Warning: Undefined array key "options" in /home/nagendra/public_html/content/plugins/elementor-pro/modules/theme-builder/widgets/site-logo.php on line 124

ನಾಳೆ ಗೀತಾ ಶಿವರಾಜ್ ಕುಮಾರ್ ಕಾಂಗ್ರೆಸ್ ಸೇರ್ಪಡೆ..!

Facebook
Twitter
Telegram
WhatsApp

ಬೆಂಗಳೂರು: ವಿಧಾನಸಭಾ ಚುನಾವಣೆ ಹತ್ತಿರವಾಗುತ್ತಿರುವಾಗಲೇ ಕೆಲವೊಂದು ರಾಜಕೀಯ ಅಪ್ಡೇಟ್ ಗಳು ನಡೆಯುತ್ತಿವೆ. ಪಕ್ಷದಲ್ಲಿ ಕೆಲವೊಂದು ಬದಲಾವಣೆಗಳು ನಡೆಯುತ್ತಿವೆ. ಅದರಲ್ಲಿ ಪಕ್ಷಾಂತರ ಪರ್ವವೂ ಸ್ವಲ್ಪ ಜಾಸ್ತಿಯೇ ಇದೆ. ಈಗ ಜೆಡಿಎಸ್ ನಿಂದ ಕಾಂಗ್ರೆಸ್ ನತ್ತ ಮುಖ ಮಾಡಿದ್ದಾರೆ ಗೀತಾ ಶಿವರಾಜ್ ಕುಮಾರ್.

ಕೆಪಿಸಿಸಿ ಅಧ್ಯಕ್ಷ ಡಿಕೆ ಶಿವಕುಮಾರ್ ನೇತೃತ್ವದಲ್ಲಿ ನಾಳೆಯೇ ಕಾಂಗ್ರೆಸ್ ಸೇರಲಿದ್ದಾರೆ. ಈಗಾಗಲೇ ಗೀತಾ ಶಿವರಾಜ್ಕುಮಾರ್ ಅವರ ಸಹೋದರ ಮಧು ಬಂಗಾರಪ್ಪ ಕಾಂಗ್ರೆಸ್ ನಲ್ಲಿಯೇ ಇದ್ದಾರೆ. ಮೊದಲಿನಿಂದಲೂ ಕಾಂಗ್ರೆಸ್ ಗೆ ಬನ್ನಿ ಎಂದು ಕೇಳಿದ್ದರು, ಗೀತಾ ಅವರು ಕೇಳಿರಲಿಲ್ಲ. ಆದರೆ ಇದೀಗ ಕಂಗ್ರೆಸ್ ಸೇರ್ಪಡೆ ಅಧಿಕೃತಗೊಳಿಸಿದ್ದಾರೆ.

ಜೆಡಿಎಸ್ ನಲ್ಲಿದ್ದಾಗ ಕಳೆದ ಬಾರಿ, ಶಿವಮೊಗ್ಗದಿಂದ ಸ್ಪರ್ಧಿಸಿದ್ದ ಗೀತಾ ಸ್ಪರ್ಧಿಸಿ, ಸೋಲು ಕಂಡಿದ್ದರು. ಇದೀಗ ಚುನಾವಣೆಯ ಸಂದರ್ಭದಲ್ಲಿ ಜೆಡಿಎಸ್ ಗೆ ಶಾಕ್ ನೀಡಿದ್ದಾರೆ. ಕಾಂಗ್ರೆಸ್ ಸೇರುವ ಮೂಲಕ ಸಹೋದರ ಮಧು ಬಂಗಾರಪ್ಪ ಅವರಿಗೆ ಪ್ರಚಾರದಲ್ಲಿ ಸಹಾಯ ಮಾಡಲಿದ್ದಾರೆ.

ಈ ಹಿಂದೆಯೇ ಮಧು ಬಂಗಾರಪ್ಪ ಅವರ ಪರವಾಗಿ ಪ್ರಚಾರ ಮಾಡುತ್ತೀನಿ ಅಂತ ಹೇಳಿದ್ರು. ಈಗ ಕಾಂಗ್ರೆಸ್ ಸೇರ್ಪಡೆಯಿಂದಾಗಿ, ಕಾಂಗ್ರೆಸ್ ಗೂ ಸ್ಟಾರ್ ವ್ಯಾಲ್ಯೂ ಹೆಚ್ಚಾಗಬಹುದು. ಹಿಂದುಳಿದ ವರ್ಗದ ಅಧ್ಯಕ್ಷರಾಗಿರುವ ಕಾರಣ, ಅವರ ಮತಗಳನ್ನು ಸೆಳಯಲು ಗೀತಾ ಶಿವರಾಜ್ ಕುಮಾರ್ ಅವರ ಪ್ರಚಾರ ಸಹಾಯವಾಗಬಹುದು.

Facebook
Twitter
Telegram
WhatsApp
suddionenews

suddionenews

Leave a Comment

Top Stories

ಈ ರಾಶಿಯವರು ಇಂದು ತುಂಬಾ ಖುಷಿ ಪಡೆಯುವ ಸಂದೇಶ ಪಡೆಯಲಿದ್ದಾರೆ

ಈ ರಾಶಿಯವರು ಇಂದು ತುಂಬಾ ಖುಷಿ ಪಡೆಯುವ ಸಂದೇಶ ಪಡೆಯಲಿದ್ದಾರೆ, ಶನಿವಾರ- ರಾಶಿ ಭವಿಷ್ಯ ಏಪ್ರಿಲ್-20,2024 ಸೂರ್ಯೋದಯ: 06:00, ಸೂರ್ಯಾಸ್ತ : 06:29 ಶಾಲಿವಾಹನ ಶಕೆ1945, ಶ್ರೀ ಕ್ರೋಧಿ ನಾಮ ಸಂವತ್ಸರ , ಸಂವತ್2079,

ಚಿತ್ರದುರ್ಗ | ದಾಖಲೆ ಇಲ್ಲದೆ ಸಾಗಿಸುತ್ತಿದ್ದ 20 ಲಕ್ಷ ವಶಕ್ಕೆ 

ಸುದ್ದಿಒನ್, ಚಿತ್ರದುರ್ಗ, ಏಪ್ರಿಲ್, 19 :  ನಗರದ ತಿರುಮಲ ಡಾಬ ಚೆಕ್ ಪೋಸ್ಟ್ ಬಳಿಯಲ್ಲಿ ಮಧ್ಯಾಹ್ನ ಸುಮಾರು 3.00 ಗಂಟೆ ಸಮಯದಲ್ಲಿ ಯಾವುದೇ ಸೂಕ್ತ ದಾಖಲಾತಿ ಇಲ್ಲದೆ ಸಾಗಿಸುತ್ತಿದ್ದ ರೂ.20,93,928 ರ ಮೊತ್ತವನ್ನು ಸಂಬಂಧಿಸಿದ

error: Content is protected !!