Warning: Undefined array key "options" in /home/nagendra/public_html/content/plugins/elementor-pro/modules/theme-builder/widgets/site-logo.php on line 124

ಯುವತಿ ಕಾಣೆ

Facebook
Twitter
Telegram
WhatsApp

ಚಿತ್ರದುರ್ಗ, (ನವೆಂಬರ್.20) : ಹೊಳಲ್ಕೆರೆ ತಾಲ್ಲೂಕಿನ ದಾಸಯ್ಯನಹಟ್ಟಿ ಗ್ರಾಮದ ನಿವಾಸಿ ಪವಿತ್ರ ತಂದೆ ರಂಗಪ್ಪ (21) ಎಂಬ ಯುವತಿ ನವೆಂಬರ್ 16ರಂದು ಕಾಣೆಯಾಗಿರುವ ಪ್ರಕರಣ ಚಿತ್ರಹಳ್ಳಿ ಗೇಟ್ ಪೊಲೀಸ್ ಠಾಣೆಯಲ್ಲಿ ದಾಖಲಾಗಿದೆ.

ಕಾಣೆಯಾಗಿರುವ ಯುವತಿ ಚಹರೆ ಇಂತಿದೆ.

ದೃಢವಾದ ಮೈಕಟ್ಟು, ದುಂಡುಮುಖ, ಗೋಧಿ ಮೈಬಣ್ಣ, ಸುಮಾರು 5.1 ಅಡಿ ಎತ್ತರ ಇರುತ್ತಾಳೆ. ಕನ್ನಡ ಮತ್ತು ತೆಲಗು ಭಾಷೆ ಮಾತನಾಡುತ್ತಾರೆ. ಮನೆಯಿಂದ ಹೋಗುವಾಗ ನೀಲಿ ಮತ್ತು ಕೆಂಪು ಬಣ್ಣ ಮಿಶ್ರಿತ ಚೂಡಿದಾರ ಧರಿಸಿರುತ್ತಾರೆ.

ಈ ಮೇಲ್ಕಂಡ ಚಹರೆಯುಳ್ಳ ಯುವತಿ ಬಗ್ಗೆ ಮಾಹಿತಿ ದೊರೆತ ಕೂಡಲೇ ಚಿತ್ರಹಳ್ಳಿ ಗೇಟ್ ಪೊಲೀಸ್ ಠಾಣೆಗೆ ಸಂಪರ್ಕಿಸಬೇಕು ಎಂದು ಚಿತ್ರಹಳ್ಳಿ ಗೇಟ್ ಪೊಲೀಸ್ ಠಾಣೆಯ ಅಸಿಸ್ಟೆಂಟ್ ಪೊಲೀಸ್ ಸಬ್ ಇನ್ಸ್‍ಪೆಕ್ಟರ್ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

ಹೊಳಲ್ಕೆರೆ ತಾಲ್ಲೂಕು ಕಾಶೀಪುರದ ಸಿಂಧು, ಗೋಕುಲ್ ಹಾಗೂ ಯಶಿಕಾ ಎಂಬುವರು ಅಕ್ಟೋಬರ್ 15ರಂದು ಕಾಣೆಯಾಗಿರುವ ಪ್ರಕರಣ ಚಿತ್ರಹಳ್ಳಿ ಗೇಟ್ ಪೊಲೀಸ್ ಠಾಣೆಯಲ್ಲಿ ದಾಖಲಾಗಿದೆ.
ಕಾಣಯಾದವರ ಚಹರೆ ಇಂತಿದೆ. ಸಿಂಧು: ದೃಢವಾದ ಮೈಕಟ್ಟು, ಎಣ್ಣೆಗೆಂಪು ಬಣ್ಣ, ಸುಮಾರು 5 ಅಡಿ ಎತ್ತರ, ಕನ್ನಡ ಮಾತನಾಡುತ್ತಾರೆ. ಹಸಿರು ಡಿಸ್ಪಂಬರ್ ಬಣ್ಣದ ಚೂಡಿದಾರ್ ಧರಿಸಿರುತ್ತಾರೆ.

ಗೋಕುಲ್: ಸಾಧಾರಣ ಮೈಕಟ್ಟು, ಎಣ್ಣೆಗೆಂಪು ಬಣ್ಣ, ಸುಮಾರು 2 1/2 ಅಡಿ ಎತ್ತರ, ಕನ್ನಡ ಮಾತನಾಡುತ್ತಾರೆ. ನೀಲಿ ಜೀನ್ಸ್ ಪ್ಯಾಂಟ್, ಬ್ಲೂ ಮತ್ತು ವೈಟ್ ಮಿಕ್ಸ್ ಶರ್ಟ್ ಧರಿಸಿರುತ್ತಾನೆ.
ಯಶಿಕಾ: ಸಾಧಾರಣ ಮೈಕಟ್ಟು, ಎಣ್ಣೆಗೆಂಪು ಬಣ್ಣ, ಸುಮಾರು 1 1/3 ಅಡಿ, ಪಿಂಕ್ ಕಲರ್ ಪ್ರಕ್ ಧರಿಸಿರುತ್ತಾಳೆ. ಈ ಮೇಲ್ಕಂಡ ಚಹರೆಯುಳ್ಳ ಮಹಿಳೆ ಮತ್ತು ಮಕ್ಕಳ ಬಗ್ಗೆ ಮಾಹಿತಿ ದೊರೆತ ಕೂಡಲೇ ಚಿತ್ರಹಳ್ಳಿ ಗೇಟ್ ಪೊಲೀಸ್ ಠಾಣೆಗೆ ಸಂಪರ್ಕಿಸಬೇಕು ಎಂದು ಚಿತ್ರಹಳ್ಳಿ ಗೇಟ್ ಪೊಲೀಸ್ ಠಾಣೆಯ ಪೊಲೀಸ್ ಸಬ್ ಇನ್ಸ್‍ಪೆಕ್ಟರ್ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

Facebook
Twitter
Telegram
WhatsApp
suddionenews

suddionenews

Leave a Comment

Top Stories

ಈ ರಾಶಿಯವರು ಕೆಲಸದಲ್ಲಿ ಎಷ್ಟೇ ಶ್ರದ್ಧೆಯಿಂದ ದುಡಿದರೂ ಅಪವಾದ, ನಿಂದನೆ, ಆರ್ಥಿಕ ನಷ್ಟ ತಪ್ಪಿದ್ದಲ್ಲ

ಈ ರಾಶಿಯವರು ಕೆಲಸದಲ್ಲಿ ಎಷ್ಟೇ ಶ್ರದ್ಧೆಯಿಂದ ದುಡಿದರೂ ಅಪವಾದ, ನಿಂದನೆ, ಆರ್ಥಿಕ ನಷ್ಟ ತಪ್ಪಿದ್ದಲ್ಲ. ಶುಕ್ರವಾರ- ರಾಶಿ ಭವಿಷ್ಯ ಮೇ-17,2024 ಸೂರ್ಯೋದಯ: 05:47, ಸೂರ್ಯಾಸ್ತ : 06:37 ಶಾಲಿವಾಹನ ಶಕೆ1945, ಶ್ರೀ ಕ್ರೋಧಿ ನಾಮ

ಚಿತ್ರದುರ್ಗದಲ್ಲಿ ಐವರ ಅಸ್ಥಿಪಂಜರ ಪ್ರಕರಣ | ಕೊನೆಗೂ ಸಿಕ್ತು ಸಾವಿನ ಸುಳಿವು: ಎಸ್.ಪಿ. ಮಾಹಿತಿ…!

ಸುದ್ದಿಒನ್, ಚಿತ್ರದುರ್ಗ, ಮೇ. 16 : 2023ರ ಡಿಸೆಂಬರ್ ನಲ್ಲಿ ಇಡೀ ರಾಜ್ಯವನ್ನೇ ಬೆಚ್ಚಿಬೀಳಿಸಿದ್ದ ಪ್ರಕರಣ ಅದು. ನಗರದ ಬೆಂಗಳೂರು ರಸ್ತೆಯಲ್ಲಿರುವ ಪಾಳು ಬಿದ್ದ ಮನೆಯಲ್ಲಿ ಐವರ ಮೃತದೇಹ ಪತ್ತೆಯಾಗಿತ್ತು. ಅದು ಅವರೆಲ್ಲಾ ಸಾವನ್ನಪ್ಪಿ

ನೈರುತ್ಯ ಪದವೀಧರ ಚುನಾವಣೆ : ಬಿಜೆಪಿ ವಿರುದ್ಧ ರಘುಪತಿ ಭಟ್ ಬಂಡಾಯ, ಪಕ್ಷೇತರ ಸ್ಪರ್ಧೆ

ಮೈಸೂರು: ವಿಧಾನಸಭಾ ಚುನಾವಣೆ, ಲೋಕಸಭಾ ಚುನಾವಣೆಯಲ್ಲಿ ಬಿಜೆಪಿ ಹಳಬರಿಗೆ, ಒಂದಷ್ಡು ವಿವಾದಗಳಿದ್ದವರಿಗೆ ಟಿಕೆಟ್ ನಿರಾಕರಣೆ ಮಾಡಿತ್ತು. ಹೊಸ ಮುಖಗಳಿಗೆ ಮಣೆ ಹಾಕಲು ಹೋಗಿ, ಹಿರಿಯ ತಲೆಗಳು ಬಂಡಾಯವೆದ್ದಿದ್ದರು. ಈ ಬಾರಿಯ ಲೋಕಸಭಾ ಚುನಾವಣೆಯಲ್ಲಿ ಟಿಕೆಟ್

error: Content is protected !!