Kannada news ಚಿತ್ರದುರ್ಗ ದಾವಣಗೆರೆ ಬೆಂಗಳೂರು ರಾಜಕೀಯ ಚುನಾವಣೆ ಮಳೆ ಕ್ರಿಕೆಟ್ ಭಾರತ ಚಿನ್ನ ಬೆಳ್ಳಿ ಹವಾಮಾನ ಕ್ರಿಕೆಟ್  ಕನ್ನಡ ನ್ಯೂಸ್

ಸಿ.ಪುಟ್ಟರಂಗಶೆಟ್ಟಿಗೆ ಸಚಿವ ಸ್ಥಾನ ನೀಡಿ : ಆರ್.ಮೂರ್ತಿ ಒತ್ತಾಯ

---Advertisement---

 

 

ವರದಿ ಮತ್ತು ಫೋಟೋ ಕೃಪೆ
ಕೆ.ಎಂ.ಮುತ್ತುಸ್ವಾಮಿ ಕಣ್ಣನ್,
ಮೊ : 78998 64552

ಸುದ್ದಿಒನ್, ಚಿತ್ರದುರ್ಗ, ಮೇ. 31 : ಉಪ್ಪಾರ ಸಮಾಜದ ಸಿ.ಪುಟ್ಟರಂಗಶೆಟ್ಟಿಗೆ ನೂತನ ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್‍ರವರ ಸಚಿವ ಸಂಪುಟದಲ್ಲಿ ಮಂತ್ರಿ ಸ್ಥಾನ ನೀಡಬೇಕೆಂದು ಉಪ್ಪಾರ ಸಮಾಜದ ಜಿಲ್ಲಾಧ್ಯಕ್ಷ ಆರ್.ಮೂರ್ತಿ ಒತ್ತಾಯಿಸಿದ್ದಾರೆ.

ಚಾಮರಾಜನಗರದಿಂದ ನಾಲ್ಕನೆ ಬಾರಿಗೆ ಸಿ.ಪುಟ್ಟರಂಗಶೆಟ್ಟಿ ಉಪ್ಪಾರ ಸಮಾಜದಿಂದ ಏಕೈಕ ಶಾಸಕರಾಗಿದ್ದು, ನೂತನ ಸಚಿವ ಸಂಪುಟದಲ್ಲಿ ಮಂತ್ರಿ ಸ್ಥಾನ ನೀಡುವ ಮೂಲಕ ನಮ್ಮ ಜನಾಂಗಕ್ಕೆ ಸಾಮಾಜಿಕ ನ್ಯಾಯ ನೀಡಬೇಕೆಂದು ನೂತನ ಮುಖ್ಯಮಂತ್ರಿಯಾಗಿ ಪ್ರಮಾಣ ವಚನ ಸ್ವೀಕರಿಸಲಿರುವ ಡಿ.ಕೆ.ಶಿವಕುಮಾರ್‍ರವರಲ್ಲಿ ಮನವಿ ಮಾಡಿರುವ ಆರ್.ಮೂರ್ತಿ ಹಿಂದಿನಿಂದಲೂ ನಮ್ಮ ಸಮಾಜ ಕಾಂಗ್ರೆಸ್ ಪಕ್ಷವನ್ನು ಬೆಂಬಲಿಸಿಕೊಂಡು ಬರುತ್ತಿದೆ. ರಾಜ್ಯದಲ್ಲಿ ನಲವತ್ತೈದು ಲಕ್ಷಕ್ಕಿಂತ ಹೆಚ್ಚಿನ ಸಂಖ್ಯೆಯಲ್ಲಿರುವ ಉಪ್ಪಾರ ಸಮಾಜ ಮುಂಬರುವ ಎಲ್ಲಾ ಚುನಾವಣೆಗಳಲ್ಲಿಯೂ ಪಕ್ಷಕ್ಕೆ ಮತ ನೀಡಬೇಕಾದರೆ ಸಿ.ಪುಟ್ಟರಂಗಶೆಟ್ಟಿರವರಿಗೆ ಸಚಿವ ಸ್ಥಾನ ಸಿಗಲೇಬೇಕೆಂದು ಆಗ್ರಹಿಸಿದ್ದಾರೆ.

suddionenews

ಕನ್ನಡ ಸುದ್ದಿಗಳ ವಿಶ್ವಾಸಾರ್ಹ ಮೂಲ — suddione.com ನಲ್ಲಿ ಓದಿ ರಾಷ್ಟ್ರೀಯ, ಅಂತರರಾಷ್ಟ್ರೀಯ, ರಾಜಕೀಯ, ಕ್ರೀಡೆ, ಮನರಂಜನೆ, ವಾಣಿಜ್ಯ, ಶಿಕ್ಷಣ ಮತ್ತು ತಂತ್ರಜ್ಞಾನಕ್ಕೆ ಸಂಬಂಧಿಸಿದ ಪ್ರತಿಯೊಂದು ಪ್ರಮುಖ ಅಪ್‌ಡೇಟ್. ನೀವು ಯಾವಾಗಲೂ ಅಪ್‌ಡೇಟ್ ಆಗಿರಲು ನಾವು ವೇಗವಾದ, ನಿಖರವಾದ ಮತ್ತು ನಿಷ್ಪಕ್ಷಪಾತವಾದ ಸುದ್ದಿಗಳನ್ನು ಸರಳ ಹಾಗೂ ಸ್ಪಷ್ಟ ಭಾಷೆಯಲ್ಲಿ ನೀಡುತ್ತೇವೆ. ಸಂಪಾದಕರು: ನಾಗೇಂದ್ರ ರೆಡ್ಡಿ ಪಿ.ಎಲ್

Join WhatsApp

Join Now

Join Telegram

Join Now