Kannada news ಚಿತ್ರದುರ್ಗ ದಾವಣಗೆರೆ ಬೆಂಗಳೂರು ರಾಜಕೀಯ ಚುನಾವಣೆ ಮಳೆ ಕ್ರಿಕೆಟ್ ಭಾರತ ಚಿನ್ನ ಬೆಳ್ಳಿ ಹವಾಮಾನ ಕ್ರಿಕೆಟ್  ಕನ್ನಡ ನ್ಯೂಸ್

ಸವಿತಾ ಸಮಾಜಕ್ಕೆ ಎಸ್ಸಿ ಮೀಸಲಾತಿ ನೀಡಿ : ಮುಖಂಡರಿಂದ ಮುಖ್ಯಮಂತ್ರಿಗೆ ಮನವಿ

---Advertisement---

 

ವರದಿ ಮತ್ತು ಫೋಟೋ ಕೃಪೆ ಕೆ.ಎಂ.ಮುತ್ತುಸ್ವಾಮಿ ಕಣ್ಣನ್,  ಮೊ : 78998 64552

ಸುದ್ದಿಒನ್, ಚಿತ್ರದುರ್ಗ, ನವಂಬರ್. 07 : ಆರ್ಥಿಕ, ಸಾಮಾಜಿಕ, ಶೈಕ್ಷಣಿಕ, ರಾಜಕೀಯವಾಗಿ ಹಿಂದುಳಿದಿರುವ ಸವಿತಾ ಸಮಾಜಕ್ಕೆ ಎಸ್ಸಿ. ಮೀಸಲಾತಿ ನೀಡಬೇಕು. ನಮ್ಮ ಮೇಲೆ ಜಾತಿನಿಂದನೆ ಮಾಡುವವರ ವಿರುದ್ದ ಕೇಸು ದಾಖಲಿಸುವಂತೆ ಕಾಯಿದೆ ಜಾರಿಗೆ ತರಬೇಕೆಂದು ಜಿಲ್ಲಾ ಹಾಗೂ ತಾಲ್ಲೂಕು ಸವಿತಾ ಸಮಾಜದಿಂದ ಮಂಗಳವಾರ ಅಪರ ಜಿಲ್ಲಾಧಿಕಾರಿ ಹಾಗೂ ತಹಶೀಲ್ದಾರ್ ಮೂಲಕ ರಾಜ್ಯದ ಮುಖ್ಯಮಂತ್ರಿಗೆ ಮನವಿ ಸಲ್ಲಿಸಲಾಯಿತು.

ಕುಲಕಸುಬನ್ನೆ ನೆಚ್ಚಿಕೊಂಡು ಇಂದಿಗೂ ಬದುಕುತ್ತಿರುವ ಸವಿತಾ ಸಮಾಜ ಕೊರೋನಾ ಸಂದರ್ಭದಲ್ಲಿ ದುಡಿಮೆಯಿಲ್ಲದೆ ಸಾಕಷ್ಟ ಸಂಕಟ ಎದುರಿಸಬೇಕಾಯಿತು. ಹಾಗಾಗಿ ನಮ್ಮ ಸಮಾಜವನ್ನು ಪರಿಶಿಷ್ಟ ಜಾತಿಗೆ ಸೇರಿಸುವಂತೆ ಈ ಹಿಂದೆಯೂ ಮನವಿ ಮಾಡಿಕೊಂಡಿದ್ದರೂ ರಾಜ್ಯ ಸರ್ಕಾರದಿಂದ ಸ್ಪಂದನೆಯಿಲ್ಲ. ರಾಜ್ಯದ ಮುಖ್ಯಮಂತ್ರಿ ಸಿದ್ದರಾಮಯ್ಯನವರು ಈ ವಿಚಾರವನ್ನು ಗಂಭೀರವಾಗಿ ಪರಿಗಣಿಸುವಂತೆ ವಿನಂತಿಸಿದರು.

ಸವಿತಾ ಸಮಾಜದ ಜಿಲ್ಲಾ ಪ್ರಧಾನ ಕಾರ್ಯದರ್ಶಿ ಎನ್.ಡಿ.ಕುಮಾರ್, ಆರ್.ಶ್ರೀನಿವಾಸ್, ಎನ್.ಶ್ರೀನಿವಾಸ್, ನಾಗರಾಜು, ಘನಶ್ಯಾಂ, ರಂಜಿತ, ಬೆಳಗಟ್ಟ ಶ್ರೀನಿವಾಸ್, ಧರ್ಮಣ್ಣ, ಸಾಯಿನಾಥ್ ಇನ್ನು ಮುಂತಾದವರು ಈ ಸಂದರ್ಭದಲ್ಲಿ ಹಾಜರಿದ್ದರು.

suddionenews

ಕನ್ನಡ ಸುದ್ದಿಗಳ ವಿಶ್ವಾಸಾರ್ಹ ಮೂಲ — suddione.com ನಲ್ಲಿ ಓದಿ ರಾಷ್ಟ್ರೀಯ, ಅಂತರರಾಷ್ಟ್ರೀಯ, ರಾಜಕೀಯ, ಕ್ರೀಡೆ, ಮನರಂಜನೆ, ವಾಣಿಜ್ಯ, ಶಿಕ್ಷಣ ಮತ್ತು ತಂತ್ರಜ್ಞಾನಕ್ಕೆ ಸಂಬಂಧಿಸಿದ ಪ್ರತಿಯೊಂದು ಪ್ರಮುಖ ಅಪ್‌ಡೇಟ್. ನೀವು ಯಾವಾಗಲೂ ಅಪ್‌ಡೇಟ್ ಆಗಿರಲು ನಾವು ವೇಗವಾದ, ನಿಖರವಾದ ಮತ್ತು ನಿಷ್ಪಕ್ಷಪಾತವಾದ ಸುದ್ದಿಗಳನ್ನು ಸರಳ ಹಾಗೂ ಸ್ಪಷ್ಟ ಭಾಷೆಯಲ್ಲಿ ನೀಡುತ್ತೇವೆ. ಸಂಪಾದಕರು: ನಾಗೇಂದ್ರ ರೆಡ್ಡಿ ಪಿ.ಎಲ್

Join WhatsApp

Join Now

Join Telegram

Join Now

ಮಿಸ್ ಮಾಡ್ದೆ ಓದಿ

Leave a Comment