ್ಯ ಕೋಚ್ ಆಗಿರುವ ರಾಹುಲ್ ದ್ರಾವಿಡ್ ಅಧಿಕಾರಾವಧಿ ಈ ತಿಂಗಳ ಅಂತ್ಯಕ್ಕೆ ಮುಕ್ತಾಯಗೊಳ್ಳಲಿದೆ. ಮತ್ತೆ ಅಧಿಕಾರಾವಧಿಯಲ್ಲಿ ಮುಂದುವರೆಯಬೇಕು ಎಂದರೆ ಅರ್ಜಿ ಹಾಕಬೇಕಿತ್ತು. ಆದರೆ ರಾಹುಲ್ ದ್ರಾವಿಡ್ ಕೂಡ ನಾನು ಈ ಹುದ್ದೆಯಲ್ಲಿ ಮುಂದುವರೆಯಲ್ಲ ಎಂದೇ ಹೇಳಿದ್ದಾರೆ. ಹೀಗಾಗಿ ಹೊಸ ಕೋಚ್ ಆಯ್ಕೆ ಖಚಿತವಾಗಿದೆ.

ಈಗಾಗಲೇ ಅರ್ಜಿಗಳ ಪರಿಶೀಲನೆಯ ಕೆಲಸವೂ ಮುಗಿದಿದೆ. ಇನ್ನು ಕೆಲವೇ ದಿನಗಳಲ್ಲಿ ಟೀಂ ಇಂಡಿಯಾದ ನೂತನ ಮುಖ್ಯ ಕೋಚ್ ಯಾರು ಎಂಬುದಕ್ಕೆ ಉತ್ತರವೂ ಸಿಗಲಿದೆ. ಜೊತೆಗೆ ಗೌತಮ್ ಗಂಭೀರ್ ಆಯ್ಕೆಯೂ ಬಹುತೇಕ ಖಚಿತವಾಗಿದೆ. ಆದರೆ ಗೌತಮ್ ಗಂಭೀರ್ ಈ ಹುದ್ದೆ ಒಪ್ಪಿಕೊಳ್ಳುವುದಕ್ಕೆ ಸುಮ್ಮನೆ ಓಕೆ ಎಂದಿಲ್ಲ. ಬಿಸಿಸಿಐಗೆ ಹಲವು ಷರತ್ತುಗಳನ್ನು ವಿಧಿಸಿದ್ದಾರಂತೆ.

ಕೋಚ್ ಹುದ್ದೆ ಖಾಲಿಯಾಗುತ್ತಿರುವಾಗಲೇ ಬಿಸಿಸಿಐ ಗೌತಮ್ ಗಂಭೀರ್ ಜೊತೆಗೆ ಈ ಬಗ್ಗೆ ಚರ್ಚೆ ನಡೆಸಿದೆ. ಈ ವೇಳರ ಬಿಸಿಸಿಐ ಬಿಗ್ ಬಾಸ್ ಗಳ ಮುಂದೆ ಗಂಭೀರ್ ಹಲವು ಷರತ್ತುಗಳನ್ನು ಮುಂದಿಟ್ಟಿದ್ದಾರಂತೆ. ಆ ಷರತ್ತುಗಳಿಗೂ ಈಗಾಗಲೇ ಗ್ರೀನ್ ಸಿಗ್ನಲ್ ಸಿಕ್ಕಿದೆಯಂತೆ ಹೀಗಾಗಿ ಗೌತಮ್ ಗಂಭೀರ್ ಅವರೇ ಫಿಕ್ಸ್ ಎಂಬುದು ಬಹುತೇಕ ಖಚಿತವಾಗಿದೆ.

ಗೌತಮ್ ಗಂಭೀರ್ ಹಾಕಿರುವ ಷರತ್ತುಗಳು ಹೀಗಿವೆ:

* ಸಪೋರ್ಟಿಂಗ್ ಸ್ಟಾಫ್ ಬದಲಾವಣೆ
* ತನಗೆ ಬೇಕಾದ ಸಪೋರ್ಟಿಂಗ್ ಸ್ಟಾಫ್ ಆಯ್ಕೆ
* ತಂಡದಲ್ಲಿ ಕೆಲ ಬದಲಾವಣೆ ಮಾಡಲು ಚಿಂತನೆ
* ನಾಯಕತ್ವ ಬದಲಾವಣೆಗೂ ಇಟ್ಟಿದ್ದಾರೆ ಷರತ್ತು
* 3.5 ವರ್ಷ ಬಿಸಿಸಿಐ ತನ್ನ ನಿರ್ಣಯ ತಿರಸ್ಕರಿಸಬಾರದು
* ಐಸಿಸಿ ಟೂರ್ನಿಗಳನ್ನು ಗೆಲ್ಲುವುದಕ್ಕೆ ಪ್ಲ್ಯಾನ್ ಅಂಡ್ ನೆರವು ಕಲ್ಪಿಸಬೇಕು.

ಗೌತಮ್ ಗಂಭೀರ್ ಈ ರೀತಿಯ ಷರತ್ತುಗಳನ್ನು ಬಿಸಿಸಿಐ ಮುಂದೆ ಇಟ್ಟಿದ್ದಾರೆ. ಬಿಸಿಸಿಐ ಕೂಡ ಈ ಷರತ್ತುಗಳಿಗೆ ಓಕೆ ಎಂದಿದೆ.

Facebook
Twitter
Telegram
WhatsApp
suddionenews

suddionenews

Leave a Comment

Top Stories

ಚಿತ್ರದುರ್ಗ | ಛಾಯಾ ಟೈಲರ್ ರಮೇಶ್ ನಿಧನ

ಸುದ್ದಿಒನ್, ಚಿತ್ರದುರ್ಗ, ಅಕ್ಟೋಬರ್. 25 : ನಗರದ ಲಕ್ಷ್ಮೀ ಬಜಾರ್‌ನಲ್ಲಿರುವ ಛಾಯಾ ಟೈಲರ್ ಅಂಗಡಿ ಮಾಲೀಕ ರಮೇಶ್ (52) ಗುರುವಾರ ರಾತ್ರಿ ಹೃದಯಾಘಾತದಿಂದ ನಿಧನರಾದರು. ಮೃತರು ಪತ್ನಿ, ಪುತ್ರ, ಪುತ್ರಿ ಇದ್ದಾರೆ. ಸ್ವಗ್ರಾಮ ಹೊಸದುರ್ಗ

ಇಂದಿನಿಂದ ಹಾಸನಾಂಬೆಯ ದರ್ಶನ ಭಾಗ್ಯ : ಕ್ಯೂ ನಿಂತ ಭಕ್ತರು

  ಹಾಸನ: ವರ್ಷಕ್ಕೆ ಒಮ್ಮೆ ಬಾಗಿಲು ತೆಗೆಯುವ ದೇವಿ ಹಾಸನಾಂಬೆ. ಇದೀಗ ಮತ್ತೆ ಆ ದಿನ ಬಂದಿದೆ. ಹಾಸನಾಂಬೆಯ ಬಾಗಿಲು ತೆಗೆಯಲಾಗಿದೆ. ನಿನ್ನೆಯೇ ಹಾಸನಾಂಬೆಯ ಬಾಗಿಲು ತೆಗೆದಿದ್ದು, ಇಂದಿನಿಂದ ಸಾರ್ವಜನಿಕರಿಗೆ ಅವಕಾಶ ನೀಡಲಾಗಿದೆ. ರಾತ್ರಿಯಿಂದಾನೇ

ಕಾಂಗ್ರೆಸ್ ಪಕ್ಷ ಮುಳುಗುತ್ತಿರುವ ಹಡಗು : ಛಲವಾದಿ ನಾರಾಯಣಸ್ವಾಮಿ

ಸುದ್ದಿಒನ್, ಚಿತ್ರದುರ್ಗ, ಅಕ್ಟೋಬರ್. 25 : ಎಸ್ ಟಿ ಸೋಮಶೇಖರ್ ಬಿಜೆಪಿಯಿಂದ ಹೊರಗೆ ನಿಂತಿದ್ದಾರೆ. ಬಿಜೆಪಿ ಶಾಸಕರು ಯಾರೂ ಅಷ್ಟು ದಡ್ಡತನ ಮಾಡುವುದಿಲ್ಲ. ಈಗ ರಾಜ್ಯದಲ್ಲಿ ಮುಳುಗುತ್ತಿರುವ ಹಡಗು ಕಾಂಗ್ರೆಸ್ ಪಕ್ಷ ಎಂದು ಬಿಜೆಪಿ

error: Content is protected !!