Kannada news ಚಿತ್ರದುರ್ಗ ದಾವಣಗೆರೆ ಬೆಂಗಳೂರು ರಾಜಕೀಯ ಚುನಾವಣೆ ಮಳೆ ಕ್ರಿಕೆಟ್ ಭಾರತ ಚಿನ್ನ ಬೆಳ್ಳಿ ಹವಾಮಾನ ಕ್ರಿಕೆಟ್  ಕನ್ನಡ ನ್ಯೂಸ್

ಕನ್ನಡ ಭಾಷೆಗೆ ಮೊದಲ ಪ್ರಾಶಸ್ತ್ಯ ನೀಡಿ : ಲೇಖಕ ಯೋಗೀಶ್ ಸಹ್ಯಾದ್ರಿ

---Advertisement---

 

ಸುದ್ದಿಒನ್, ಚಿತ್ರದುರ್ಗ, ನ. 23 : ಕನ್ನಡಿಗರು ಎಷ್ಟೇ ಭಾಷೆಗಳನ್ನು ಕಲಿತರೂ ಕನ್ನಡಕ್ಕೆ ಮೊದಲ ಪ್ರಾಶಸ್ತ್ಯ ನೀಡಬೇಕು. ಭಾರತದ ನೆಲದಲ್ಲಿ ಕನ್ನಡ ಭಾಷೆಗೆ ತನ್ನದೇ ಆದ ವಿಶಿಷ್ಟ ಸ್ಥಾನಮಾನವಿದೆ ಎಂದು ಲೇಖಕ ಹಾಗೂ ಜಿಲ್ಲಾ ಮಕ್ಕಳ ಸಾಹಿತ್ಯ ಪರಿಷತ್ ಅಧ್ಯಕ್ಷ ಯೋಗೀಶ್ ಸಹ್ಯಾದ್ರಿ ಅಭಿಪ್ರಾಯಪಟ್ಟರು.

ನಗರದ ತುರುವನೂರು ರಸ್ತೆಯಲ್ಲಿರುವ ಕೆ.ಕೆ. ನ್ಯಾಷನಲ್ ಆಂಗ್ಲ ಹಿರಿಯ ಹಾಗೂ ಪ್ರೌಢಶಾಲೆ ಚಿತ್ರದುರ್ಗ ಇಲ್ಲಿ ಹಮ್ಮಿಕೊಳ್ಳಲಾಗಿದ್ದ ಕನ್ನಡ ರಾಜ್ಯೋತ್ಸವ ಮತ್ತು ದಿ:9/11/24 ರಂದು ನಡೆದ ಪ್ರಬಂಧ ಸ್ಪರ್ಧೆಯ ವಿಜೇತರಿಗೆ ಬಹುಮಾನ ವಿತರಣೆ ಕಾರ್ಯಕ್ರಮದಲ್ಲಿ ಮುಖ್ಯ ಅತಿಥಿಯಾಗಿ ಭಾಗವಹಿಸಿ ಮಾತನಾಡಿದ ಲೇಖಕ ಯೋಗೀಶ್ ಸಹ್ಯಾದ್ರಿ ಅವರು, ಕನ್ನಡಿಗರಿಗೆ ಕನ್ನಡ ಭಾಷೆಯೆ ಸ್ವರ್ಗ ಹಾಗೂ ಹಬ್ಬವಿದ್ದಂತೆ. ಆದರೆ ಕನ್ನಡ ಮಾತೃಭಾಷೆಯು ಉದ್ಯೋಗದ ಭಾಷೆಯಾಗುವಂತೆಯೂ ಸರ್ಕಾರ ಮತ್ತು ಸಾಹಿತಿಗಳು, ಕನ್ನಡ ಪ್ರೇಮಿಗಳು ಕಾರ್ಯಗತರಾಗಬೇಕು ಎಂದು ಅಭಿಪ್ರಾಯಪಟ್ಟರು.

ಕನ್ನಡದ ಮಕ್ಕಳ ಪ್ರೇಮವನ್ನು ಮಾತಿನಲ್ಲಿ ಬಣ್ಣಿಸಲಾಗದು ಎಂದು ಹೇಳುತ್ತಾ, ಕನ್ನಡ ಭಾಷೆಯ ಇತಿಹಾಸ, ಪ್ರಾಮುಖ್ಯತೆ, ಕವಿಗಳು, ಕವಿವಾಣಿಗಳು, ಬಸವಣ್ಣ, ಕನಕದಾಸರು ಮೊದಲಾದ ಕವಿ ಶ್ರೇಷ್ಠರನ್ನು ನೆನಪಿಸಿಕೊಂಡರು. ನಾವು ವ್ಯವಹರಿಸಲು ಮತ್ತು ಬದುಕಲು ಎಷ್ಟೇ ಭಾಷೆಗಳನ್ನು ಕಲಿಯಬಹುದು. ಆದರೆ ಕನ್ನಡಿಗನಾಗಿರುವುದಕ್ಕೆ ಹೆಮ್ಮೆ ಪಡಬೇಕು ಎಂದು ಮಕ್ಕಳಿಗೆ, ಪೋಷಕರಿಗೆ, ಶಿಕ್ಷಕರಿಗೆ ತಿಳಿಸಿದರು.

ಕಾರ್ಯಕ್ರಮ ಉದ್ಘಾಟಿಸಿ ಮಾತನಾಡಿದ ಡಾ|| ಹೆಚ್. ಆರ್. ಮಂಜುನಾಥ್ ರವರು ಎಷ್ಟೇ ದೇಶ ವಿದೇಶ ಸುತ್ತಿದರೂ ಭಾರತೀಯನಾಗಿ, ಕನ್ನಡಿಗನಾಗಿ ಹೆಮ್ಮೆ ಇದೆ, ಮಕ್ಕಳ ಪ್ರತಿಭೆಯನ್ನು ಗುರುತಿಸುವುದಕ್ಕೆ ಇದು ಒಂದು ವೇದಿಕೆ ಎಂದರು. ಆಡಳಿತ ಅಧಿಕಾರಿ ಶ್ರೀಯುತ ಕಾರ್ತಿಕ್ ರವರು ಪ್ರಬಂಧ ಸ್ಪರ್ಧೆಯ ರೂಪು-ರೇಷೆಗಳನ್ನು ವಿವರಿಸಿ ವಿಜೇತರಾದವರನ್ನು ಘೋಷಿಸಿದರು. ಶ್ರೀಮತಿ ಸುಶೀಲಾ ಕಾರ್ಯಕ್ರಮ ನಿರೂಪಿಸಿದರು, ಪ್ರಾರ್ಥನೆ ಶ್ರೀಮತಿ ಲಾವಣ್ಯ ಅವರದು, ಸ್ವಾಗತವನ್ನು ಶ್ರೀಮತಿ ರೂಪಿಣಿ ನೆರವೇರಿಸಿದರು. ವಂದನಾರ್ಪಣೆಯನ್ನು ಶ್ರೀಮತಿ ವಿಜಯಲಕ್ಷ್ಮಿ ನೆರವೇರಿಸಿದರು. ಕಾರ್ಯಕ್ರಮದಲ್ಲಿ ಪ್ರೌಢಶಾಲಾ ಮುಖ್ಯೋಪಾಧ್ಯಾಯರಾದ ಶ್ರೀಯುತ ಮಹೇಶ್ವರಪ್ಪ ಹಾಗೂ ಕಿರಿಯ ಪ್ರಾಥಮಿಕ ಶಾಲಾ ಮುಖ್ಯೋಪಾಧ್ಯಾಯಿನಿ ಶ್ರೀಮತಿ ಸಂಧ್ಯಾ ರವರು, ಹಿರಿಯ ಶಿಕ್ಷಕಿ ಸಿ.ಬಿ ನಿರ್ಮಲಾ ರವರು ಉಪಸ್ಥಿತರಿದ್ದರು, ಮಕ್ಕಳಿಂದ ಸಾಂಸ್ಕೃತಿಕ ಕಾರ್ಯಕ್ರಮಗಳು ಜರುಗಿದವು.

ಮೊದಲ ಬಹುಮಾನ – ಆಧ್ಯಾ (ತರಳಬಾಳು)
ಎರಡನೆಯ ಬಹುಮಾನ-ಜಯಶ್ರೀ (ಸಂತ ಜೋಸೆಫರ ಶಾಲೆ)
ತೃತೀಯ ಬಹುಮಾನ – ಬೇಬಿ.ಆರ್ ( ಕೆ.ಕೆ.ನ್ಯಾಷನಲ್ ಆಂಗ್ಲ ಹಿರಿಯ ಹಾಗೂ ಪ್ರೌಢಶಾಲೆ) ಹಾಗೂ
ಆಧ್ಯಾ ಕೌಸರ್ ( ಸಂತ ಜೋಸೆಫರ ಶಾಲೆ)
ಇವರಿಗೆ ಪ್ರಶಸ್ತಿ ಪತ್ರ ಹಾಗೂ ನಗದು ಬಹುಮಾನ ನೀಡಿ ಗೌರವಿಸಲಾಯಿತು.

ಸಾರ್ವಜನಿಕ ಕುಂದುಕೊರತೆ ವಿಭಾಗ : ನಿಮ್ಮ ಧ್ವನಿ - ನಮ್ಮ ವೇದಿಕೆ

ನಿಮ್ಮ ಊರಿನ ಸಮಸ್ಯೆಗಳು ಇನ್ನು ಮುಂದೆ ಕೇವಲ ಚರ್ಚೆಯಾಗಬಾರದು, ಅವುಗಳಿಗೆ ಪರಿಹಾರ ಸಿಗಬೇಕು.

ವರದಿ ಮಾಡುವುದು ಹೇಗೆ?

  • ನಿಮ್ಮ ಸುತ್ತಮುತ್ತಲಿನ ರಸ್ತೆ, ನೀರು, ವಿದ್ಯುತ್ ಸಮಸ್ಯೆಗಳ ಫೋಟೋ, ವಿಡಿಯೋ ಅಥವಾ ಮಾಹಿತಿ ನಮಗೆ ಕಳುಹಿಸಿ.
ವಾಟ್ಸಪ್ ಮಾಡಿ: 90369 74702

ನಾವು ಏನು ಮಾಡುತ್ತೇವೆ?

  • ನೀವು ಕಳುಹಿಸಿದ ವರದಿಗಳನ್ನು suddione.com ನಲ್ಲಿ ಪ್ರಕಟಿಸುತ್ತೇವೆ.
  • ಸಂಬಂಧಪಟ್ಟ ಇಲಾಖೆಯ ಅಧಿಕಾರಿಗಳ ಗಮನಕ್ಕೆ ತಂದು ಪರಿಹಾರಕ್ಕಾಗಿ ಒತ್ತಾಯಿಸುತ್ತೇವೆ.
  • ನಿಮ್ಮೂರಿನ ಅಭಿವೃದ್ಧಿಗೆ ನಿಮ್ಮೊಂದಿಗೆ ಧ್ವನಿಗೂಡಿಸುತ್ತೇವೆ.

suddionenews

ಕನ್ನಡ ಸುದ್ದಿಗಳ ವಿಶ್ವಾಸಾರ್ಹ ಮೂಲ — suddione.com ನಲ್ಲಿ ಓದಿ ರಾಷ್ಟ್ರೀಯ, ಅಂತರರಾಷ್ಟ್ರೀಯ, ರಾಜಕೀಯ, ಕ್ರೀಡೆ, ಮನರಂಜನೆ, ವಾಣಿಜ್ಯ, ಶಿಕ್ಷಣ ಮತ್ತು ತಂತ್ರಜ್ಞಾನಕ್ಕೆ ಸಂಬಂಧಿಸಿದ ಪ್ರತಿಯೊಂದು ಪ್ರಮುಖ ಅಪ್‌ಡೇಟ್. ನೀವು ಯಾವಾಗಲೂ ಅಪ್‌ಡೇಟ್ ಆಗಿರಲು ನಾವು ವೇಗವಾದ, ನಿಖರವಾದ ಮತ್ತು ನಿಷ್ಪಕ್ಷಪಾತವಾದ ಸುದ್ದಿಗಳನ್ನು ಸರಳ ಹಾಗೂ ಸ್ಪಷ್ಟ ಭಾಷೆಯಲ್ಲಿ ನೀಡುತ್ತೇವೆ. ಸಂಪಾದಕರು: ನಾಗೇಂದ್ರ ರೆಡ್ಡಿ ಪಿ.ಎಲ್

Join WhatsApp

Join Now

Join Telegram

Join Now

Leave a Comment