Kannada news ಚಿತ್ರದುರ್ಗ ದಾವಣಗೆರೆ ಬೆಂಗಳೂರು ರಾಜಕೀಯ ಚುನಾವಣೆ ಮಳೆ ಕ್ರಿಕೆಟ್ ಭಾರತ ಚಿನ್ನ ಬೆಳ್ಳಿ ಹವಾಮಾನ ಕ್ರಿಕೆಟ್  ಕನ್ನಡ ನ್ಯೂಸ್

ವಿದ್ಯಾರ್ಥಿಗಳು ಪಠ್ಯಕ್ಕೆ ನೀಡುವ ಮಹತ್ವವನ್ನು ಕ್ರೀಡೆಗೂ ನೀಡಿ : ಕೆ.ಎಂ.ವೀರೇಶ್

---Advertisement---

ಸುದ್ದಿಒನ್, ಚಿತ್ರದುರ್ಗ, ಜೂನ್. 30 : ಕ್ರೀಡೆಯಿಂದ ವಿದ್ಯಾರ್ಥಿಗಳಲ್ಲಿ ಮಾನಸಿಕ ಹಾಗೂ ದೈಹಿಕ ಸದೃಢತೆ ಹೆಚ್ಚಿಸುತ್ತದೆ ಎಂದು ಬಾಪೂಜಿ ಸಮೂಹ ಶಿಕ್ಷಣದ ಕಾರ್ಯದರ್ಶಿ ಡಾ.ಕೆ.ಎಂ.ವೀರೇಶ್ ತಿಳಿಸಿದರು.

ನಗರದ ಪಿಳ್ಳೇಕೆರನಹಳ್ಳಿಯಲ್ಲಿರುವ ಕೆ.ಎಂ.ಎಸ್.ಪಿಯು ಕಾಲೇಜಿನಲ್ಲಿ ಶನಿವಾರ ಆಯೋಜಿಸಿದ ಕ್ರೀಡಾ ಕೂಟದಲ್ಲಿ ಕ್ರೀಡಾ ಜ್ಯೋತಿ ಬೆಳಗಿಸಿ ಉದ್ಘಾಟಿಸಿ ಮಾತನಾಡಿದರು.
ಕ್ರೀಡೆ ಮಾನವನಲ್ಲಿ ನಿರತಂತರ ಕ್ರಿಯಾಶೀಲತೆಯಾ ಜೊತೆಗೆ ನವಚೈತನ್ಯವನ್ನು ಉಂಟು ಮಾಡುತ್ತದೆ. ಸತತವಾಗಿ ಕ್ರೀಡೆಯಲ್ಲಿ ತೊಡಗಿಸಿಕೊಳ್ಳುವುದರಿಂದ ಮುಪ್ಪಿನ ಸಮಯದಲ್ಲಿ ಉತ್ತಮ ಆರೋಗ್ಯ ಕಾಪಾಡಿಕೊಳ್ಳಲು ಸಹಕಾರಿಯಾಗುತ್ತದೆ. ವಿದ್ಯಾರ್ಥಿಗಳು ಪಠ್ಯಕ್ಕೆ ನೀಡುವ ಮಹತ್ವವನ್ನು ಕ್ರೀಡೆಗೂ ನೀಡಿ ಸದೃಢ ಪ್ರಜೆಗಳಾಗಬೇಕೆಂದು ತಿಳಿಸಿದರು.

 

ವಿಷನ್ ಅಕಾಡೆಮಿಯ ಮುಖ್ಯೆಸ್ಥರಾದ ಲೋಕೆಶ್ ಅವರು ಮಾತನಾಡಿ, ವ್ಯಕ್ತಿಯ ವ್ಯಕ್ತಿವ ಹಾಗೂ ಫೀಟ್ನಸ್ ರೂಪಿಸುವಲ್ಲಿ ಕ್ರೀಡೆಗಳು ಪ್ರಮುಖ ಪಾತ್ರ ವಹಿಸುತ್ತವೇ. ವಿದ್ಯಾರ್ಥಿಗಳು ಈ ಮೂಲಕ ನಿಜವಾದ ಜಾಗತಿಕ ಅನುಭವವನ್ನು ಪಡೆಯಲು ಸಹಕಾರಿಯಾಗುತ್ತದೆ ಎಂದರು.
ಕೆ.ಎಂ.ಎಸ್.ಪಿಯು ಕಾಲೇಜಿನ ಪ್ರಾಚಾರ್ಯರಾದ ವೀರೇಶ್, ಬಾಪೂಜಿ ಶಿಕ್ಷಣ ಮಹಾವಿದ್ಯಾಲಯದ ಪ್ರಾಚಾರ್ಯರಾದ ಜಯಲಕ್ಷ್ಮೀ, ವಿಷನ್ ಅಕಾಡೆಮಿಯ ಆಡಳಿತಾಧಿಕಾರಿಗಳಾದ ಜ್ಞಾನದೇವ.ಸಿ.ಪಿ, ಬಾಪೂಜಿ ಪದವಿ ಕಾಲೇಜಿನ ಪ್ರಾಚಾರ್ಯೆ ಡಾ.ಮಂಜುಳ ಹಾಗೂ ಉಪನ್ಯಾಸಕ ವರ್ಗ ಮತ್ತಿತರರು ಇದ್ದರು.

suddionenews

ಕನ್ನಡ ಸುದ್ದಿಗಳ ವಿಶ್ವಾಸಾರ್ಹ ಮೂಲ — suddione.com ನಲ್ಲಿ ಓದಿ ರಾಷ್ಟ್ರೀಯ, ಅಂತರರಾಷ್ಟ್ರೀಯ, ರಾಜಕೀಯ, ಕ್ರೀಡೆ, ಮನರಂಜನೆ, ವಾಣಿಜ್ಯ, ಶಿಕ್ಷಣ ಮತ್ತು ತಂತ್ರಜ್ಞಾನಕ್ಕೆ ಸಂಬಂಧಿಸಿದ ಪ್ರತಿಯೊಂದು ಪ್ರಮುಖ ಅಪ್‌ಡೇಟ್. ನೀವು ಯಾವಾಗಲೂ ಅಪ್‌ಡೇಟ್ ಆಗಿರಲು ನಾವು ವೇಗವಾದ, ನಿಖರವಾದ ಮತ್ತು ನಿಷ್ಪಕ್ಷಪಾತವಾದ ಸುದ್ದಿಗಳನ್ನು ಸರಳ ಹಾಗೂ ಸ್ಪಷ್ಟ ಭಾಷೆಯಲ್ಲಿ ನೀಡುತ್ತೇವೆ. ಸಂಪಾದಕರು: ನಾಗೇಂದ್ರ ರೆಡ್ಡಿ ಪಿ.ಎಲ್

Join WhatsApp

Join Now

Join Telegram

Join Now

Leave a Comment