Warning: Undefined array key "options" in /home/nagendra/public_html/content/plugins/elementor-pro/modules/theme-builder/widgets/site-logo.php on line 124

ಮಾದಿಗ ಜನಾಂಗದ ಇಬ್ಬರಿಗೆ ಸಚಿವ ಸ್ಥಾನ ನೀಡಿ : ಬಸವಮೂರ್ತಿ ಮಾದಾರ ಚನ್ನಯ್ಯ ಸ್ವಾಮೀಜಿ

Facebook
Twitter
Telegram
WhatsApp

 

ವರದಿ ಮತ್ತು ಫೋಟೋ ಕೃಪೆ
ಸುರೇಶ್ ಪಟ್ಟಣ್,
ಮೊ : 87220 22817

ಚಿತ್ರದುರ್ಗ, (ಮೇ.16) :  ರಾಜ್ಯದಲ್ಲಿ ಅಧಿಕಾರಕ್ಕೆ ಬಂದಿರುವ ಕಾಂಗ್ರೆಸ್ ಸರ್ಕಾರದಲ್ಲಿ ಮಾದಿಗ ಜನಾಂಗದ ಇಬ್ಬರನ್ನು ಮಂತ್ರಿಗಳನ್ನಾಗಿ ಮಾಡುವಂತೆ ಕೆಪಿಸಿಸಿ ಮತ್ತು ಎಐಸಿಸಿ ಅಧ್ಯಕ್ಷರನ್ನು ಮಾದಾರ ಚನ್ನಯ್ಯ ಗುರುಪೀಠದ ಶ್ರೀ ಬಸವಮೂರ್ತಿ ಮಾದಾರ ಚನ್ನಯ್ಯ ಶ್ರೀಗಳು ಒತ್ತಾಯಿಸಿದ್ದಾರೆ.

ನಗರದ ಹೊರವಲಯದ ಮಾದಾರ ಗುರುಪೀಠದಲ್ಲಿ ಮಂಗಳವಾರ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಶ್ರೀಗಳು, ರಾಜ್ಯದಲ್ಲಿ ಕಾಂಗ್ರೆಸ್ ಪಕ್ಷ ಇಷ್ಟೂಂದು ಸ್ಥಾನಗಳನ್ನು ಪಡೆಯುವಲ್ಲಿ ಮಾದಿಗ ಜನಾಂಗದ ಬೆಂಬಲವೂ ಕಾರಣವಾಗಿದೆ. ನಮ್ಮ ಜನಾಂಗದಲ್ಲಿ ಹಿರಿಯ ನಾಯಕರಾದ ಮುನಿಯಪ್ಪರವರು ಉಪ ಮುಖ್ಯಮಂತ್ರಿಯನ್ನಾಗಿ ಮಾಡಬೇಕು ಅದೇ ರೀತಿ ಮತ್ತೋರ್ವ ಶಾಸಕರಾದ ತಿಮ್ಮಾಪುರರವರನ್ನು ಸಚಿವರನ್ನಾಗಿ ಮಾಡುವಂತೆ ಒತ್ತಾಯಿಸಿದ್ದು, ಸಾಮಾಜಿಕ ನ್ಯಾಯದ ಅನುಗುಣವಾಗಿ ಈ ಇಬ್ಬರಿಗೂ ಸಚಿವ ಸ್ಥಾನವನ್ನು ನೀಡಿದರೆ ದಕ್ಷಿಣ ಮತ್ತು ಉತ್ತರಕ್ಕೆ ನ್ಯಾಯ ಸಿಕ್ಕಂತೆ ಆಗುತ್ತದೆ ಎಂದರು.

ಈ ಇಬ್ಬರಿಗೂ ಸಚಿವ ಸ್ಥಾನವನ್ನು ನೀಡುವುದರ ಜೊತೆಗೆ ಪ್ರಮುಖವಾದ ಖಾತೆಗಳನ್ನು ನೀಡಬೇಕಿದೆ. ಈ ಇಬ್ಬರಿಗೆ ಸಚಿವ ಸ್ಥಾನ ನೀಡಿದರೆ ಮಾದಿಗ ಜನಾಂಗಕ್ಕೆ ನ್ಯಾಯ ಸಿಕ್ಕಂತೆ ಆಗುತ್ತದೆ. ಇದರ ಬಗ್ಗೆ ಎಐಸಿಸಿ ಮತ್ತು ಕೆಪಿಸಿಸಿ ಅಲೋಚನೆಯನ್ನು ಮಾಡಬೇಕಿದೆ ಇದರ ಬಗ್ಗೆ ಜನಾಂಗದವತಿಯಿಂದ ಮನವಿಯನ್ನು ಸಲ್ಲಿಸಲಾಗುವುದು ಎಂದು ಶ್ರೀಗಳು ತಿಳಿಸಿದರು.

ಗೋಷ್ಟಿಯಲ್ಲಿ ಉಪಸ್ಥಿತರಿದ್ದ ಆದಿಜಾಂಬವ ಮಠದ ಶ್ರೀ ಷಡಾಕ್ಷರಮುನಿ ಶ್ರೀಗಳು ಮಾತನಾಡಿ, ಈ ಸರ್ಕಾರದಲ್ಲಿ ಉಪ ಮುಖ್ಯಮಂತ್ರಿ ಹುದ್ದೆ ಸೃಷ್ಟಿಯಾದಲ್ಲಿ ಅದನ್ನು ಮಾದಿಗ ಜನಾಂಗದ ಹಿರಿಯವರಾದ ಮುನಿಯಪ್ಪರವರಿಗೆ ನೀಡಬೇಕು, ಇತರೆ ಶಾಸಕರಿಗೆ ಜವಾಬ್ದಾರಿಯುತ ಹುದ್ದೆಯನ್ನು ನೀಡುವುದರ ಮೂಲಕ ಅವರನ್ನು ಗೌರಯುತವಾಗಿ ಕಾಣಬೇಕಿದೆ. ಪಕ್ಷ ಅಧಿಕಾರಕ್ಕೆ ಮಾದಿಗ ಸಮುದಾಯ ಬೆಂಬಲವನ್ನು ನೀಡಿದೆ. ಇದನ್ನು ಪಕ್ಷದವರು ಮರೆಯಬಾರದು ಎಂದರು.

ಕರ್ನಾಟಕ ರಾಜ್ಯ ಮಾತಂಗ ಪೌಡೇಷನ್ ಅಧ್ಯಕ್ಷ ಲೋಕೇಶ್ ಮಾತನಾಡಿ, 2018ರ ಚುನಾವಣೆಯಲ್ಲಿ ಮಾದಿಗ ಜನಾಂಗ ಕಾಂಗ್ರೆಸ್ ಪಕ್ಷವನ್ನು ಕೈಹಿಡಿಯದಿದ್ದರಿಂದ ಅಧಿಕಾರಕ್ಕೆ ಬರಲಿಲ್ಲ ಆದರೆ ಈಗ ನಮ್ಮ ಜನಾಂಗ ಪೂರ್ಣ ಪ್ರಮಾಣದಲ್ಲಿ ಕಾಂಗ್ರೆಸ್ ಪಕ್ಷವನ್ನು ಬೆಂಬಲಿಸಿದ್ದಾರೆ. ಇದಕ್ಕೆ ಪ್ರತಿಯಾಗಿ ಪಕ್ಷ ನಮ್ಮ ಇಬ್ಬರು ನಾಯಕರನ್ನು ಸಚಿವರನ್ನಾಗಿ ಮಾಡಬೇಕಿದೆ ಎಂದು ತಿಳಿಸಿದರು.

ನಮ್ಮ ಸಮಾಜ ಹಿಂದುಳಿದ ಸಮಾಜವಾಗಿದೆ. ಚುನಾಯಿತರಿಗೆ ಗೌರಯುತವಾದ ಸ್ಥಾನ ಮತ್ತು ಗೌರವನ್ನು ನೀಡಬೇಕಿದೆ. ರಾಷ್ಟ್ರ ರಾಜಕಾರಣದಲ್ಲಿಂದ ಮುನಿಯಪ್ಪರವರು ರಾಜ್ಯ ರಾಜಕಾರಣಕ್ಕೆ ಬಂದಿದ್ದರಿಂದ ಕಾಂಗ್ರೆಸ್ ಪಕ್ಷಕ್ಕೆ ಇಷ್ಟೊಂದು ಸ್ಥಾನಗಳು ಬರಲು ಸಾದ್ಯವಾಯಿತು ಎಂಧರು.
ಗೋಷ್ಟಿಯಲ್ಲಿ ಪ್ರಸನ್ನ, ರವಿ, ಕುಮಾರ, ಮಂಜುನಾಥ್, ಲಕ್ಷ್ಮೀರಂಗಯ್ಯ, ವೆಂಕಟೇಶ್ ಸೇರಿದಂತೆ ಇತರರು ಭಾಗವಹಿಸಿದ್ದರು.

Facebook
Twitter
Telegram
WhatsApp
suddionenews

suddionenews

Leave a Comment

Top Stories

ಈ ರಾಶಿಯವರ ವೃತ್ತಿ ಕ್ಷೇತ್ರದಲ್ಲಿ ಯಾರೋ ಮಾಡಿರೋ ತಪ್ಪಿಗೆ ನೀವೇ ನೇರ ಹೊಣೆಗಾರಿಕೆ

ಈ ರಾಶಿಯವರ ವೃತ್ತಿ ಕ್ಷೇತ್ರದಲ್ಲಿ ಯಾರೋ ಮಾಡಿರೋ ತಪ್ಪಿಗೆ ನೀವೇ ನೇರ ಹೊಣೆಗಾರಿಕೆ, ಈ ಪಂಚ ರಾಶಿಗಳ ಮದುವೆ ವಿಳಂಬವೇ? ಶನಿವಾರ ರಾಶಿ ಭವಿಷ್ಯ -ಏಪ್ರಿಲ್-27,2024 ಸೂರ್ಯೋದಯ: 05:56, ಸೂರ್ಯಾಸ್ತ : 06:31 ಶಾಲಿವಾಹನ

ಆ ಕುಗ್ರಾಮ ಒಂದರಲ್ಲೇ 100% ಮತದಾನ : ಎಲ್ಲಿ, ಎಷ್ಟೆಷ್ಟು ಮತದಾನವಾಗಿದೆ..?

ಬೆಂಗಳೂರು: ಇಂದು ಕರ್ನಾಟಕದಲ್ಲಿ ಮೊದಲ ಹಂತದ ಲೋಕಸಭಾ ಚುನಾವಣೆ ನಡೆದಿದೆ. ಬೆಳಗ್ಗೆ 7 ಗಂಟೆಗೆ ಶುರುವಾದ ಮತದಾನ ಸಂಜೆ 5 ಗಂಟೆಗೆ ಮುಕ್ತಾಯವಾಗಿದೆ. ಬೇಸರದ ಸಂಗತಿ ಎಂದರೆ ಈ ಬಾರಿಯೂ ಸಂಪೂರ್ಣ ಮತದಾನವಾಗಿಲ್ಲ. ಪ್ರತಿ

ಚಿತ್ರದುರ್ಗ ಲೋಕಸಭಾ ಕ್ಷೇತ್ರದಲ್ಲಿ ಶೇ.72.74 ಮತದಾನ : ಕ್ಷೇತ್ರವಾರು ಮಾಹಿತಿ…!

  ಸುದ್ದಿಒನ್, ಚಿತ್ರದುರ್ಗ, ಏಪ್ರಿಲ್. 26 :   ಚಿತ್ರದುರ್ಗ ಲೋಕಸಭಾ ಕ್ಷೇತ್ರದಲ್ಲಿ ಇಂದು ಜರುಗಿದ ಮತದಾನದಲ್ಲಿ ಶೇ.72.74 ದಾಖಲಾಗಿದೆ‌. ವಿಧಾನ ಸಭಾ ಕ್ಷೇತ್ರವಾರು ಮತಾದನ ವಿವರ ಚಳ್ಳಕೆರೆ – 72.19%, ಚಿತ್ರದುರ್ಗ-70.42%, ಹಿರಿಯೂರು-71.49% ,

error: Content is protected !!