Kannada news ಚಿತ್ರದುರ್ಗ ದಾವಣಗೆರೆ ಬೆಂಗಳೂರು ರಾಜಕೀಯ ಚುನಾವಣೆ ಮಳೆ ಕ್ರಿಕೆಟ್ ಭಾರತ ಚಿನ್ನ ಬೆಳ್ಳಿ ಹವಾಮಾನ ಕ್ರಿಕೆಟ್  ಕನ್ನಡ ನ್ಯೂಸ್

🔴 ಅಡ್ಮಿಷನ್ ಓಪನ್

ಇಂಡಿಯನ್ ಇಂಟರ್ ನ್ಯಾಷನಲ್ ಸ್ಕೂಲ್, ಚಿತ್ರದುರ್ಗ

2026-27ನೇ ಸಾಲಿನ ದಾಖಲಾತಿಗಳು ಪ್ರಾರಂಭ! (ಪ್ಲೇ ಗ್ರೂಪ್‌ನಿಂದ 12ನೇ ತರಗತಿವರೆಗೆ)

ಸಂಪೂರ್ಣ ಮಾಹಿತಿ & ದಾಖಲಾತಿಗಾಗಿ ಕ್ಲಿಕ್ ಮಾಡಿ ➔
---Advertisement---

ಗೀತಾ ಶಿವರಾಜ್ ಕುಮಾರ್ ನಾಮಪತ್ರ ಸಲ್ಲಿಕೆ : ಪತ್ನಿ ಪರ ಪ್ರಚಾರದಲ್ಲಿರುವ ಶಿವಣ್ಣರ ಮನವಿ ಏನು..?

---Advertisement---

ಶಿವಮೊಗ್ಗ : ಇಂದು ಗೀತಾ ಶಿವರಾಜ್ ಕುಮಾರ್ ನಾಮಪತ್ರ ಸಲ್ಲಿಕೆ ಮಾಡಿದ್ದು, ಶಿವಣ್ಣ ಸೇರಿದಂತೆ ಹಲವು ನಾಯಕರು ಸಾಥ್ ನೀಡಿದ್ದಾರೆ.

ಶಿವಮೊಗ್ಗದಲ್ಲಿ ಕರುನಾಡ ಚಕ್ರವರ್ತಿ ಶಿವರಾಜ್ ಕುಮಾರ್ ಮಾತನಾಡಿದ್ದು, ನಾನು ನಾಮಪತ್ರ‌ ಸಲ್ಲಿಸಲು ಎರಡನೇ ಬಾರಿ ಬಂದಿದ್ದೆನೆ. ಈ ಹಿಂದೆ ಕೂಡ ಬಂದಿದ್ದೆ. ವಾತಾರಣ ಚೆನ್ನಾಗಿದೆ. ಗೀತಾ ಅವರಿಗೆ ಅಲ್ ದಿ ಬೆಸ್ಟ್ ಹೇಳುತ್ತೆನೆ. ಜನರಿಗೆ ಬದಲಾವಣೆ ಬೇಕು ಎನ್ನಿಸಿದೆ. ನಾವು ಎಲ್ಲಾ ಕಡೆ ಪ್ರಚಾರ ಮಾಡ್ತಾ ಇದ್ದೇವೆ. ಎಲ್ಲಿ ಹೋದರು ನಮಗೆ ಪಾಸಿಟಿವ್ ಕಾಣಿಸುತ್ತಿದೆ.

ನಾನು ಹೋದಲೆಲ್ಲಾ ಹಾಡು, ಡೈಲಾಗ್ ಕೇಳುತ್ತಾರೆ. ಸಿನಿಮಾ ನೋಡುವವರು, ಮತ ಹಾಕುವವರು ಅವರೆ. ಅವರ ಸಂತೋಷಕ್ಕೆ ನಾನು ಹಾಡು ಡೈಲಾಗ್ ಹೇಳುತ್ತೇನೆ. ಅಲ್ಲಿ ಯಾವ ವಯಸ್ಸಿನವರಿಗೆ ಹೇಗೆ ಮಾತನಾಡಬೇಕೂ ಹಾಗೆ ಮಾತನಾಡುತ್ತೇನೆ. ನಾನು ನನ್ನ ಪತ್ನಿ ಗೆ ಒಂದು ಅವಕಾಶ ಕೊಡಿ ಎಂದು ಕೇಳುತ್ತಿದ್ದೇನೆ.

 

ಗೀತಾ ಯಾವಾಗಾಲೂ ಸಾಫ್ಟ್. ರಾಜಕೀಯಕ್ಕೆ ರಫ್ ಆಗಿ ಇರಬಾರದು. ರಾಜಕೀಯಕ್ಕೆ ಸಾಫ್ಟ್ ಆಗಿರಬೇಕು. ಮಾತನಾಡುವ ಬದಲು ಕೆಲಸ ಮಾಡಬೇಕು. ಆ ಮೂಲಕ ನಮ್ಮ ಜವಾಬ್ದಾರಿ ತೋರಿಸಿಕೊಡಬೇಕು. ಮಾತನಾಡಿದರೆ ಸಾಲದು, ಮಾಡುವ ಕೆಲಸ ಜೋರಾಗಿ ಇರಬೇಕು. ಕೆಲಸ ಮಾಡುವ ಮನೋಭಾವ ಇರಬೇಕು.

 

ಕಳೆದ ಒಂದುವರೆ ತಿಂಗಳಿಂದ ನಾನು ಶೂಟಿಂಗ್ ರದ್ದು ಮಾಡಿ ಪ್ರಚಾರ ಮಾಡುತ್ತಿದ್ದೆನೆ. ನನಗೆ ರಾಜಕೀಯ ಗೊತ್ತಿಲ್ಲ. ನಾಯಕರು ಹೇಳಿದಂತೆ, ಅವರು ಕರೆದ ಕಡೆ ಪ್ರಚಾರಕ್ಕೆ ಹೋಗುತ್ತಿದ್ದೇನೆ‌. ಎಲ್ಲಾ ಕಾಂಗ್ರೆಸ್ ನಾಯಕರ ಸಾಥ್ ಚೆನ್ನಾಗಿದೆ. ಪ್ರಚಾರದ ಕಾರ್ಯದ ಅನುಭವ ಚೆನ್ನಾಗಿ ಆಗುತ್ತಿದೆ. ಒಳ್ಳೆಯ ಬದಲಾವಣೆ ಬರಬೇಕಿದೆ. ಬಿಸಿಲಿನಲ್ಲಿ ನನಗೆ ಸೆಕೆ ಅನ್ನಿಸುತ್ತಿಲ್ಲ. ಜನರ ನಡುವೆ ಸೆಕೆ ಅನ್ನಿಸುತ್ತಿಲ್ಲ. ಯಾಕಂದ್ರೆ ಅವರು ಸೆಕೆಯಲ್ಲಿದ್ದಾರೆ. ನಾವು ಕೂಡ ಸೆಕೆಯಲ್ಲಿದ್ದೆವೆ ಎಂದಿದ್ದಾರೆ.

ನಿಮ್ಮೂರಿನ ಸುದ್ದಿ, ಈಗ 'ಸುದ್ದಿ ಒನ್' ನಲ್ಲಿ!

ನಿಮ್ಮ ಊರಿನ ಅದ್ಧೂರಿ ಜಾತ್ರೆ, ವಿಶೇಷ ಆಚರಣೆಗಳು, ಅಥವಾ ನಿಮ್ಮ ಗಮನಕ್ಕೆ ಬಂದ ಸ್ಥಳೀಯ ಸಮಸ್ಯೆಗಳೇ? ಚಿತ್ರದುರ್ಗ ಹಾಗೂ ಸುತ್ತಮುತ್ತಲಿನ ಯಾವುದೇ ಸುದ್ದಿಯಾದರೂ ನಮಗೆ ತಿಳಿಸಿ. ನಿಮ್ಮ ಧ್ವನಿಯಾಗಿ ನಾವು ನಾಡಿಗೆ ತಲುಪಿಸುತ್ತೇವೆ. ಛಾಯಾಚಿತ್ರ ಮತ್ತು ವಿವರಗಳೊಂದಿಗೆ ನಮಗೆ ಇಮೇಲ್ ಮಾಡಿ.

✉️ suddionenews@gmail.com

🛡️ ನಿಮ್ಮ ಮಾಹಿತಿಯನ್ನು ಗೌಪ್ಯವಾಗಿಡಲಾಗುವುದು.

suddionenews

ಕನ್ನಡ ಸುದ್ದಿಗಳ ವಿಶ್ವಾಸಾರ್ಹ ಮೂಲ — suddione.com ನಲ್ಲಿ ಓದಿ ರಾಷ್ಟ್ರೀಯ, ಅಂತರರಾಷ್ಟ್ರೀಯ, ರಾಜಕೀಯ, ಕ್ರೀಡೆ, ಮನರಂಜನೆ, ವಾಣಿಜ್ಯ, ಶಿಕ್ಷಣ ಮತ್ತು ತಂತ್ರಜ್ಞಾನಕ್ಕೆ ಸಂಬಂಧಿಸಿದ ಪ್ರತಿಯೊಂದು ಪ್ರಮುಖ ಅಪ್‌ಡೇಟ್. ನೀವು ಯಾವಾಗಲೂ ಅಪ್‌ಡೇಟ್ ಆಗಿರಲು ನಾವು ವೇಗವಾದ, ನಿಖರವಾದ ಮತ್ತು ನಿಷ್ಪಕ್ಷಪಾತವಾದ ಸುದ್ದಿಗಳನ್ನು ಸರಳ ಹಾಗೂ ಸ್ಪಷ್ಟ ಭಾಷೆಯಲ್ಲಿ ನೀಡುತ್ತೇವೆ. ಸಂಪಾದಕರು: ನಾಗೇಂದ್ರ ರೆಡ್ಡಿ ಪಿ.ಎಲ್

Join WhatsApp

Join Now

Join Telegram

Join Now

Leave a Comment

🏫 ಅಡ್ಮಿಷನ್ ಓಪನ್
🔒

ಇಂಡಿಯನ್ ಇಂಟರ್ ನ್ಯಾಷನಲ್ ಸ್ಕೂಲ್

ಸ್ವಾಗತ...