Kannada news ಚಿತ್ರದುರ್ಗ ದಾವಣಗೆರೆ ಬೆಂಗಳೂರು ರಾಜಕೀಯ ಚುನಾವಣೆ ಮಳೆ ಕ್ರಿಕೆಟ್ ಭಾರತ ಚಿನ್ನ ಬೆಳ್ಳಿ ಹವಾಮಾನ ಕ್ರಿಕೆಟ್  ಕನ್ನಡ ನ್ಯೂಸ್

ಹೊಸಬರಿಗೆ ಸಚಿವ ಸ್ಥಾನ ಕೊಡಲಿ.. ನಂಗೇನು ಬೇಡ : ಶಾಸಕ ರವಿ ಗಾಣಿಗ

---Advertisement---

ಮಂಡ್ಯ: ರಾಜ್ಯದಲ್ಲಿ ಬೈ ಎಲೆಕ್ಷನ್ ಪ್ರಕ್ರಿಯೆ ಕೂಡ ಮುಗಿದಿದೆ. ಇದೀಗ ಸಚಿವ ಸಂಪುಟ ಪುನರ್ ರಚನೆಯ ಸುದ್ದಿ ಸದ್ದು ಮಾಡ್ತಾ ಇದೆ. ಹೊಸ ಶಾಸಕರಿಗೂ ಸಚಿವ ಸ್ಥಾನ ಕೊಡಬೇಕು ಅನ್ನೋ ಬೇಡಿಕೆ ಇದೆ. ಆ ಸಂಬಂಧ ಈಗಾಗಲೇ ಪತ್ರ ಕೂಡ ಬರೆದಿದ್ದಾರೆ. ಇದೇ ವಿಚಾರದ ಬಗ್ಗೆ ಶಾಸಕ ರವಿ ಗಾಣಿಗ ಮಾತನ್ನಾಡಿದ್ದಾರೆ. ಹಲವು ಶಾಸಕರು ಮಂತ್ರಿಯಾಗುವ ಆಸೆ ಹೊಂದಿದ್ದಾರೆ. ಅದಕ್ಕಾಗಿಯೇ ಮೂರ್ನಾಲ್ಕು ಬಾರಿ ಗೆದ್ದಿರುವ ಹಿರಿಯ ಶಾಸಕರು ಕೂಡ ಮಂತ್ರಿಗಿರಿಗಾಗಿ ದೆಹಲಿಗೆ ತೆರಳಿದ್ದಾರೆ ಎಂದಿದ್ದಾರೆ.

ಅವರೆಲ್ಲರಿಗೂ ಮಂತ್ರಿಗಿರಿ ಸಿಕ್ಕಿ ರಾಜ್ಯಕ್ಕೆ ಸೇವೆ ಸಲ್ಲಿಸಲಿ. ಈ ಸಂಬಂಧ ನಾವೂ ಕೂಡ ಪತ್ರ ಬರೆದಿದ್ದೇವೆ. ಐದು ಜನ ಶಾಸಕರಿಗೆ ಮಂತ್ರಿಗಿರಿ ನೀಡಿ ಎಂದು ಕೇಳಿಕೊಂಡಿದ್ದೇವೆ. ಹೊಸದಾಗಿ ಶಾಸಕರಾದವರಿಗೆ ಮಂತ್ರಿಗಿರಿ ನೀಡಬೇಕೆಂಬ ನಮ್ಮ ನಿರ್ಧಾರದಲ್ಲಿ ಯಾವುದೇ ಬದಲಾವಣೆಗಳು ಇಲ್ಲ.

ವೈಯಕ್ತಿಕವಾಗಿ ನನಗೆ ಯಾವುದೇ ಸಚಿವ ಸ್ಥಾನ ಬೇಡ. ಹಾಲಿ ಇರುವ ಕೆಲವು ಸಚಿವರು ಸಮರ್ಥವಾಗಿ ಕಾರ್ಯ ನಿರ್ವಹಿಸದೆ ಇರುವುದು, ಜನರಿಗೆ ಲಭ್ಯವಿಲ್ಲದೆ ಇರುವುದು ಆಗ್ತಾ ಇದೆ. ಇದು ಕೆಲಸಗಳಿಗೆ ಅಡ್ಡಿಯಾಗುತ್ತೆ. ಅಂತಹ ಸಚಿವರನ್ನ ಬದಲಾಯಿಸಿ, ಹೊಸಬರಿಗೆ ಅವಕಾಶ ನೀಡುವುದು ಬಹಳ ಉತ್ತಮ. ಹೀಗಿದ್ದರೂ ಈ ರೀತಿಯ ನಿರ್ಧಾರ ಮುಖ್ಯಮಂತ್ರಿಗಳು ಹಾಗೂ ಹೈಕಮಾಂಡ್ ಗೆ ಬಿಟ್ಟ ನಿರ್ಧಾರವಾಗಿದೆ ಎಂದು ಮಂಡ್ಯದಲ್ಲಿ ತಿಳಿಸಿದ್ದಾರೆ. ರಾಜ್ಯದಲ್ಲಿ ಮತ್ತೆ ಸಿಎಂ ಕುರ್ಚಿ ಬದಲಾವಣೆ ಹಾಗೂ ಸಚಿವ ಸಂಪುಟ ಪುನರ್ ರಚನೆಯ ವಿಚಾರ ಸಾಕಷ್ಟು ಚರ್ಚಿತ ವಿಚಾರವಾಗಿದೆ. ಒಂದು ವರ್ಷ ಕಳೆದರೆ 2028 ರ ಚುನಾವಣೆಗೆ ಸಿದ್ಧತೆಗಳು ಶುರುವಾಗುತ್ತವೆ.

suddionenews

ಕನ್ನಡ ಸುದ್ದಿಗಳ ವಿಶ್ವಾಸಾರ್ಹ ಮೂಲ — suddione.com ನಲ್ಲಿ ಓದಿ ರಾಷ್ಟ್ರೀಯ, ಅಂತರರಾಷ್ಟ್ರೀಯ, ರಾಜಕೀಯ, ಕ್ರೀಡೆ, ಮನರಂಜನೆ, ವಾಣಿಜ್ಯ, ಶಿಕ್ಷಣ ಮತ್ತು ತಂತ್ರಜ್ಞಾನಕ್ಕೆ ಸಂಬಂಧಿಸಿದ ಪ್ರತಿಯೊಂದು ಪ್ರಮುಖ ಅಪ್‌ಡೇಟ್. ನೀವು ಯಾವಾಗಲೂ ಅಪ್‌ಡೇಟ್ ಆಗಿರಲು ನಾವು ವೇಗವಾದ, ನಿಖರವಾದ ಮತ್ತು ನಿಷ್ಪಕ್ಷಪಾತವಾದ ಸುದ್ದಿಗಳನ್ನು ಸರಳ ಹಾಗೂ ಸ್ಪಷ್ಟ ಭಾಷೆಯಲ್ಲಿ ನೀಡುತ್ತೇವೆ. ಸಂಪಾದಕರು: ನಾಗೇಂದ್ರ ರೆಡ್ಡಿ ಪಿ.ಎಲ್

Join WhatsApp

Join Now

Join Telegram

Join Now
🏫 ಅಡ್ಮಿಷನ್ ಓಪನ್
🔒

ಇಂಡಿಯನ್ ಇಂಟರ್ ನ್ಯಾಷನಲ್ ಸ್ಕೂಲ್

ಸ್ವಾಗತ...